ವಿಶ್ವ ಆರೋಗ್ಯ ಸಂಸ್ಥೆಗೆ ಹಣಕಾಸು ನೆರವು ಸ್ಥಗಿತಗೊಳಿಸಿದ ಅಮೆರಿಕಾ

ಕೋವಿಡ್ ವೈರಸ್ ನಿಯಂತ್ರಿಸುವಲ್ಲಿ ವಿಶ್ವ ಆರೋಗ್ಯ ಸಂಸ್ಥೆ ವಿಫ‌ಲ: ಟ್ರಂಪ್‌ ಕಿಡಿ

Team Udayavani, Apr 16, 2020, 5:53 AM IST

ವಿಶ್ವ ಆರೋಗ್ಯ ಸಂಸ್ಥೆಗೆ ಹಣಕಾಸು ನೆರವು ಸ್ಥಗಿತಗೊಳಿಸಿದ ಅಮೆರಿಕಾ

ವಾಷಿಂಗ್ಟನ್‌: ಮಾರಣಾಂತಿಕ ಕೋವಿಡ್ 19 ವೈರಸ್‌ ಸಾಂಕ್ರಾಮಿಕವನ್ನು ನಿಯಂತ್ರಿಸುವಲ್ಲಿ ವಿಫ‌ಲವಾಗಿರುವುದರಿಂದ ವಿಶ್ವ ಆರೋಗ್ಯ ಸಂಸ್ಥೆಗೆ (ಡಬ್ಲ್ಯುಎಚ್‌ಓ) ತಾತ್ಕಾಲಿಕವಾಗಿ ಹಣಕಾಸು ನೆರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಘೋಷಿಸಿದ್ದಾರೆ.

ಶ್ವೇತಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ 19 ವೈರಸ್ ನಿಯಂತ್ರಣ ನಿಟ್ಟಿನಲ್ಲಿ ತನ್ನ ಕರ್ತವ್ಯ ನಿರ್ವಹಿಸುವಲ್ಲಿ ವಿಶ್ವ ಆರೋಗ್ಯ ಸಂಸ್ಥೆ ವಿಫ‌ಲವಾಗಿದೆ. ಇದಕ್ಕೆ ಸಂಸ್ಥೆ ಜವಾಬ್ದಾರಿ ಹೊರಬೇಕಿದೆ.

ಹೀಗಾಗಿ, ಸಂಸ್ಥೆಗೆ ಹಣಕಾಸು ನೆರವನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅಲ್ಲದೆ, ಕೋವಿಡ್ ವೈರಸ್ ಸಾಂಕ್ರಾಮಿಕವನ್ನು ನಿಗ್ರಹಿಸುವಲ್ಲಿ ಸಂಸ್ಥೆಯ ಪಾತ್ರದ ಬಗ್ಗೆ ಪುನರ್‌ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

ಚೀನದಲ್ಲಿ ಮೊದಲ ಬಾರಿಗೆ ಸೋಂಕು ಕಾಣಿಸಿಕೊಂಡ ನಂತರ ಅದು ವೇಗವಾಗಿ ಹಬ್ಬುತ್ತಿರುವ ಬಗ್ಗೆ ಸಂಸ್ಥೆ ಮೊದಲೇ ಎಚ್ಚರಿಕೆ ನೀಡಬೇಕಿತ್ತು. ಆದರೆ, ಈ ಬಗ್ಗೆ ಸರಿಯಾದ ಮುನ್ನೆಚ್ಚರಿಕೆ ನೀಡುವಲ್ಲಿ, ನಿಗಾ ವಹಿಸುವಲ್ಲಿ ಅದು ವಿಫ‌ಲವಾಗಿದೆ.

ಚೀನದಲ್ಲಿನ ವಸ್ತು ಸ್ಥಿತಿಯನ್ನು ತಿಳಿಯಲು, ಅಲ್ಲಿನ ಪಾರದರ್ಶಕತೆಯ ಕೊರತೆಯನ್ನು ಅರಿಯಲು ವೈದ್ಯಕೀಯ ತಜ್ಞರನ್ನು ಕಳುಹಿಸಿದ್ದರೆ ವಿಶ್ವದ ಇತರ ರಾಷ್ಟ್ರಗಳಿಗೆ ಸೋಂಕು ಹರಡುವುದನ್ನು, ಇದರಿಂದಾಗುವ ಆರ್ಥಿಕ ನಷ್ಟವನ್ನು ತಡೆಯಬಹುದಿತ್ತು ಎಂದು ಅವರು ಆರೋಪಿಸಿದ್ದಾರೆ. ಅಮೆರಿಕ ಪ್ರತಿ ವರ್ಷ 400-500 ಮಿಲಿಯನ್‌ ಡಾಲರ್‌ನ್ನು (3057-3821 ಕೋಟಿ ರೂ.) ಡಬ್ಲ್ಯುಎಚ್‌ಓಗೆ ನೀಡುತ್ತದೆ.

ಸ್ಥಗಿತ ನಿರ್ಧಾರ ಸರಿಯಲ್ಲ

ಟ್ರಂಪ್‌ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟಾನಿಯೋ ಗುಟೆರಸ್‌, ಕೋವಿಡ್ ಸಂಕಷ್ಟದ ಈ ಸಮಯದಲ್ಲಿ ವಿಶ್ವ ಆರೋಗ್ಯ ಸಂಸ್ಥೆಗೆ ಹಣಕಾಸು ನೆರವು ಸ್ಥಗಿತಗೊಳಿಸುವ ಅಮೆರಿಕದ ನಿಲುವು ಸರಿಯಲ್ಲ.

ಇಡೀ ವಿಶ್ವವೇ ಮಾರಕ ಕೋವಿಡ್ ವೈರಸ್ ವಿರುದ್ಧ ಹೋರಾಡುತ್ತಿದೆ. ಇಂತಹ ಸಂದರ್ಭದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಪಾತ್ರ ಮಹತ್ವದ್ದು. ಸಂಸ್ಥೆಯ ಕಾರ್ಯ ಮತ್ತು ಯೋಜನೆಗಳಿಗೆ ಅಡ್ಡಿಯಾಗಬಾರದು. ಸಂಸ್ಥೆಗೆ ಎಲ್ಲರೂ ಬೆಂಬಲವಾಗಿ ನಿಲ್ಲ ಬೇಕು. ಕೋವಿಡ್ ವೈರಸ್ ವಿರುದ್ಧ ಸಾಂಘಿಕ ಹೋರಾಟ ಅಗತ್ಯ ಎಂದು ಹೇಳಿದ್ದಾರೆ.

ಆರು ದಿನಗಳವರೆಗೂ ಎಚ್ಚರಿಕೆ ನೀಡದ ಚೀನ
ವುಹಾನ್‌: ಆರು ನಿರ್ಣಾಯಕ ದಿನಗಳವರೆಗೂ ಚೀನ, ಕೋವಿಡ್ ಸಾಂಕ್ರಾಮಿಕದ ಬಗ್ಗೆ ಜನರಿಗೆ ಎಚ್ಚರಿಕೆಯನ್ನೇ ನೀಡಲಿಲ್ಲ. ಇಲ್ಲಿಯ ಜನ ಅಪಾಯಕಾರಿ ಸಾಂಕ್ರಾಮಿಕದ ವಿಪತ್ತನ್ನು ಎದುರಿಸುತ್ತಿದ್ದಾರೆ ಎಂಬುದನ್ನು ಅಧಿಕಾರಿಗಳು ಮನಗಂಡರೂ, ಜನರಿಗೆ ಬಹಿರಂಗವಾಗಿ ಮಾಹಿತಿ ನೀಡುವ ಮನಸ್ಸು ಮಾಡಲಿಲ್ಲ.

ಈ ನಿರ್ಣಾಯಕ ದಿನಗಳಲ್ಲೇ ವುಹಾನ್‌ನಲ್ಲಿ ಸಾವಿರಾರು ಮಂದಿಗೆ ಔತಣಕೂಟ ಏರ್ಪಡಿಸಲಾಗಿತ್ತು. ಹೊಸ ವರ್ಷದ ಆಚರಣೆಗಾಗಿ ಲಕ್ಷಾಂತರ ಮಂದಿ ಬಸ್‌, ರೈಲು, ವಿಮಾನಗಳಲ್ಲಿ ಪ್ರಯಾಣ ಬೆಳೆಸಿದ್ದರು.

ಪರಿಸ್ಥಿತಿ ಕೈಮೀರುತ್ತಿದೆ ಎಂಬುದನ್ನು ಮನಗಂಡ ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌, 7ನೇ ದಿನ, ಅಂದರೆ, ಜನವರಿ 20ರಂದು ಜನರಿಗೆ ಈ ಬಗ್ಗೆ ಬಹಿರಂಗವಾಗಿ ಎಚ್ಚರಿಕೆ ನೀಡಿದರು. ಆದರೆ, ಅದಾಗಲೇ ಪರಿಸ್ಥಿತಿ ಕೈಮೀರಿತ್ತು. 3 ಸಾವಿರಕ್ಕೂ ಅಧಿಕ ಮಂದಿಯನ್ನು ಕೋವಿಡ್ ಸೋಂಕು ಆವರಿಸಿತ್ತು ಎಂಬ ಸಂಗತಿಯನ್ನು ಅಸೋಸಿಯೇಟೆಡ್‌ ಪ್ರೆಸ್‌ಗೆ ಸಿಕ್ಕಿರುವ ರಹಸ್ಯ ದಾಖಲೆಗಳು ಬಹಿರಂಗಪಡಿಸಿವೆ.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.