ಕೋವಿಡ್ ಸೋಂಕಿನ ವರ್ತನೆಯೇ ಬದಲು! ; ವುಹಾನ್‌, ಈಶಾನ್ಯ ಚೀನದಲ್ಲಿ ಭಿನ್ನ ಪ್ರಕರಣಗಳು


Team Udayavani, May 22, 2020, 1:50 AM IST

ಕೋವಿಡ್ ಸೋಂಕಿನ ವರ್ತನೆಯೇ ಬದಲು! ; ವುಹಾನ್‌, ಈಶಾನ್ಯ ಚೀನದಲ್ಲಿ ಭಿನ್ನ ಪ್ರಕರಣಗಳು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೀಜಿಂಗ್‌: ಕೋವಿಡ್ ವೈರಸ್‌ ಎಂಬ ಮಹಾಮಾರಿಯ ಸೃಷ್ಟಿಯಿಂದ ಆರಂಭಿಕ ಆಘಾತ ಎದುರಿಸಿದ್ದ ಚೀನಗೆ ಈಗ ಹೊಸ ಸವಾಲೊಂದು ಎದುರಾಗಿದೆ.

ಚೀನದಲ್ಲಿ ಎರಡನೇ ಹಂತದಲ್ಲಿ ಸೋಂಕು ವ್ಯಾಪಿಸುತ್ತಿದ್ದು, ಮೊದಲ ಹಂತದಲ್ಲಿ ವುಹಾನ್‌ ನಲ್ಲಿ ಕಾಣಿಸಿಕೊಂಡಿದ್ದ ಸೋಂಕಿಗೂ, ಈಗ ಈಶಾನ್ಯ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಸೋಂಕಿಗೂ ಭಾರೀ ವ್ಯತ್ಯಾಸಗಳು ಕಂಡುಬರುತ್ತಿದೆ.

ಈಶಾನ್ಯ ಭಾಗದಲ್ಲಿ ಕೋವಿಡ್ ವೈರಸ್‌ ಭಿನ್ನವಾಗಿ ವರ್ತಿಸುತ್ತಿದ್ದು, ಅದನ್ನು ನಿಯಂತ್ರಿಸುವ ಪ್ರಯತ್ನವೇ ಸಂಕೀರ್ಣಗೊಳ್ಳುತ್ತಿರುವುದು ಚೀನಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಅಲ್ಲದೆ, ಈ ಬೆಳವಣಿಗೆಯು ಸೋಂಕು ವ್ಯಾಪಿಸುತ್ತಾ ಹೋದಂತೆ, ವೈರಸ್‌ನ ವರ್ತನೆಯಲ್ಲಿ ಬದಲಾವಣೆ ಆಗುತ್ತಾ ಸಾಗುತ್ತದೆ ಎಂಬ ಹೊಸ ಸುಳಿವನ್ನು ಕೂಡ ತಜ್ಞರಿಗೆ ನೀಡಿದೆ.

ಬೇಗನೆ ಗುಣವಾಗುವುದಿಲ್ಲ: ಸೋಂಕಿಗೆ ಕಡಿವಾಣ ಹಾಕುವಲ್ಲಿ ಚೀನ ಬಹುತೇಕ ಯಶಸ್ವಿಯಾಗಿತ್ತು. ಆದರೆ, ಇತ್ತೀಚೆಗೆ ಅಲ್ಲಿ ಮತ್ತೆ ಸೋಂಕು ಕಾಣಿಸಿಕೊಳ್ಳಲಾರಂಭಿಸಿದೆ.

ಅದರಲ್ಲೂ, ಜಿಲಿನ್‌ ಮತ್ತು ಹೆಲಾಂಗ್‌ ಜಿಯಾಂಗ್‌ ಪ್ರಾಂತ್ಯಗಳಲ್ಲಿ ಕೋವಿಡ್ ಸೋಂಕಿತರ ದೇಹದಲ್ಲಿ ಸೋಂಕು ದೀರ್ಘ‌ಕಾಲ ಉಳಿಯುತ್ತಿದೆ ಮಾತ್ರವಲ್ಲ, ರೋಗಿಗಳು ಕೂಡ ಗುಣಮುಖರಾಗಲು ಬಹಳಷ್ಟು ಸಮಯ ತಗಲುತ್ತಿದೆ ಎಂದು ಇಲ್ಲಿನ ವೈದ್ಯಕೀಯ ತಜ್ಞರು ತಿಳಿಸಿದ್ದಾರೆ.

ವುಹಾನ್‌ ನಲ್ಲಿ ಕಂಡುಬಂದ ಸೋಂಕು ಒಬ್ಬ ವ್ಯಕ್ತಿಯ ದೇಹಕ್ಕೆ ಸೇರಿಕೊಂಡ ಒಂದೆರಡು ವಾರಗಳಲ್ಲೇ ರೋಗ ಲಕ್ಷಣ ಕಾಣಿಸಿಕೊಳ್ಳುತ್ತಿತ್ತು. ಆದರೆ, ಈ ಪ್ರಾಂತ್ಯಗಳಲ್ಲಿ ಕೋವಿಡ್ ಸೋಂಕಿತನಿಗೆ ರೋಗ ಲಕ್ಷಣ ಕಂಡುಬರುತ್ತಲೇ ಇಲ್ಲ, ಇನ್ನೂ ಕೆಲವರಿಗೆ ದೀರ್ಘಾವಧಿಯ ಬಳಿಕ ಕಂಡುಬರುತ್ತಿವೆ.

ಹೀಗಾಗಿ, ಸೋಂಕಿತರನ್ನು ಹಾಗೂ ಸಂಪರ್ಕಿತರನ್ನು ಪತ್ತೆಹಚ್ಚುವಷ್ಟರಲ್ಲೇ ಅದು ಸಾಕಷ್ಟು ಮಂದಿಗೆ ಹಬ್ಬಿಯಾಗಿರುತ್ತದೆ ಎಂದೂ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ರಷ್ಯಾದಿಂದ ಆಮದಾಯಿತೇ?
ವುಹಾನ್‌ನ ರೋಗಿಗಳಲ್ಲಿ ಹೃದಯ, ಕಿಡ್ನಿ ಸೇರಿದಂತೆ ಬಹು ಅಂಗ ವೈಫ‌ಲ್ಯವಾದಂಥ ಪ್ರಕರಣಗಳೇ ಹೆಚ್ಚಿದ್ದವು. ಆದರೆ, ಈಶಾನ್ಯದ ರೋಗಿಗಳಲ್ಲಿ ಶ್ವಾಸಕೋಶಕ್ಕೆ ಹಾನಿಯಾಗುವಂಥ ಪ್ರಕರಣಗಳೇ ಹೆಚ್ಚಿವೆ ಎನ್ನುವುದನ್ನು ವೈದ್ಯರು ಕೂಡ ಪತ್ತೆಹಚ್ಚಿದ್ದಾರೆ.

ಇದೇ ವೇಳೆ, ಈಶಾನ್ಯ ಭಾಗದ ಕ್ಲಸ್ಟರ್‌ಗಳಲ್ಲಿ ಕಂಡುಬರುತ್ತಿರುವ ವೈರಸ್‌ ವಿದೇಶಗಳಿಂದ ಬಂದಿದ್ದಿರಬಹುದೇ ಎಂಬ ಅನುಮಾನವನ್ನೂ ಅವರು ವ್ಯಕ್ತಪಡಿಸಿದ್ದಾರೆ. ಜಿಲಿನ್‌ ಮತ್ತು ಹೆಲಾಂಗ್‌ ಜಿಯಾಂಗ್‌ ಎರಡೂ ಪ್ರಾಂತ್ಯಗಳೂ ರಷ್ಯಾದೊಂದಿಗೆ ಗಡಿ ಹಂಚಿಕೊಂಡಿವೆ. ಹಾಗಾಗಿ ರಷ್ಯಾದಿಂದ ಬಂದ ಸೋಂಕಿತರಿಂದಾಗಿ ಈ ಪ್ರದೇಶಗಳಲ್ಲಿ ಸೋಂಕು ವ್ಯಾಪಿಸಿರಲೂಬಹುದು ಎಂದಿದ್ದಾರೆ.

ಬುಧವಾರ ಚೀನದಲ್ಲಿ ಒಟ್ಟು 5 ಕೋವಿಡ್ ಪ್ರಕರಣಗಳು ಕಂಡುಬಂದಿವೆ. ಈ ಪೈಕಿ 4 ಸ್ಥಳೀಯವಾಗಿ ಹಬ್ಬಿದ್ದರೆ, ಒಂದು ಪ್ರಕರಣದಲ್ಲಿ ವಿದೇಶದಿಂದ ಆಗಮಿಸಿದ ವ್ಯಕ್ತಿಗೆ ಸೋಂಕು ತಗುಲಿದೆ.
ದೇಶದಲ್ಲಿ ಈವರೆಗೆ 82,965 ಮಂದಿಗೆ ಸೋಂಕು ದೃಢಪಟ್ಟಿದ್ದು, 4,634 ಮಂದಿ ಸಾವಿಗೀಡಾಗಿದ್ದಾರೆ.

ಟಾಪ್ ನ್ಯೂಸ್

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.