ಕೋವಿಡ್ 19 ವೈರಸ್ ಸೋಂಕು ದ್ವಿಗುಣಗೊಳ್ಳುವ ಅವಧಿ ಇಳಿಕೆ ; ಮೊದಲು 3 ದಿನ; ಈಗ 6.2 ದಿನ

ಇದು ಲಾಕ್‌ಡೌನ್‌ ಎಫೆಕ್ಟ್ ಎಂದ ಕೇಂದ್ರ ಸರಕಾರ

Team Udayavani, Apr 18, 2020, 5:28 AM IST

ಕೋವಿಡ್ 19 ವೈರಸ್ ಸೋಂಕು ದ್ವಿಗುಣಗೊಳ್ಳುವ ಅವಧಿ ಇಳಿಕೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ಸಂಕಷ್ಟದ ನಡುವೆಯೂ ಭರವಸೆಯ ಆಶಾಕಿರಣ ಎಂಬಂತೆ ದೇಶದಲ್ಲಿ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ ದ್ವಿಗುಣಗೊಳ್ಳುವ ಅವಧಿಯು ಕಳೆದೊಂದು ವಾರದಿಂದ 6.2 ದಿನಗಳಿಗೆ ಇಳಿಕೆಯಾಗಿದೆ. ಅದಕ್ಕೂ ಮೊದಲು ಅಂದರೆ ಲಾಕ್‌ ಡೌನ್‌ ಘೋಷಣೆಗೂ ಮುನ್ನ ಪ್ರತಿ 3 ದಿನಗಳಿಗೊಮ್ಮೆ ಸೋಂಕಿತರ ಸಂಖ್ಯೆ ದುಪ್ಪಟ್ಟಾಗುತ್ತಿತ್ತು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಉಸಿರಾಟದ ಸಮಸ್ಯೆ ಹಾಗೂ ಜ್ವರದಂಥ ಲಕ್ಷಣ ಇರುವ ಜನರನ್ನೂ ಪರೀಕ್ಷೆಗೊಳಪಡಿಸಿದ್ದೂ ಈ ಬೆಳವಣಿಗೆಗೆ ಕಾರಣ. ಅಲ್ಲದೆ ಹೊಸ ಪ್ರಕರಣಗಳ ಪ್ರಮಾಣದಲ್ಲೂ ಶೇ.40ರಷ್ಟು ಇಳಿಕೆಯಾಗಿದೆ ಎಂದು ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್‌ ಮಾಹಿತಿ ನೀಡಿದ್ದಾರೆ.

ವಿಶೇಷವೆಂದರೆ, ರಾಷ್ಟ್ರೀಯ ಸರಾಸರಿಗೆ ಹೋಲಿಸಿದರೆ 19 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸೋಂಕಿತರ ಸಂಖ್ಯೆ ದ್ವಿಗುಣಗೊಳ್ಳುವ ಅವಧಿ ಇನ್ನಷ್ಟು ಹೆಚ್ಚಿನ ದಿನಗಳಿಗೆ ಇಳಿಕೆಯಾಗಿದೆ. ಕೇರಳ, ದೆಹಲಿ, ತಮಿಳುನಾಡು, ಆಂಧ್ರಪ್ರದೇಶ, ಉತ್ತರ ಪ್ರದೇಶಗಳು ಇಂಥ ರಾಜ್ಯಗಳ ಸಾಲಿಗೆ ಸೇರಿವೆ.

ಅಲ್ಲದೆ, ದೇಶದಲ್ಲಿ ಚೇತರಿಕೆ ಕಾಣುತ್ತಿರುವ ಸೋಂಕಿತರ ಸಂಖ್ಯೆಯೂ ಸುಧಾರಿಸಿದೆ. ಗುಣಮುಖರಾದ ರೋಗಿಗಳು ಮತ್ತು ಸಾವಿನ ಸಂಖ್ಯೆಯ ಅನುಪಾತ 80:20ರಷ್ಟಿದ್ದು, ಅನೇಕ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದ ಸ್ಥಿತಿ ಉತ್ತಮವಾಗಿದೆ ಎಂದು ಅಗರ್ವಾಲ್‌ ಹೇಳಿದ್ದಾರೆ.

4 ವಾರಗಳಾದರೆ ಸಡಿಲಿಕೆ: ಕ್ವಾರಂಟೈನ್‌ ವಲಯದಲ್ಲಿ ಸತತ 4 ವಾರಗಳ ಕಾಲ ಯಾವುದೇ ದ್ವಿತೀಯ ಪಾಸಿಟಿವ್‌ ಪ್ರಕರಣ ಪತ್ತೆಯಾಗದೇ ಇದ್ದರೆ, ಅಂಥ ಪ್ರದೇಶದಲ್ಲಿನ ನಿರ್ಬಂಧಗಳನ್ನು ಸಡಿಲಿಸಲಾಗುತ್ತದೆ ಎಂದೂ ಅಗರ್ವಾಲ್‌ ಹೇಳಿದ್ದಾರೆ.

ಕೊನೆಯ ಸೋಂಕಿತ ವ್ಯಕ್ತಿಯನ್ನು ಐಸೋಲೇಟ್‌ ಮಾಡಿದ ಹಾಗೂ ಆತನೊಂದಿಗೆ ಸಂಪರ್ಕ ಹೊಂದಿದವರೆಲ್ಲರೂ 28 ದಿನಗಳ ಕಾಲ ನಿಗಾದಲ್ಲಿ ಇದ್ದ ಬಳಿಕ, 14 ದಿನಗಳು ಯಾವುದೇ ಪ್ರಕರಣ ಪತ್ತೆಯಾಗದಿದ್ದರೆ ಈ ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

24 ಗಂಟೆಯಲ್ಲಿ 1007 ಪ್ರಕರಣ: ಕೇವಲ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 23 ಮಂದಿ ಸಾವಿಗೀಡಾಗಿದ್ದು, 1,007 ಹೊಸ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 14 ಸಾವಿರದ ಸಮೀಪಕ್ಕೆ ಬಂದಿದ್ದರೆ, ಸಾವಿನ ಸಂಖ್ಯೆ 450 ದಾಟಿದೆ.

ಇದೇ ವೇಳೆ, ಮೇ ತಿಂಗಳ ಮೊದಲ ವಾರದಲ್ಲಿ ದೇಶದ ಸೋಂಕಿತರ ಸಂಖ್ಯೆ ಉತ್ತುಂಗಕ್ಕೇರಲಿದ್ದು, ಅದರ ನಂತರದ ದಿನಗಳಲ್ಲಿ ಈ ಸಂಖ್ಯೆ ಇಳಿಮುಖವಾಗುತ್ತಾ ಸಾಗಲಿದೆ ಎಂದು ಸರಕಾರ ಆಂತರಿಕ ಮೌಲ್ಯಮಾಪನದಿಂದ ತಿಳಿದುಬಂದಿರುವುದಾಗಿ ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ, ಮುಂದಿನ ವಾರವು ನಿರ್ಣಾಯಕವಾಗಲಿದೆ ಎಂದೂ ಹೇಳಲಾಗಿದೆ.

ಡಿಸ್ಚಾರ್ಜ್‌ ಎಲ್ಲಿ ಎಷ್ಟು?
ಅತಿಹೆಚ್ಚು ಸೋಂಕಿತರಿರುವ ರಾಜ್ಯ ಮಹಾರಾಷ್ಟ್ರದಲ್ಲಿ ಗುಣಮುಖರಾಗುತ್ತಿರುವವರ ಪ್ರಮಾಣವೂ ಹೆಚ್ಚಿದೆ. ಇಲ್ಲಿ 3 ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು ದೃಢವಾಗಿದೆ. 300ಕ್ಕೂ ಹೆಚ್ಚು ರೋಗಿಗಳು ಡಿಸ್ಚಾರ್ಜ್‌ ಆಗಿದ್ದಾರೆ.

ಚೇತರಿಕೆಯ ವಿಚಾರದಲ್ಲಿ ಕೇರಳಕ್ಕೆ 2ನೇ ಸ್ಥಾನ. 390ಕ್ಕೂ ಹೆಚ್ಚು ಸೋಂಕಿತರು ಅಲ್ಲಿದ್ದಾರೆ, 245 ಗುಣಮುಖರಾಗಿದ್ದಾರೆ. ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಕ್ರಮವಾಗಿ 186 ಮತ್ತು 180 ಮಂದಿ ಚೇತರಿಸಿದ್ದಾರೆ.

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.