ವೃದ್ಧನ ಕುಟುಂಬಕ್ಕೆ ಕೋವಿಡ್ ಸೋಂಕಿಗೆ ಕಲಬುರಗಿಯ ನಂಟು ; ಡಿಸಿಎಂ ಕಾರಜೋಳ ಸಂಶಯ
ಕಲಬುರಗಿಯ ಸೋಂಕಿತ ಮೃತನ ಏರಿಯಾದಲ್ಲಿ ಸಹೋದರ ಸುತ್ತಾಟ ; ಬಸ್ ಮೂಲಕ ನಗರಕ್ಕೆ ವಾಪಸ್
Team Udayavani, Apr 6, 2020, 10:20 PM IST
ಬಾಗಲಕೋಟೆ : ನಗರದ ಕಿರಾಣಿ ಅಂಗಡಿ ವರ್ತಕ, ಕೋವಿಡ್ 19 ವೈರಸ್ ಸೋಂಕಿನಿಂದ ಮೃತಪಟ್ಟ ವೃದ್ಧನ ಕುಟುಂಬಕ್ಕೆ ಈ ಸೋಂಕು ತಗುಲುವುದಕ್ಕೆ ಕಲಬುರಗಿಯ ನಂಟು ಇರುವ ಸಂಶಯವಿದ್ದು, ಈ ಕುರಿತು ಸಮಗ್ರ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.
ಸೋಮವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೃದ್ಧ ಈ ಸೋಂಕಿಗೆ ಬಲಿಯಾಗಿದ್ದಾನೆ. ಆತನ ಸಹೋದರ ಮತ್ತು ಪತ್ನಿಗೂ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ನಗರಕ್ಕೆ ಈ ಸೋಂಕು ಹೇಗೆ ಬಂತು ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ಸದ್ಯದ ಪ್ರಾಥಮಿಕ ಮಾಹಿತಿ ಪ್ರಕಾರ, ಕಲಬುರಗಿಯಿಂದ ಈ ಸೋಂಕು ಬಂದಿರುವ ಸಾಧ್ಯತೆ ಇದೆ ಎಂದರು.
ಮೃತ ವೃದ್ಧನ ಸಹೋದರ ಮಾ. 15ರಂದು ರೈಲ್ವೆ ಮೂಲಕ ಕಲಬುರಗಿಗೆ ಹೋಗಿದ್ದ. ಅಲ್ಲಿನ ಮೊಮಿನಪುರ, ಗಂಜ್ ಪ್ರದೇಶದಲ್ಲಿ (ಕಲಬುರಗಿಯಲ್ಲಿ ಸೋಂಕಿನಿಂದ ಮೃತಪಟ್ಟವನ ಪ್ರದೇಶ ಇದಾಗಿತ್ತು) ಆತನ ಸ್ನೇಹಿತರೊಂದಿಗೆ ತಿರುಗಾಡಿದ್ದ. ಕಲಬುರಗಿಯಲ್ಲಿ ಮೃತಪಟ್ಟ ವ್ಯಕ್ತಿಯ ಏರಿಯಾದ ಮನೆಯ ಬಳಿಯೂ ಬಾಗಲಕೋಟೆಯ ವೃದ್ಧನ ಸಹೋದರ ತಿರುಗಾಡಿದ ಕುರಿತು ಪ್ರಾಥಮಿಕ ಮಾಹಿತಿ ಇದೆ.
ಅಲ್ಲದೇ ಕಲಬುರಗಿಯಲ್ಲಿನ ಅವರ ಸಂಬಂಧಿಕರ ಮನೆ, ಹೊಟೇಲ್ನಲ್ಲಿ ಊಟವೂ ಮಾಡಿದ್ದಾರೆ. ಬಳಿಕ ಮಾ. 16ರಂದು ಬಸ್ ಮೂಲಕ ವಿಜಯಪುರಕ್ಕೆ ಬಂದು, ಅಲ್ಲಿಂದ ರಾತ್ರಿ 10.30ಕ್ಕೆ ಬಾಗಲಕೋಟೆಗೆ ಬಂದಿದ್ದಾರೆ. ಈ ಕುರಿತು ಸಮಗ್ರ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ತಿಳಿಸಿದರು.
ವೃದ್ಧನ ಸಹೋದರನಿಗೆ ಕಲಬುರಗಿಯಿಂದಲೇ ಈ ಸೋಂಕು ಬಂದಿರುವ ಸಾಧ್ಯತೆ ಇದೆ. ವೃದ್ಧನಿಗೆ ವಯಸ್ಸಾದ ಹಿನ್ನೆಲೆಯಲ್ಲಿ ಅತಿಬೇಗ ಈ ಸೋಂಕು ಕಾಣಿಸಿಕೊಂಡಿದ್ದು, ತಪಾಸಣೆ ಮಾಡಿದ ಬಳಿಕ ಸಹೋದರ ಮತ್ತು ವೃದ್ಧನ ಪತ್ನಿಗೂ ಪಾಜಿಟಿವ್ ಎಂದು ಬಂದಿದೆ. ಈ ಕುರಿತು ಕೂಲಂಕುಶ ಪರಿಶೀಲನೆ ನಡೆಯುತ್ತಿದೆ ಎಂದು ಕಾರಜೋಳ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ