ರಾಜ್ಯದ 15 ಜಿಲ್ಲೆ ರೆಡ್‌ ಝೋನ್‌ ; ರಾಜ್ಯದಲ್ಲಿ ಸಾವಿನ ಸಂಖ್ಯೆ 21ಕ್ಕೆ ಏರಿಕೆ

ಡಿಸಿಎಂ, ಗೃಹ ಸಚಿವರು ಕ್ವಾರಂಟೈನ್‌

Team Udayavani, Apr 30, 2020, 6:32 AM IST

ರಾಜ್ಯದ 15 ಜಿಲ್ಲೆ ರೆಡ್‌ ಝೋನ್‌ ; ರಾಜ್ಯದಲ್ಲಿ ಸಾವಿನ ಸಂಖ್ಯೆ 21ಕ್ಕೆ ಏರಿಕೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆ ಹೊಸ ಮಾನದಂಡ­ಗಳೊಂದಿಗೆ ಜಿಲ್ಲಾವಾರು ಕೆಂಪು, ಕಿತ್ತಳೆ ಹಾಗೂ ಹಸುರು ವಲಯವನ್ನು ಪಟ್ಟಿ  ಮಾಡಿದ್ದು, ರಾಜ್ಯದ 15 ಜಿಲ್ಲೆಗಳು ಕೆಂಪು ವಲಯ­ದಲ್ಲಿವೆ.

ಕೋವಿಡ್ ಸೋಂಕು ಪ್ರಕರಣಗಳನ್ನು ಆಧರಿಸಿ ಈ ವಲಯಗಳನ್ನು ಗುರುತಿಸಲಾ­ಗಿದೆ. ಕಳೆದ 14 ದಿನಗಳಲ್ಲಿ ಸೋಂಕು ದೃಢಪಟ್ಟ ಜಿಲ್ಲೆಗಳನ್ನು ಕೆಂಪು ವಲಯ­ವಾಗಿ, ಕಳೆದ 14 ದಿನಗಳಲ್ಲಿ ಯಾವುದೇ ಪ್ರಕರಣ ದಾಖಲಾಗದೆ, 15 ರಿಂದ 28 ದಿನಗಳಲ್ಲಿ ಸೋಂಕು ಪ್ರಕರಣ ದೃಢಪಟ್ಟ ಜಿಲ್ಲೆಯನ್ನು ಕಿತ್ತಳೆ ವಲಯವಾಗಿ, ಕಳೆದ 28 ದಿನಗಳಲ್ಲಿ ಯಾವುದೇ ಸೋಂಕು ಪ್ರಕರಣ ದೃಢಪಡದ ಜಿಲ್ಲೆಯನ್ನು ಹಸುರು ವಲಯವಾಗಿ ಗುರುತಿಸ­ಲಾಗಿದೆ.

ಬುಧವಾರ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ  ರಾಜ್ಯದ 15 ಜಿಲ್ಲೆಗಳು ಕೆಂಪು, 3 ಜಿಲ್ಲೆಗಳು ಕಿತ್ತಳೆ ಹಾಗೂ 12 ಜಿಲ್ಲೆಗಳು ಹಸುರು ವಲಯದಲ್ಲಿವೆ. ಉಡುಪಿ ಜಿಲ್ಲೆ ಹಸುರು ವಲಯಕ್ಕೆ ಸೇರ್ಪಡೆಯ ಅರ್ಹತೆ ಗಳಿಸಿದ್ದು, ಅಧಿಕೃತವಾಗಿ ಘೋಷಣೆಯಾಗಬೇಕಿದೆ.

ರಾಜ್ಯದಲ್ಲಿ ಸಾವಿನ ಸಂಖ್ಯೆ 21ಕ್ಕೆ
ರಾಜ್ಯದಲ್ಲಿ ಕೋವಿಡ್ ವೈರಸ್ ಕಾರಣದಿಂದ ಮತ್ತೊಬ್ಬರು ಮೃತಪಟ್ಟಿದ್ದಾರೆ. ಬುಧವಾರ ಮೃತಪಟ್ಟ ಈ ವೃದ್ಧ ತುಮಕೂರಿನವರು. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್ ವೈರಸ್ ನಿಂದ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಬುಧವಾರ ಒಟ್ಟು 12 ಪ್ರಕರಣಗಳು ಕಂಡು ಬಂದಿದ್ದು, ಸೋಂಕಿಗೊಳಗಾದವರ ಸಂಖ್ಯೆ 535ಕ್ಕೆ ತಲುಪಿದೆ.

ತುಮಕೂರಿನ ಮೃತ ವೃದ್ಧನಿಗೆ 73 ವರ್ಷ ವಯಸ್ಸಾಗಿದ್ದು, ಎ.25ರಂದು ತೀವ್ರ ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ದೀರ್ಘ‌ಕಾಲದ ಶ್ವಾಸಕೋಶ ರೋಗ (ಸಿಒಪಿಡಿ), ಮಧುಮೇಹ ಮತ್ತು ಅಸ್ತಮಾದಿಂದ ಬಳಲುತ್ತಿದ್ದರು. ಬುಧವಾರ ಸಂಜೆ ಸೋಂಕು ದೃಢಪಟ್ಟಿದ್ದು, ಅಷ್ಟರಲ್ಲಾಗಲೇ ಚಿಕಿತ್ಸೆ ಫ‌ಲಕಾರಿಯಾಗದೆ ಸಾವಿಗೀಡಾಗಿದ್ದರು.

ಕಳೆದ ವಾರ ಜಿಲ್ಲಾವಾರು ಸೋಂಕುಪೀಡಿತರ ಪಟ್ಟಿಯಲ್ಲಿ ಕಲಬುರಗಿ ಐದನೇ ಸ್ಥಾನದಲ್ಲಿತ್ತು. ಆದರೆ ಈ ವಾರ ನಿರಂತರ ಸೋಂಕು ಪ್ರಕರಣಗಳ ಹೆಚ್ಚಳ ಮತ್ತು ಬುಧವಾರ ಒಂದೇ ದಿನ ಎಂಟು ಪ್ರಕರಣ ದೃಢವಾದ್ದರಿಂದ ಅಲ್ಲಿ ಸೋಂಕುಪೀಡಿತರ ಸಂಖ್ಯೆ 52ಕ್ಕೆ ಏರಿದೆ.

ಡಿಸಿಎಂ, ಗೃಹ ಸಚಿವರು ಕ್ವಾರಂಟೈನ್‌
ಕೋವಿಡ್ 19 ವೈರಸ್ ಪ್ರಕರಣ 475 ಜತೆ ನೇರ ಸಂಪರ್ಕ ಹೊಂದಿದ್ದ‌ ಕಾರಣ ಡಿಸಿಎಂ ಡಾ| ಅಶ್ವತ್ಥನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಸಚಿವ ಡಾ| ಸುಧಾಕರ್‌ ಹೋಮ್‌ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಕೇಸ್‌  475ರ ಪ್ರಯಾಣ ಮಾಹಿತಿ ಬಿಡುಗಡೆಯಾದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಟ್ವೀಟ್‌ ಮಾಡಿ, ಕೋವಿಡ್ ನಿಯಂತ್ರಣ ವಿಷಯದಲ್ಲಿ ಸರಕಾರ ದ್ವಿಮುಖ ನೀತಿ ಅನುಸರಿಸುತ್ತಿದ್ದು, ಸೋಂಕು ದೃಢಪಟ್ಟಿರುವ ವ್ಯಕ್ತಿಯು ಸಿಎಂ, ಡಿಸಿಎಂ, ಗೃಹ ಸಚಿವರು ಮತ್ತು ಇತರ ಇಬ್ಬರು ಸಚಿವರ ಸಂಪರ್ಕಕ್ಕೆ ಬಂದಿದ್ದರೂ ಕ್ವಾರಂಟೈನ್‌ಗೆ ಒಳಗಾಗಿಲ್ಲ ಎಂದು ಆಕ್ಷೇಪಿಸಿದ್ದರು.

ಇದಾದ ಕೆಲವೇ ಕ್ಷಣಗಳಲ್ಲಿ ಡಾ| ಅಶ್ವತ್ಥನಾರಾಯಣ, ಬೊಮ್ಮಾಯಿ, ಡಾ| ಸುಧಾಕರ್‌ ಮತ್ತು ಸಿ.ಟಿ. ರವಿ ಟ್ವೀಟ್‌ ಮಾಡಿ, ತಾವು ತಪಾಸಣೆ ಮಾಡಿಸಿದ್ದು, ನೆಗೆಟಿವ್‌ ವರದಿ ಬಂದಿದೆ ಎಂದರು. ಆದರೂ ಹೋಮ್‌ ಕ್ವಾರಂಟೈನ್‌ಗೆ ಒಳಗಾಗಿರುವುದಾಗಿ ಡಾ| ಅಶ್ವತ್ಥ ನಾರಾಯಣ ಮತ್ತು ಬೊಮ್ಮಾಯಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.