Covid-19 Lockdown;ಸ್ಕ್ರೀನಿಂಗ್ ಬಳಿಕ ಕೂಲಿ ಕಾರ್ಮಿಕರ ಕೆಲಸಕ್ಕೆ ಕೇಂದ್ರ ಗ್ರೀನ್ ಸಿಗ್ನಲ್
75ಕ್ಕಿಂತ ಹೆಚ್ಚು ವರ್ಷದವರು ಶೇ.42.2ರಷ್ಟು ಪ್ರಮಾಣದಲ್ಲಿ ಸಾವನ್ನಪ್ಪಿದ್ದಾರೆ ಎಂದು ವಿವರಿಸಿದೆ.
Team Udayavani, Apr 19, 2020, 7:57 PM IST
Representative Image
ನವದೆಹಲಿ: ಕೋವಿಡ್ 19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು, ಏತನ್ಮಧ್ಯೆ ಏ.20ರಿಂದ ಇನ್ನಷ್ಟು ತುರ್ತು ಸೇವೆಗಳಿಗೆ ಅವಕಾಶ ನೀಡುವ ಮೂಲಕ ನಿರ್ಬಂಧವನ್ನು ಮತ್ತಷ್ಟು ಸಡಿಲಿಕೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯದೊಳಗಿನ(ಕೇಂದ್ರಾಡಳಿತ ಪ್ರದೇಶ) ಕೂಲಿ ಕಾರ್ಮಿಕರಿಗೆ ಕೆಲಸ ಮಾಡಲು ಅನುಕೂಲ ಮಾಡಿಕೊಡುವ ನೆಲೆಯಲ್ಲಿ ಎಸ್ ಒಪಿ(standard operation procedure-ಗುಣಮಟ್ಟದ ಕಾರ್ಯಾಚರಣೆ ನಿಯಮ) ಅನ್ನು ಜಾರಿಗೊಳಿಸಿದೆ.
ದೇಶಾದ್ಯಂತ ನಾಳೆಯಿಂದ ತುರ್ತು ಸೇವೆಗಳ ಪಟ್ಟಿಗೆ ಇನ್ನಷ್ಟು ಸೇರ್ಪಡೆಯಾಗಲಿದೆ. ದೇಶದಲ್ಲಿ ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ 15,712ಕ್ಕೆ ಏರಿಕೆಯಾಗಿದೆ, ಸಾವಿನ ಸಂಖ್ಯೆ 507ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕೋವಿಡ್ 19 ವೈರಸ್ ಸಾವಿನ ಪ್ರಮಾಣದಲ್ಲಿ ವಯೋಮಾನದ ಅಂಕಿಅಂಶ 0-45 ವಯಸ್ಸಿನವರು ಶೇ.14.4ರಷ್ಟು, 45ರಿಂದ 60 ವರ್ಷದವರು ಶೇ.10.3ರಷ್ಟು, 60-75 ವರ್ಷದವರು ಶೇ.33.1ರಷ್ಟು ಹಾಗೂ 75ಕ್ಕಿಂತ ಹೆಚ್ಚು ವರ್ಷದವರು ಶೇ.42.2ರಷ್ಟು ಪ್ರಮಾಣದಲ್ಲಿ ಸಾವನ್ನಪ್ಪಿದ್ದಾರೆ ಎಂದು ವಿವರಿಸಿದೆ.
ಕೋವಿಡ್ 19 ವೈರಸ್ ಗೆ ಸಾವನ್ನಪ್ಪಿದ ಶೇ.75ರಲ್ಲಿ 60ವರ್ಷಕ್ಕಿಂತ ಮೇಲ್ಪಟ್ಟವರು ಅಧಿಕ. ಶೇ.83ರಷ್ಟು ಪ್ರಕರಣಗಳಲ್ಲಿ ಸಹ ಒಟ್ಟಿಗೆ ಇರುವವರಲ್ಲಿ ಸೋಂಕು ಹಬ್ಬಿರುವುದು ಪತ್ತೆಯಾಗಿದೆ. ಹಿರಿಯ ವಯಸ್ಸಿನ ವ್ಯಕ್ತಿಗಳಿಗೆ ಹೆಚ್ಚು ಅಪಾಯಕಾರಿಯಾಗಿದೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ