ಪರೀಕ್ಷೆಗೊಳಪಟ್ಟ ಮೂವರಲ್ಲಿ ಒಬ್ಬರಿಗೆ ಸೋಂಕು! ಪಟ್ಟಿಯಲ್ಲಿ ಮೊದಲ‌ ಸ್ಥಾನದತ್ತ ಕರ್ನಾಟಕ


Team Udayavani, May 4, 2021, 10:05 AM IST

ಪರೀಕ್ಷೆಗೊಳಪಟ್ಟ ಮೂವರಲ್ಲಿ ಒಬ್ಬರಿಗೆ ಸೋಂಕು! ಪಟ್ಟಿಯಲ್ಲಿ ಮೊದಲ‌ ಸ್ಥಾನದತ್ತ ಕರ್ನಾಟಕ

ಬೆಂಗಳೂರು: ರಾಜ್ಯದಲ್ಲಿ ಸೋಂಕು ತೀವ್ರತೆ ಮತ್ತಷ್ಟು ಹೆಚ್ಚಳವಾಗಿದ್ದು, ಪರೀಕ್ಷೆಗಳ ಪಾಸಿಟಿವಿಟಿ ದರ ಹಿಂದೆಂದಿಗಿಂತಲೂ ಅತಿ ಹೆಚ್ಚು ಶೇ.30 ವರದಿಯಾಗಿದೆ. ಹೆಚ್ಚು ಕಡಿಮೆ ಸೋಂಕು ಪರೀಕ್ಷೆಗೊಳಗಾದ ಮೂವರಲ್ಲಿ ಒಬ್ಬರಿಗೆ ಸೋಂಕು ದೃಢಪಟ್ಟಿದೆ!

ಸೋಮವಾರ ಹೊಸದಾಗಿ 44,438 ಸೋಂಕು ಪ್ರಕರಣಗಳು, 239 ಸೋಂಕಿತರ ಸಾವಾಗಿದೆ. ಈ ಪೈಕಿ ಬೆಂಗಳೂರಿನಲ್ಲಿಯೇ 22,112 ಮಂದಿಗೆ ಸೋಂಕು ತಗುಲಿದ್ದು, 115 ಸಾವಾಗಿದೆ. ಶನಿವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆಗಳು ಆರು ಸಾವಿರದಷ್ಟು ಕುಸಿದಿವೆ. ಆದರೆ, 6705 ಪ್ರಕರಣಗಳು, 22 ಸಾವು ಹೆಚ್ಚಳವಾಗಿವೆ.

ಒಂದು ಪ್ರದೇಶದ ಸೋಂಕಿನ ತೀವ್ರತೆಯನ್ನು ಪರೀಕ್ಷೆಗಳ ಪಾಸಿಟಿವಿಟಿ ದರದ ಮೂಲಕ ಅಳೆಯಲಾಗುತ್ತದೆ. ಸೋಮವಾರ 1,49,090 ಮಂದಿ ಸೋಂಕು ಪರೀಕ್ಷೆಗೊಳಗಾಗಿದ್ದು, ಪಾಸಿಟಿವಿಟಿ ದರ ಶೇ.30 ದಾಖಲಾಗಿದೆ. ಪರೀಕ್ಷೆಗೊಳಗಾಗದ 100 ಮಂದಿಯಲ್ಲಿ 30 ಮಂದಿಗೆ ಸೋಂಕು ದೃಢಪಟ್ಟಿದೆ. ಅಂದರೆ ಹೆಚ್ಚು ಕಡಿಮೆ ಮೂವರಲ್ಲಿ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ.

ಮೊದಲ ಸ್ಥಾನದತ್ತ ಕರ್ನಾಟಕ: ಸದ್ಯ ದೇಶದಲ್ಲಿಯೇ ಅತಿ ಹೆಚ್ಚು ಸೋಂಕು ಪ್ರಕರಣಗಳು ಮಹಾರಾಷ್ಟ್ರದಲ್ಲಿ ಪತ್ತೆಯಾಗುತ್ತಿವೆ. ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಆದರೆ, ಕಳೆದ ಒಂದು ವಾರದಿಂದ ಮಹಾರಾಷ್ಟ್ರ ಪ್ರಕರಣಗಳು ಇಳಿಮುಖವಾಗಿದೆ, 70 ಸಾವಿರದಿಂದ 50 ಸಾವಿರ ಆಸುಪಾಸಿಗೆ ಬಂದಿವೆ. ಆದರೆ, ಕರ್ನಾಟಕವು ಮಾತ್ರ ಏರಿಕೆ ಹಾದಿ ಮುಂದುವರೆಸಿದ್ದು, ದಿನದಿಂದ ದಿನಕ್ಕೆ ದಾಖಲೆಯ ಪಾಸಿಟಿವಿಟಿ ದರ ವರದಿಯಾಗುತ್ತಿದೆ.

ಇದನ್ನೂ ಓದಿ:ಕೋವಿಡ್ ಪಾಸಿಟಿವ್ ಸಂಖ್ಯೆ ಹೆಚ್ಚಳ ಮಧ್ಯೆ ಅಗತ್ಯ ವಸ್ತುಗಳ ಖರೀದಿ ನೆಪದಲ್ಲಿ ಜನಜಂಗುಳಿ!

ಸೋಮವಾರ ಮಹಾರಾಷ್ಟ್ರದಲ್ಲಿ (48,621) ಕರ್ನಾಟಕಕ್ಕಿಂತ ನಾಲ್ಕು ಸಾವಿರ ಅಧಿಕ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಸೋಂಕಿನ ತೀವ್ರತೆ ಹೀಗೆಯೇ ಮುಂದುವರಿದರೆ ಇನ್ನೆರಡು ದಿನಗಳಲ್ಲಿಯೇ ಕರ್ನಾಟಕ ಮೊದಲ ಸ್ಥಾನಕ್ಕೇರುವ ಸಾಧ್ಯತೆಗಳಿವೆ.

ಬೆಂಗಳೂರು ನಂ1: ಮಹಾನಗರಗಳ ಪೈಕಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗುವ ಮೂಲಕ ಬೆಂಗಳೂರು ಮೊದಲ ಸ್ಥಾನಕ್ಕೇರಿದೆ. ದೆಹಲಿ, ಪುಣೆ ನಂತರದ ಸ್ಥಾನದಲ್ಲಿವೆ.

ಡಬಲ್‌ ಮ್ಯುಟೆಂಟ್‌ ವೈರಸ್‌ ಕಾಟ: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿರುವ ಬೆನ್ನಲ್ಲೇ ಡಬಲ್‌ ಮ್ಯೂಟೆಂಟ್‌ /ಬಿ.1.617 ವೈರಸ್‌ ಕಾಟವೂ ಹೆಚ್ಚಳವಾಗಿದೆ. ಕಳೆದ ಮಂಗಳವಾರ 20 ಮಂದಿಯಲ್ಲಿ ಪತ್ತೆಯಾಗಿ ಆತಂಕ ಸೃಷ್ಟಿಸಿತ್ತು. ಇದೀಗ ಒಂದೇ ವಾರದಲ್ಲಿ ಡಬಲ್‌ ಮ್ಯೂಟೆಂಟ್‌ ಸೋಂಕಿತರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.