ರಾಜಕಾರಣಿಗಳಿಗೆ ಕೋವಿಡ್‌ ಕಾಟ; ಪಾಕ್‌ ಸಚಿವರಿಗೂ ಸೋಂಕು


Team Udayavani, Jun 17, 2020, 2:44 PM IST

ರಾಜಕಾರಣಿಗಳಿಗೆ ಕೋವಿಡ್‌ ಕಾಟ; ಪಾಕ್‌ ಸಚಿವರಿಗೂ ಸೋಂಕು

ಇಸ್ಲಾಮಾಬಾದ್‌: ಇಲ್ಲಿನ ಮಾರುಕಟ್ಟೆಯೊಂದರಲ್ಲಿ ಕೋವಿಡ್‌ ಪರೀಕ್ಷೆಗಾಗಿ ಮಾದರಿ ಸಂಗ್ರಹಿಸುತ್ತಿರುವುದು.

ಕರಾಚಿ: ಪಾಕಿಸ್ಥಾನದಲ್ಲಿ ಕೋವಿಡ್‌ ಸೋಂಕು ವ್ಯಾಪಕವಾಗಿ ವಿಸ್ತರಿಸುತ್ತಿದ್ದು ಪ್ರಮುಖ ಸಚಿವರು, ಅಧಿಕಾರಿಗಳೇ ತುತ್ತಾಗುತ್ತಿದ್ದಾರೆ. ಮಂಗಳವಾರ ಪಾಕ್‌ನ ಮಾಹಿತಿ ತಂತ್ರಜ್ಞಾನ ಸಚಿವ ಸಯ್ಯದ್‌ ಅಮಿನುಲ್‌ ಅವರಿಗೆ ಕೋವಿಡ್‌ ಸೋಂಕಿರುವುದು ದೃಢಪಟ್ಟಿದೆ. ಜ್ವರದಿಂದ ಅವರು ಬಳಲುತ್ತಿದ್ದು ಟೈಫಾಯಿಡ್‌ ಇರುವುದು ದೃಢಪಟ್ಟಿತ್ತು. ಮತ್ತೆ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ಈ ವೇಳೆ ಕೋವಿಡ್‌ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ಜಿಯೋ ನ್ಯೂಸ್‌ ವರದಿ ಮಾಡಿದೆ. ಅಮಿನುಲ್‌ ಅವರು ಮುತ್ತಾಹಿದಾ ಖವಾಮಿ ಮೂವ್‌ಮೆಂಟ್‌ನ ನಾಯಕರಾಗಿದ್ದು, ಎ.6ರಂದು ಮಾಹಿತಿ ತಂತ್ರಜ್ಞಾನ ಸಚಿವರಾಗಿ ನಿಯುಕ್ತರಾಗಿದ್ದರು. ತಮಗೆ ಜ್ವರ ಇರುವುದು ಗೊತ್ತಾದ ಕೂಡಲೇ ಇವರು ಐಸೋಲೇಷನ್‌ನಲ್ಲಿದ್ದು ಬೇರೆಯವರಿಗೆ ಸೋಂಕು ಹರಡದಂತೆ ನೋಡಿಕೊಂಡಿದ್ದಾರೆ. ಇದೇ ವೇಳೆ ಪಾಕ್‌ನಲ್ಲಿ ಕೋವಿಡ್‌ನಿಂದ ಮೃತರಾದವರ ಸಂಖ್ಯೆ 2839ಕ್ಕೇರಿದೆ. ಒಟ್ಟು ಪ್ರಕರಣಗಳ ಸಂಖ್ಯೆ 1.14 ಲಕ್ಷದ ಗಡಿ ದಾಟಿದೆ.

ಇನ್ನು ರಾಜಕಾರಣಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿಗೆ ತುತ್ತಾಗುತ್ತಿರುವುದು ಪಾಕ್‌ನ ರಾಜಕೀಯ ವಲಯದಲ್ಲಿ ಆಘಾತ ಸೃಷ್ಟಿಸಿದೆ. ಸೋಮವಾರ ಸಿಂಧ್‌ನ ಮಹಿಳಾ ಅಭಿವೃದ್ಧಿ ಸಚಿವೆ ಶೆಹ್ಲಾ ರಾಜಾ ಅವರು ಸೋಂಕಿಗೆ ತುತ್ತಾಗಿದ್ದರು. ಕಳೆದ ವಾರ, ಮಾಜಿ ಪ್ರಧಾನಿ ಯೂಸುಫ್ ರಾಜಾ ಗಿಲಾನಿ, ಅದಕ್ಕೂ ಮೊದಲು ಪಾಕ್‌ ವಿಪಕ್ಷ ನಾಯಕ ಪಿಎಮ್‌ಎಲ್‌ಎನ್‌ನ ಶೆಹಬಾಝ್ ಶರೀಫ್, ರೈಲ್ವೇ ಸಚಿವ ಶೇಖ್‌ ರಶೀದ್‌ ಅಹ್ಮದ್‌, ಪಿಎಲ್‌ಎಮ್‌ಎನ್‌ ನಾಯಕರಾದ ಅಶಾನ್‌ ಅಕ್ಬಲ್‌, ಮರಿಯುಮ್‌ ಔರಂಗಜೇಬ್‌ ಮೊದಲಾದವರೂ ಕೋವಿಡ್‌ ಸೋಂಕಿಗೆ ತುತ್ತಾಗಿದ್ದಾರೆ. ಅಲ್ಲಿ ಕೋವಿಡ್‌ ಈ ಮೊದಲಿಗಿಂತಲೂ ಕ್ಷಿಪ್ರ ಪ್ರಮಾಣದಲ್ಲಿ ಹರಡುತ್ತಿದ್ದು, ಸಾವಿನ ಪ್ರಮಾಣವೂ ದಿನದಿಂದ ದಿನಕ್ಕೆ ಏರುತ್ತಿದೆ. ಸೋಮವಾರ 111 ಮಂದಿ ಮೃತಪಟ್ಟಿದ್ದರು.

 

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.