ಸಾರ್ವಜನಿಕ ಶೌಚಾಲಯ ಬಳಕೆಯಿಂದಲೂ ಹರಡುತ್ತೆ ಕೋವಿಡ್


Team Udayavani, Aug 23, 2020, 3:40 PM IST

ಸಾರ್ವಜನಿಕ ಶೌಚಾಲಯ ಬಳಕೆಯಿಂದಲೂ ಹರಡುತ್ತೆ ಕೋವಿಡ್

ವುಹಾನ್‌: ಕೋವಿಡ್ ವೈರಾಣುವಿನ ಮೂಲದ ಕುರಿತು ಇಂದಿಗೂ ಸಾಕಷ್ಟು ಚರ್ಚೆಗಳು ನಡೆಯುತ್ತಲ್ಲೇ ಇದೆ. ಇದರೊಂದಿಗೆ ಸೋಂಕು ಹೇಗೆಲ್ಲಾ ಹರಡುತ್ತದೆ ಎಂಬುದನ್ನು ಪತ್ತೆ ಹಚ್ಚುವ ಕಾರ್ಯವೂ ನಡೆಯುತ್ತಿದ್ದು, ದಿನ ಕಳೆದಂತೆ ಈ ವಿಷಯಕ್ಕೆ ಸಂಬಂಧಪಟ್ಟಂತೆ ಹೊಸ ವಿಷಯಗಳು ಹೊರ ಬರುತ್ತಲೇ ಇದೆ.

ಇದೀಗ ಚೀನದ ಗ್ಲಾಸ್ಗೋ ವಿಶ್ವವಿದ್ಯಾಲಯದ ವಿಜ್ಞಾನಿಗಳು ಸೋಂಕು ಹರಡುವಿಕೆ ಕುರಿತು ಮತ್ತೂಂದು ಆಘಾತಕಾರಿ ಮಾಹಿತಿಯೊಂದನ್ನು ಹಂಚಿಕೊಂಡಿದ್ದು, ಸಾರ್ವಜನಿಕ ಶೌಚಾಲಯ ಬಳಸುವುದರಿಂದಲೂ ಕೋವಿಡ್ ಸೋಂಕು ತಗುಲುತ್ತದೆ ಎಂದು ತಿಳಿಸಿದ್ದಾರೆ..

ಸಾರ್ವಜನಿಕ ಶೌಚಾಲಯಲ್ಲಿ ಮೂತ್ರ ವಿಸರ್ಜನೆ ಮಾಡಿದರೂ ಕೋವಿಡ್ ಸೋಂಕು ತಗುಲುವ ಸಾಧ್ಯತೆ ಇದ್ದು, ಕಡ್ಡಾಯವಾಗಿ ಮಾಸ್ಕ್ ಧರಿಸಿದರೆ ಉತ್ತಮ ಎಂದು ಹೇಳಲಾಗಿದೆ. ಸಂಶೋಧಕರ ಪ್ರಕಾರ, ಲಿಕ್ವಿಡ್‌ ನಿಂದ ಒಳಗೊಂಡಿರುವ ಮೂತ್ರದಿಂದ ಬಿಡುಗಡೆಯಾಗುವ ಕಣಗಳು ಕೊರೊನಾಗೆ ಅಂಟಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ ಎನ್ನಲಾಗಿದೆ. ಸಂಶೋಧಕ ಡಾ. ಕ್ಸಿಯಾಂಗ್ಡಾಂಗ್‌ ಲಿಯು ಅವರು, ಸಾರ್ವಜನಿಕ ಶೌಚಾಲಯಗಳು ಕೋವಿಡ್ ಸೂಪರ್‌ ಸ್ಪ್ರೆಡರ್‌ ತಾಣಗಳಾಗಿ ಪರಿಣಮಿಸಬಹುದು. ಮೂತ್ರ ವಿಸರ್ಜನೆ ಮಾಡುವುದು ಅನಿಲ ಮತ್ತು ದ್ರವ ಸಂಪರ್ಕಸಾಧನಗಳ ನಡುವಿನ ಪರಸ್ಪರ ಕ್ರಿಯೆಯನ್ನು ಒಳಗೊಂಡಿರುತ್ತದೆ. ಕೆಲವೇ ಸೆಕೆಂಡ್‌ ಗಳಲ್ಲಿ ಸೋಂಕು ತಗುಲುವ ಸಾಧ್ಯತೆ ಇದೆ.

 ಜರ್ಮನ್‌ 4 ತಿಂಗಳ ಬಳಿಕ ಸೋಂಕು ಹೆಚ್ಚಳ : ಬರ್ಲಿನ್‌ : ಏಪ್ರಿಲ್‌ ಬಳಿಕ ಜರ್ಮನಿಯಲ್ಲಿ ಅತೀ ಹೆಚ್ಚು ಹೊಸ ಕೋವಿಡ್‌ ಸೋಂಕು ಪ್ರಕರಣಗಳು ದಾಖಲಾಗಿದ್ದು, ಗುರುವಾರ ಒಂದೇ 1,707 ಕೋವಿಡ್ ಪ್ರಕರಣಗಳು ದಾಖಲಾಗಿವೆ. ಕಳೆದ ಮೂರುವರೆ ತಿಂಗಳಲ್ಲಿ ದಾಖಲಾದ ಅತೀ ಹೆಚ್ಚು ದೈನಂದಿನ ಪ್ರಕರಣಗಳಾಗಿವೆ ಎಂದು ವರದಿ ತಿಳಿಸಿದೆ. ಕೋವಿಡ್ ಪಿಡುಗು ನಿರ್ವಹಣ ಕೇಂದ್ರ ರಾಬರ್ಟ್‌ ಕೋಚ್‌ ಇನ್‌ಸ್ಟಿಟ್ಯೂಟ್‌ (ಆರ್‌ಕೆಐ) ಇತ್ತೀಚಿಗೆ ಹಂಚಿಕೊಂಡಿರುವ ಅಂಕಿಅಂಶಗಳ ಪ್ರಕಾರ ಇಲ್ಲಿಯವರೆಗೂದೇಶದಲ್ಲಿ 2.28 ಲಕ್ಷಕ್ಕೂ ಹೆಚ್ಚುಸೋಂಕು ಪ್ರಕರಣಗಳು ದಾಖಲಾಗಿದ್ದು, ಗುರುವಾರ ಸೋಂಕಿಗೆ 10 ಮಂದಿ ಬಲಿಯಾಗಿದ್ದಾರೆ. ಆ ಮೂಲಕ ಒಟ್ಟು ಸಾವಿನ ಪ್ರಮಾಣ 9,253 ಕ್ಕೆ ಏರಿದೆ.

 4 ತಿಂಗಳಿನಿಂದ ಹೊಸ ಸಾವು ಇಲ್ಲ : ಚೀನ : ಬೀಜಿಂಗ್‌: ಕಳೆದ ನಾಲ್ಕು ತಿಂಗಳಲ್ಲಿ ದೇಶದ ಆಸ್ಪತ್ರೆಗಳಲ್ಲಿ ಒಬ್ಬ ಸೋಂಕಿತರೂ ಸಹ ಸಾವನ್ನಪ್ಪಿಲ್ಲ ಎಂದು ಚೀನ ಹೇಳಿಕೊಂಡಿದೆ. ರಾಷ್ಟ್ರೀಯ ಆರೋಗ್ಯ ಆಯೋಗದ ಅಧಿಕಾರಿ ಗುವೊ ಯಾನ್ಹೋಂಗ್‌ ಬುಧವಾರ ಈ ಮಾಹಿತಿ ನೀಡಿದ್ದಾರೆ. ಇದಕ್ಕೆ ರೋಗಿಗಳನ್ನು ಚೀನ ನೋಡಿಕೊಂಡ ಕ್ರಮ ಕಾರಣ ಎಂದು ಹೇಳಿದೆ. ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಚೀನ ಅನುಸರಿಸಿದ ಮಾರ್ಗ ಮತ್ತು ಸೋಂಕನ್ನು ನಿಯಂತ್ರಣಕ್ಕೆ

ತರುವಲ್ಲಿ ತನ್ನ ಈ ಹಿಂದಿನ ಅನುಭವಗಳು ಕೆಲಸ ಮಾಡಿದೆ ಎಂಬುದನ್ನು ಇದು ತೋರಿಸುತ್ತದೆ ಎಂದು ಯಾನ್ಹೋಂಗ್‌ ಹೇಳಿದ್ದಾರೆ. ಸತತ ನಾಲ್ಕನೇ ದಿನವೂ ಹೊಸಚೀನದ ಪ್ರಜೆಗಳಲ್ಲಿ ಸೋಂಕಿನ  ಪ್ರಕರಣ ವರದಿಯಾಗಿಲ್ಲ. ಆದರೆ ವಿದೇಶದಿಂದ ಬಂದ 7 ಜನರಲ್ಲಿ ಕೋವಿಡ್‌ ಕಾಣಿಸಿಕೊಂಡಿದೆ.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.