ಗಾಳಿಯಲ್ಲಿ ಕೋವಿಡ್‌ ಹರಡುವುದಿಲ್ಲ..!


Team Udayavani, Aug 23, 2020, 4:14 PM IST

ಗಾಳಿಯಲ್ಲಿ ಕೋವಿಡ್‌ ಹರಡುವುದಿಲ್ಲ..!

ವಿಶ್ವಸಂಸ್ಥೆ : ಕೋವಿಡ್ ಸೋಂಕು ಹರಡುವಿಕೆ ಪ್ರಾರಂಭವಾದಗಿನಿಂದಲೂ ಸೀನಿನ ಕಣಗಳ ಮೂಲಕ ಕೋವಿಡ್ ಹರಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳುತ್ತಲೇ ಬಂದಿದೆ. ಕೋವಿಡ್ ಹರಡ ಬೇಕಾದರೆ ನೀವು ಸೋಂಕು ಇರುವ ವ್ಯಕ್ತಿ ಬಳಿ ಹಲವು ನಿಮಿಷಗಳ ಕಾಲ ಹತ್ತಿರದಿಂದ ಮಾತನಾಡುವುದೋ ಅಥವಾ ಸಂಪರ್ಕಿಸುವುದು ಮಾಡಬೇಕು. ಇಲ್ಲದೇ ಇದ್ದಲ್ಲಿ ಸಾಮಾನ್ಯವಾಗಿ ಗಾಳಿಯಲ್ಲಿ ಕೋವಿಡ್ ಹರಡುವುದಿಲ್ಲ ಎಂದು ತಜ್ಞರು ಹೇಳಿದ್ದಾರೆ.

ಒಂದು ವೇಳೆ ರೋಗಿ ಕೆಮ್ಮಿದರೆ ಅಥವಾ ಸೀನಿದರೂ ನೀವು ವ್ಯಕ್ತಿಯಿಂದ 6 ಅಡಿ ಅಂತದಲ್ಲಿದ್ದರೆ ಮತ್ತು ಮಾಸ್ಕ್ ಧರಿಸಿಕೊಂಡಿದ್ದರೆ ಯಾವುದೇ ಅಪಾಯವಿಲ್ಲ ಎಂದಿದ್ದಾರೆ. ಆದರೀಗ ಒಂದು ಸ್ಥಳದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೆಚ್ಚು ಹೊತ್ತು ಸೇರಿದಾಗ, ಅಲ್ಲಿನ ವೆಂಟಿಲೇಟರ್‌ ವ್ಯವಸ್ಥೆ ಚೆನ್ನಾಗಿರದಿದ್ದರೆ ಅಂತಹ ಸಂದರ್ಭದಲ್ಲಿ ಕೋವಿಡ್ ಗಾಳಿಯಲ್ಲಿ ಹರಡುತ್ತದೆ ಎಂದು ವಿಶ್ವ ಸಂಸ್ಥೆ ಹೇಳಿದೆ. ಕೋವಿಡ್ ಸೀನಿನ ಕಣಗಳ ಜತೆ ಕೆಳಗೆ ಬೀಳುತ್ತದೆಯೇ ಅಥವಾ ಗಾಳಿಯಲ್ಲಿ ತೇಲುತ್ತಿರುತ್ತದೆಯೋ ಎಂಬ ಪ್ರಶ್ನೆ ವಿಜ್ಞಾನಿಗಳನ್ನು ಕಾಡುತ್ತಿದೆ. ಚಿಕನ್‌ ಪೋಕ್ಸ್, ಟ್ಯೂಬರ್‌ಕ್ಲೋಸಿಸ್‌, ದಡಾರದಂತಹ ರೋಗದ ಸೂಕ್ಷ್ಮಾಣುಗಳು ಗಾಳಿ, ಧೂಳಿನಲ್ಲಿರಬಹುದು. ಆದರೆ ಫ್ಲ್ಯೂಶೀತ, ಕೆಮ್ಮು ಬಹಳ ಹತ್ತಿರದಿಂದ ಮಾತ್ರ ಹರಡಲು ಸಾಧ್ಯ. ಹಾಗಾಗಿ ದೂರದಲ್ಲಿದ್ದರೆ ಕೋವಿಡ್ ಸೋಂಕು ತಗುಲುವುದು ಸಾಧ್ಯವಿಲ್ಲ.

ಲಸಿಕೆ ಅಭಿವೃದ್ಧಿ, ಉಚಿತ ವಿತರಣೆಗೆ ದೇಶಗಳ ಚಿಂತನೆ : ರಿಯೊ ಡಿ ಜನೈರೊ: ಜಾನ್ಸನ್‌ ಆ್ಯಂಡ್‌ ಜಾನ್ಸನ್‌ ಕಂಪನಿ ಅಭಿವೃದ್ಧಿಪಡಿಸಿರುವ ಕೋವಿಡ್ ಲಸಿಕೆಯ ಅಂತಿಮ ಹಂತದ ಕ್ಲಿನಿಕಲ್‌ ಪ್ರಯೋಗಗಳಿಗೆ ಬ್ರಜಿಲ್‌ ಅನುಮೋದನೆ ನೀಡಿದ್ದು, 4ನೇ ಹಂತದ ಮತ್ತೂಂದು ಲಸಿಕೆ ಅಧ್ಯಯನಕ್ಕೂ ಸಮ್ಮತಿ ಸೂಚಿಸಿದೆ.

ಅಮೆರಿಕದ ಜಾನ್ಸನ್‌ ಕಂಪನಿ, ಈ ಪ್ರಾಯೋಗಿಕ ಲಸಿಕೆಯನ್ನು ಬ್ರಜಿಲ್‌ನ ಏಳು ರಾಜ್ಯಗಳಲ್ಲಿ ನಡೆಸುತ್ತಿದ್ದು, 7 ಸಾವಿರ ಸ್ವಯಂ ಸೇವಕರ ಮೇಲೆ ಪ್ರಯೋಗ ನಡೆಸಿದೆ. ಅಷ್ಟೇ ಅಲ್ಲ, ವಿಶ್ವದಾದ್ಯಂತ 60 ಸಾವಿರ ವ್ಯಕ್ತಿಗಳ ಮೇಲೆ ಈ ಲಸಿಕೆಯನ್ನು ಪ್ರಯೋಗಿಸಿದೆ ಎಂದು ಬ್ರಜಿಲ್‌ನ ಆರೋಗ್ಯ ಇಲಾಖೆ ನಿಯಂತ್ರಣಾಧಿಕಾರಿ ಅನ್ವಿಸಾ ತಿಳಿಸಿದ್ದಾರೆ. ಆರೋಗ್ಯ ಇಲಾಖೆಯ ಅನುಮೋದನೆಗೆ ಕಳುಹಿಸುವ ಮುನ್ನ ಲಸಿಕೆಯನ್ನು ರ್‍ಯಾಂಡಮ್‌ ಪರೀಕ್ಷೆ, ನಿಯಂತ್ರಿತ ಮತ್ತು ಡಬಲ್-ಬ್ಲೈಂಡ್‌ ಎಂಬ ಮೂರು ಹಂತದಲ್ಲಿ ದೊಡ್ಡ ಪ್ರಮಾಣದಲ್ಲಿ ವ್ಯಕ್ತಿಗಳ ಮೇಲೆ ಪ್ರಯೋಗಿಸಿ ಪರೀಕ್ಷಿಸಲಾಗಿದೆ. ಉಚಿತವಾಗಿ ಲಸಿಕೆ ನೀಡುವುದಾಗಿ ಘೋಷಿಸಿದ ಆಸ್ಟ್ರೇಲಿಯಾ

ಮೆಲ್ಬರ್ನ್: ಕೋವಿಡ್ ಸೋಂಕು ಹೆಚ್ಚುತ್ತಿರುವುದರಿಂದ ಆಸ್ಟ್ರೇಲಿಯಾ ಲಸಿಕೆಗಾಗಿ ಬ್ರಿಟಿಷ್‌ ಔಷಧ ತಯಾರಿಕೆ ಕಂಪೆನಿ ಆಸ್ಟ್ರಾಜೆನೆಕಾದೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಸುಮಾರು 2.5 ಕೋಟಿ ಮಂದಿಗೆ ಇದರಿಂದ ಲಸಿಕೆ ಸಿಗಲಿದೆ. ಆಸ್ಟ್ರಾಜೆನೆಕಾ ಆಕ್ಸ್‌ಫ‌ರ್ಡ್‌ ಸಂಸ್ಥೆ ಜತೆಗೂಡಿ ಲಸಿಕೆ ಅಭಿವೃದ್ಧಿಪಡಿಸುತ್ತಿದ್ದು ಅಂತಿಮ ಹಂತದಲ್ಲಿದೆ. ಒಂದು ವೇಳೆ ಲಸಿಕೆ ಮಾರುಕಟ್ಟೆ ಬರಲಿದ್ದರೆ ಆಸ್ಟ್ರೇಲಿಯಾಕ್ಕೂ ಲಸಿಕೆ ಆರಂಭದಲ್ಲಿಯೇ ಲಭ್ಯವಾಗಲಿದೆ. ಎಲ್ಲ ಆಸ್ಟ್ರೇಲಿಯನ್ನರಿಗೂ ಲಸಿಕೆ ನೀಡಲಾಗುವುದು.

ಆದರೆ ಆದ್ಯತಾ ವಲಯವನ್ನು ಪರಿಣತರ ಸಮಿತಿ ನಿರ್ಧರಿಸಲಿದೆ ಎಂದು ಅಲ್ಲಿನ ಆರೋಗ್ಯ ಸಚಿವರು ಹೇಳಿದ್ದಾರೆ. ಸದ್ಯ ಆಸ್ಟ್ರೇಲಿಯಾದ ವಿಕ್ಟೋರಿಯಾ ರಾಜ್ಯದಲ್ಲಿ ಕೋವಿಡ್ ಸೋಂಕು ಅತಿ ಹೆಚ್ಚಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.