ಕೋವಿಡ್ ಹೀರೋಸ್: ಹೆರಿಗೆಯಾದ ಇಪ್ಪತ್ತೇ ದಿನದಲ್ಲಿ ಕರ್ತವ್ಯಕ್ಕೆ ಹಾಜರಾದ ಕಮಿಷನರ್


Team Udayavani, Apr 12, 2020, 7:49 PM IST

ಕೋವಿಡ್ ಹಿರೋಸ್: ಹೆರಿಗೆಯಾದ ಇಪ್ಪತ್ತೇ ದಿನದಲ್ಲಿ ಕರ್ತವ್ಯಕ್ಕೆ ಹಾಜರಾದ ಕಮಿಷನರ್

ವಿಶಾಖಪಟ್ಟಣಂ: ಕೋವಿಡ್ ವೈರಸ್ ಮಹಾಮಾರಿಯ ಉಪಟಳದಿಂದ ಒಂದೆಡೆ ಸಾರ್ವಜನಿಕರು ನಾಲ್ಕು ಗೋಡೆಗಳ ನಡುವೆ ಬಂಧಿಯಾಗಿದ್ದರೆ ಇನ್ನೊಂದೆಡೆ ವೈದ್ಯರು, ನರ್ಸ್ ಗಳೂ ಸೇರಿದಂತೆ ಒಂದು ಬಲುದೊಡ್ಡ ಸರಕಾರಿ ಸೇವಾ ವರ್ಗವು ಹಗಳಿರುಳೆನ್ನದೆ ಈ ಸೋಂಕಿನ ವಿರುದ್ಧ ನೇರಾ ನೇರಾ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಹುಡುಕುತ್ತಾ ಹೋದರೆ ಇಂತಹ ಒಬ್ಬೊಬ್ಬರದ್ದೂ ಒಂದೊಂದು ಕಥೆ, ಅದಕ್ಕೆ ಅವರನ್ನೆಲ್ಲಾ ಈ ಸಂದರ್ಭದಲ್ಲಿ ನಾವು ರಿಯಲ್ ಹೀರೋಗಳೆಂದು ಕರೆಯವುದು.

ಇಲ್ಲೊಬ್ಬರು ಇಂತಹ ರಿಯಲ್ ಹೀರೋ ನಮ್ಮ ಮುಂದಿದ್ದಾರೆ. ಅವರೇ ಗ್ರೇಟರ್ ವಿಶಾಖಪಟ್ಟಣಂ ಮುನ್ಸಿಪಲ್ ಕಾರ್ಪೊರೇಷನ್ ನಲ್ಲಿ (ಜಿ.ವಿ.ಎಂ.ಸಿ.) ಕಮಿಷನರ್ ಆಗಿ ಸೇವೆ ಸಲ್ಲಿಸುತ್ತಿರುವ ಜಿ. ಶ್ರೀಜನಾ ಎಂಬ ಹೆಣ್ಣುಮಗಳು.

IAS ಅಧಿಕಾರಿಯಾಗಿರುವ ಶ್ರೀಜನಾ ಅವರು ತಮ್ಮ ಹೆರಿಗೆಯಾದ 22ನೇ ದಿನಕ್ಕೆ ಕರ್ತವ್ಯಕ್ಕೆ ಹಾಜರಾಗುವ ಮೂಲಕ ಕೋವಿಡ್ ವಿರುದ್ಧದ ಹೋರಾಟದಲ್ಲಿ ತನ್ನ ಅಗತ್ಯತೆಯನ್ನು ಸಾಬೀತುಪಡಿಸಿದ್ದಾರೆ. ಶ್ರೀಜನಾ ಅವರು ತಮ್ಮ ಹೆರಿಗೆಯಾಗುವ ಕೆಲ ದಿನಗಳ ಮುಂಚಿನವರೆಗೂ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಇವರು ಬಳಿಕ ಹೆರಿಗೆಗಾಗಿ ರಜೆ ಪಡೆದುಕೊಂಡಿದ್ದರು.

ಶ್ರೀಜನಾ ಅವರು ಗಂಡು ಮಗುವಿಗೆ ಜನ್ಮ ನೀಡಿದ ಸ್ವಲ್ಪ ದಿನದಲ್ಲೇ ದೇಶಾದ್ಯಂತ ಲಾಕ್ ಡೌನ್ ಪರಿಸ್ಥಿತಿಯನ್ನು ಕೇಂದ್ರ ಸರಕಾರ ಘೋಷಿಸಿತು. ಹೀಗಾಗಿ, ತಮ್ಮ ತಮ್ಮ ವ್ಯಾಪ್ತಿಯಲ್ಲಿ ಜನರು ಮನೆಯಿಂದ ಹೊರಬರುವಂತೆ ಮಾಡುವಲ್ಲಿ ಹಾಗೂ ಕೋವಿಡ್ ಪ್ರಕರಣಗಳ ನಿಗಾ, ಜನರಿಗೆ ಸರಕಾರದ ಸೌಲಭ್ಯಗಳನ್ನು ತಲುಪಿಸುವ ಉಸ್ತುವಾರಿ ಹೀಗೆ ನಾನಾ ವಿಚಾರದಲ್ಲಿ ಈ ಸಂಕಷ್ಟದ ಸಂದರ್ಭದಲ್ಲಿ ಸ್ಥಳೀಯಾಡಳಿತಗಳ ಮೇಲೆ ಹೆಚ್ಚಿನ ಜವಾಬ್ದಾರಿ ಬಿತ್ತು. ಇದನ್ನು ಅರಿತಕೊಂಡ ಈ ಐ.ಎ.ಎಸ್. ಅಧಿಕಾರಿ ಈ ಸಂಕಷ್ಟದ ಸಂದರ್ಭದಲ್ಲಿ ತಾನು ಕರ್ತವ್ಯ ನಿರ್ವಹಿಸುವುದು ಅತೀ ಅಗತ್ಯ ಎಂಬುದನ್ನು ಅರಿತುಕೊಂಡು ಹೆರಿಗೆಯಾದ 22ನೇ ದಿನಕ್ಕೇ ಜಿವಿಎಂಸಿ ಕಛೇರಿಗೆ ಕರ್ತವ್ಯಕ್ಕೆ ಹಾಜರಾಗುವ ಮೂಲಕ ಎಲ್ಲರನ್ನೂ ಆಶ್ಚರ್ಯಚಕಿತರನ್ನಾಗಿಸಿದ್ದಾರೆ.


ತನ್ನ ಕರ್ತವ್ಯದ ಜೊತೆ ನವಜಾತ ಶಿಸುವಿನ ಲಾಲನೆ ಪಾಲನೆ ಹೇಗೆ ಎಂಬ ವಿಷಯದ ಕುರಿತಾಗಿ ಕೇಳಿದಾಗ ಶ್ರೀಜನ ಈ ವಿಚಾರದಲ್ಲಿ ತನ್ನ ಪತಿ ಹಾಗೂ ಅತ್ತೆ ಸಹಕಾರವನ್ನು ನೆನಪಿಸಿಕೊಳ‍್ಳುತ್ತಾರೆ. ವಕೀಲರಾಗಿರುವ ಇವರ ಪತಿ ಹಾಗೂ ಇವರ ಅತ್ತೆ ಶ್ರೀಜನಾ ಅವರು ಕರ್ತವ್ಯಕ್ಕೆ ತೆರಳಿದ ಬಳಿಕ ಮಗುವನ್ನು ನೋಡಿಕೊಳ್ಳುತ್ತಾರೆ. ಮತ್ತು ಪ್ರತೀ ನಾಲ್ಕು ಗಂಟೆಗಳಿಗೊಮ್ಮೆ ಶ್ರೀಜನಾ ಅವರು ಮನೆಗ ಬಂದು ಮಗುವಿಗೆ ಹಾಲುಣಿಸಿ ತೆರಳುತ್ತಾರೆ.

ಈ ಮೂಲಕ ಜವಾಬ್ದಾರಿಯುತ ಹುದ್ದೆಯಲ್ಲಿದ್ದು ಈ ಸಂದರ್ಭದಲ್ಲಿ ತನ್ನ ಸಾಮಾಜಿಕ ಬದ್ಧತೆಯನ್ನು ಮತ್ತು ಕರ್ತವ್ಯ ನಿಷ್ಠೆಯನ್ನು ಮೆರೆಯುತ್ತಿರುವ ಈ ಐ.ಎ.ಎಸ್. ಅಧಿಕಾರಿಯ ಸೇವೆಗೊಂದು ಸಲಾಂ ಹೊಡೆಯಲೇಬೇಕು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.