ಝೆಕ್ ಸಚಿವರಿಗೆ ತರಾಟೆ ; ಕೋವಿಡ್ ಪೀಡಿತರ ಸಂಖ್ಯೆ 12,440ಕ್ಕೆ ಏರಿದೆ.
Team Udayavani, Jul 6, 2020, 1:25 PM IST
ಪೆರುಗ್ವೆ: ಇಲ್ಲಿನ ರೆಸ್ಟೋರೆಂಟ್ ಒಂದರಲ್ಲಿ ಕುಳಿತಿರುವ ಗ್ರಾಹಕರು.
ಪೆರುಗ್ವೆ: ದೇಶದ ಗಣಿಗಾರಿಕೆ ಪ್ರದೇಶಗಳಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ವೇಗವಾಗಿ ಸೋಂಕು ಹರಡುತ್ತಿದೆ. ಆದರೂ ದೇಶದ ಗಣಿಗಾರಿಕೆ ಪ್ರದೇಶದಲ್ಲಿ ಪರಿಸ್ಥಿತಿ ಸುಧಾರಿಸಿದ್ದು, ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬಂದಿದೆ ಎಂದು ಝೆಕ್ ರಿಪಬ್ಲಿಕ್ ಆರೋಗ್ಯ ಸಚಿವರು ಹೇಳಿಕೆ ನೀಡಿದ್ದಾರೆ. ಆದರೆ ಇದರ ಬೆನ್ನಲೇ ಸಚಿವರ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದು, ಅವರು ನೀಡಿರುವ ಹೇಳಿಕೆ ಕುರಿತು ಟೀಕೆಗಳು ಕೇಳಿ ಬರುತ್ತಿದೆ.
ದೇಶದ ಗಣಿಗಾರಿಕೆ ಪ್ರದೇಶಗಳ ವಾಸ್ತವ ಸ್ಥಿತಿ ಬೇರೆಯೇ ಇದೆ. ಸೋಂಕು ತ್ವರಿತವಾಗಿ ಹರಡುತ್ತಿದ್ದು, ಗಣಿ ಕಾರ್ಮಿಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಸಾಕಷ್ಟು ಜನರ ಸೋಂಕು ಪರೀಕ್ಷೆ ವರದಿ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಕಲ್ಲಿದ್ದಲು ಗಣಿಗಾರಿಕೆ ಕಾರ್ಖಾನೆ ಒಕೆಡಿ ಕಾರ್ಯಾಚರಣೆ ನಿಲ್ಲಿಸಿದ್ದು, ಪೋಲಂಡ್ ಗಡಿ ಹಾಗೂ ದೇಶದ ಪೂರ್ವದ ಕಾರ್ವಿನಾ ಪ್ರದೇಶದ ಗಣಿ ಕೈಗಾರಿಕೆ ಘಟಕಗಳನ್ನು ಮುಚ್ಚಲಾಗಿದೆ.
ಜತೆಗೆ ಸ್ಲೊವೇನಿಯಾ ಸೇರಿದಂತೆ ಇತರ ಕೆಲವು ಇಯು ರಾಷ್ಟ್ರಗಳು ಝೆಕ್ ರಿಪಬ್ಲಿಕ್ ಅನ್ನು ಸುರಕ್ಷಿತ ದೇಶಗಳ ಪಟ್ಟಿಯಿಂದ ಹೊರ ಹಿಡಬೇಕು ಎಂಬ ಅಭಿಪ್ರಾಯವನ್ನು ಹೊರ ಹಾಕಿದೆ. ವಿರೋಧ ಪಕ್ಷದ ನಾಯಕನ ಟೀಕೆಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಆ್ಯಡಮ್ ವೋಜೆಕ್ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ಸೋಂಕಿತರು ಸರಕಾರದ ನಿಯಮಗಳನ್ನು ಪಾಲಿಸಿ ಕ್ವಾರಂಟೈನ್ಗೆ ಒಳಗಾದರೆ ಪ್ರಕರಣಗಳ ಪ್ರಮಾಣದಲ್ಲಿ ಮತ್ತಷ್ಟು ಕಡಿತವಾಗಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ