ದಾವಣಗೆರೆ: ಕೋವಿಡ್ ಗೆ ಮತ್ತೆ 3 ಬಲಿ, 297 ಹೊಸ ಪ್ರಕರಣ
Team Udayavani, Sep 10, 2020, 8:08 PM IST
ದಾವಣಗೆರೆ: ಜಿಲ್ಲೆಯಲ್ಲಿ ಗುರುವಾರ ಕೋವಿಡ್ ಗೆ ಮತ್ತೆ ಮೂವರು ಬಲಿಯಾಗಿದ್ದಾರೆ. ಮೂವರ ಸಾವಿನಿಂದ ಜಿಲ್ಲೆಯಲ್ಲಿ ಈವರೆಗೆ ಕೋವಿಡ್ ನಿಂದ 223 ಜನರು ಮೃತಪಟ್ಟಂತಾಗಿದೆ. 297 ಜನರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.
ದಾವಣಗೆರೆಯ ಪಿ.ಜೆ. ಬಡಾವಣೆಯ 75 ವರ್ಷದ ವೃದ್ಧ (ರೋಗಿ ನಂಬರ್ 380764), ನಿಟುವಳ್ಳಿಯ 60 ವರ್ಷದ ವೃದ್ಧೆ (ರೋಗಿ ನಂಬರ್ 396694), ಹರಿಹರದ ಜೆ.ಸಿ.ಬಡಾವಣೆಯ 73 ವರ್ಷದ ವೃದ್ಧ (ರೋಗಿ ನಂಬರ್ 431164) ಇಂದು ಮೃತಪಟ್ಟವರು.
ಕೋವಿಡ್ ನಿಂದ ಗುಣಮುಖರಾದ 244 ಜನರು ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 12,189 ಪ್ರಕರಣಗಳಲ್ಲಿ ಈವರೆಗೆ 9213 ಜನರು ಡಿಸ್ಚಾರ್ಜ್ ಆಗಿದ್ದಾರೆ.
ಬೀದರನಲ್ಲಿ 98 ಪಾಸಿಟಿವ್ ಪತ್ತೆ
ಬೀದರ್ ಜಿಲ್ಲೆಯಲ್ಲಿ ಗುರುವಾರ ಮತ್ತೆ ಕೋವಿಡ್ ಆರ್ಭಟಿಸಿದ್ದು, 98 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಈಗ 5200ಕ್ಕೆ ಏರಿಕೆ ಆಗಿದ್ದು, ಈ ಪೈಕಿ 143 ಜನರು ಚಿಕಿತ್ಸೆ ಫಲಿಸದೇ ಪ್ರಾಣ ಕಳೆದುಕೊಂಡಿದ್ದಾರೆ. ಇಂದು 94 ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 4525 ಜನರು ಡಿಸ್ಚಾರ್ಜ್ ಆದಂತಾಗಿದೆ. ಇನ್ನೂ 528 ಸಕ್ರೀಯ ಪ್ರಕರಣಗಳು ಜಿಲ್ಲೆಯಲ್ಲಿವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ