ಸಾವಿನ ಸಂಖ್ಯೆ 5ಕ್ಕೇರಿಕೆ: 181 ಮಂದಿಗೆ ಕೋವಿಡ್ 19 ಸೋಂಕು
ಮೂವರು ಗುಣಮುಖ ; ರಾಜ್ಯದ ವಿವಿಧೆಡೆ ಹೊಸದಾಗಿ ಆರು ಪ್ರಕರಣ ಪತ್ತೆ
Team Udayavani, Apr 9, 2020, 5:05 AM IST
ಬೆಂಗಳೂರು: ಕೋವಿಡ್ 19 ವೈರಸ್ ಸೋಂಕಿನಿಂದ ರಾಜ್ಯದಲ್ಲಿ ಮತ್ತೂಬ್ಬ ವ್ಯಕ್ತಿ ಮೃತಪಟ್ಟಿದ್ದು, ಸಾವಿಗೀಡಾದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಬುಧವಾರ ರಾಜ್ಯದ ವಿವಿಧೆಡೆ ಹೊಸದಾಗಿ ಆರು ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಸೋಂಕಿಗೊಳಗಾಗಿದ್ದವರ ಸಂಖ್ಯೆ 181ಕ್ಕೆ ತಲುಪಿದೆ. ಸೋಂಕಿತರ ಪೈಕಿ ಮೂರು ಮಂದಿ ಬುಧವಾರ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದು ಒಟ್ಟು 28 ಮಂದಿ ಗುಣಮುಖರಾಗಿದ್ದಾರೆ.
ರಾಜ್ಯ ಮಾತ್ರವಲ್ಲದೇ ದೇಶದಲ್ಲಿಯೇ ಕೋವಿಡ್ 19ಗೆ ಮೊದಲ ಸಾವು ಸಂಭವಿಸಿದ್ದ ಕಲಬುರಗಿಯಲ್ಲಿಯೇ ಮತ್ತೂಂದು ಸಾವಾಗಿದೆ. ಮೃತ 65 ವರ್ಷದ ವೃದ್ಧ ಕಲಬುರಗಿ ಬಸ್ ನಿಲ್ದಾಣದಲ್ಲಿ ಹಣ್ಣಿನ ವ್ಯಾಪಾರಿಯಾಗಿದ್ದು, ಎ. 4ರಂದು ತೀವ್ರ ಉಸಿರಾಟ ತೊಂದರೆ (ಎಸ್ಎಆರ್ಐ) ಹಿನ್ನೆಲೆಯಲ್ಲಿ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಸರಕಾರಿ ಕೋವಿಡ್ 19 ಆಸ್ಪತ್ರೆಗೆ ಶಿಫಾರಸು ಮಾಡಿದ ಆಸ್ಪತ್ರೆ ವೈದ್ಯರು ಎ.6ರ ಸಂಜೆ ಕಲಬುರಗಿಯ ಇಎಸ್ಐ ಆಸ್ಪತ್ರೆಗೆ ಕಳುಹಿಸಿದ್ದರು. ಕೋವಿಡ್ 19 ಶಂಕೆ ಹಿನ್ನೆಲೆ ವೃದ್ಧನ ಗಂಟಲಿನ ದ್ರಾವಣವನ್ನು ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳಿಹಿಸಲಾಗಿತ್ತು. ಆದರೆಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಾವೀಗಿಡಾಗಿದ್ದರು. ಬುಧವಾರ ಈ ವರದಿ ಬಂದಿದ್ದು, ಅವರಿಗೆ ಕೋವಿಡ್ 19 ಸೋಂಕು ತಗಲಿದ್ದುದು ಖಚಿತಪಟ್ಟಿದೆ. ಬುಧವಾರ ಕಲಬುರಗಿಯಲ್ಲಿ ಇಬ್ಬರಿಗೆ, ಮಂಡ್ಯ, ಬೆಂಗಳೂರು,ಉತ್ತರ ಕನ್ನಡ, ಚಿಕ್ಕಬಳ್ಳಾಪುರದಲ್ಲಿ ತಲಾ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ.
ಸೋಂಕು ದೃಢವಾದ ವ್ಯಕ್ತಿಗಳೊಂದಿಗೆ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿದ್ದ ವ್ಯಕ್ತಿಗಳ ಪತ್ತೆಗೆ ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದ್ದು, ಅವರೆಲ್ಲರನ್ನೂ ಶಂಕಿತರು ಎಂದು ಗುರುತಿಸಿ ಮನೆ ಮತ್ತು ಆಸ್ಪತ್ರೆಯಲ್ಲಿ ನಿಗಾ ವಹಿಸಲಿದ್ದು ಕಡ್ಡಾಯವಾಗಿ ಎಲ್ಲರಿಗೂ ಸೋಂಕು ಪರೀಕ್ಷೆ ಮಾಡಲಿದೆ.
ಮೂವರು ಗುಣಮುಖರಾಗಿ ಮನೆಗೆ
ಕೋವಿಡ್ 19 ಸೋಂಕಿಗೊಳಗಾಗಿದ್ದವರ ಪೈಕಿ ಉತ್ತರ ಕನ್ನಡದಲ್ಲಿ ಇಬ್ಬರು ಮತ್ತು ಕೊಡಗಿನಲ್ಲಿ ಒಬ್ಬರು ಸಂಪೂರ್ಣ ಗುಣಮುಖರಾಗಿ ಮನೆಗೆ ತೆರಳಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
– ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಪರ್ಕದಿಂದ ಅವಲೋಕನದಲ್ಲಿರುವವರು – 25,971. ಈ ಪೈಕಿ ಸೋಂಕಿತನ ಪ್ರಾಥಮಿಕ ಸಂಪರ್ಕಿತರು -1,561, ದ್ವಿತೀಯ ಸಂಪರ್ಕಿತರು – 6,261
– ಆಸ್ಪತ್ರೆಗೆ ಬುಧವಾರ ದಾಖಲಾದ ಕೋವಿಡ್ 19 ಶಂಕಿತರು – 95, ಬಿಡುಗಡೆಯಾದವರು – 48, ಸದ್ಯ ಆಸ್ಪತ್ರೆಯಲ್ಲಿರುವ ಶಂಕಿತರು ಒಟ್ಟು- 384
– ಬುಧವಾರ ನೆಗೆಟಿವ್ ಬಂದ ವರದಿಗಳು- 424. ಪಾಸಿಟಿವ್ ಬಂದ ವರದಿಗಳು – 6 ( ಈವರೆಗೂ ಒಟ್ಟಾರೆ ನೆಗೆಟಿವ್ – 6,473, ಪಾಸಿಟಿವ್ – 181)
– ಶಂಕಿತರ ಪೈಕಿ ಬುಧವಾರ ಸೋಂಕು ಪರೀಕ್ಷೆಗೆ ಸಂಗ್ರಹಿಸಿದ ಗಂಟಲು ದ್ರಾವಣ ಮಾದರಿಗಳು – 516
– ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ 19 ಸೋಂಕಿತರು – 148
– ತುರ್ತು ಸಮಯದಲ್ಲಿ ಆಂಬುಲೆನ್ಸ್ ಲಭ್ಯವಾಗದಿದ್ದಲ್ಲಿ ಓಲಾ/ ಊಬರ್ ಸಂಪರ್ಕಕ್ಕೆ – 9154153917/18/19
ಮನೆ- ಮನೆಗೆ ಜನೌಷಧ: ಸದಾನಂದ ಗೌಡ
ಪ್ರಧಾನಮಂತ್ರಿ ಭಾರತೀಯ ಜನೌಷಧ ಪರಿಯೋಜನೆಯ ಜನೌಷಧ ಕೇಂದ್ರಗಳ ಮೂಲಕ ಮನೆ ಮನೆಗೆ ಔಷಧ ಸರಬರಾಜು ಮಾಡುವ ಸೌಲಭ್ಯಕ್ಕೆ ಚಾಲನೆ ನೀಡಲಾಗಿದೆ. ಅಗತ್ಯ ವಿದ್ದವರು, ಹಿರಿಯ ನಾಗರಿಕರು ಈ ಸೌಲಭ್ಯ ಪಡೆಯಬಹುದು. ಇದಕ್ಕಾಗಿಯೇ “ಜನೌಷ ಧ ಸುಗಮ್’ ಆ್ಯಪ್ ರೂಪಿಸಲಾಗಿದ್ದು, ಇದರಿಂದ ಸಮೀಪದ ಜನೌಷಧ ಕೇಂದ್ರ, ಲೊಕೇಷನ್ ಮ್ಯಾಪ್, ಆ ಕೇಂದ್ರದಲ್ಲಿ ತಮಗೆ ಬೇಕಾದ ಔಷಧ ಲಭ್ಯತೆ ವಿವರ ಸಹಿತ ಮಳಿಗೆಯ ದೂರವಾಣಿ ಸಂಖ್ಯೆಯ ಮಾಹಿತಿ ಇರಲಿದೆ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ