ದಿಲ್ಲಿಯಲ್ಲಿ ದೇಶದ ಅತಿ ದೊಡ್ಡ ಕೋವಿಡ್‌ ಕೇರ್‌ ಸೆಂಟರ್‌

ಆಸ್ಪತ್ರೆಯಾಗಿ ಮಾರ್ಪಟ್ಟ ರಾಧಾ ಸೋಮಿ ಸತ್ಸಂಗ ಕೇಂದ್ರ ; ಸೋಂಕಿತರಿಗಾಗಿ 10,208 ಬೆಡ್‌ ಅಳವಡಿಕೆ

Team Udayavani, Jun 26, 2020, 6:51 AM IST

ದಿಲ್ಲಿಯಲ್ಲಿ ದೇಶದ ಅತಿ ದೊಡ್ಡ ಕೋವಿಡ್‌ ಕೇರ್‌ ಸೆಂಟರ್‌

ಹೊಸದಿಲ್ಲಿ: ಕೋವಿಡ್ 19 ಸೋಂಕಿತರಿಗೆ ಚಿಕಿತ್ಸೆ ನೀಡಲು ದಿಲ್ಲಿಯಲ್ಲಿ ದೇಶದಲ್ಲೇ ದೊಡ್ಡದಾದ ತಾತ್ಕಾಲಿಕ ಚಿಕಿತ್ಸಾ ಕೇಂದ್ರವನ್ನು ತೆರೆಯಲಾಗಿದೆ.

ದಿಲ್ಲಿಯ ಹೊರವಲಯದಲ್ಲಿರುವ ವಿಶಾಲವಾದ ರಾಧಾ ಸೋಮಿ ಸತ್ಸಂಗ ಬಿಯಾಸ್‌ ಕ್ಯಾಂಪಸ್‌ನಲ್ಲಿ ತಾತ್ಕಾಲಿಕ 10,208 ಬೆಡ್‌ಗಳನ್ನು ಅಳವಡಿಸಲಾಗುತ್ತಿದೆ.

ಈ ಕ್ಯಾಂಪಸ್‌ ಸುಮಾರು 22 ಫ‌ುಟ್‌ಬಾಲ್‌ ಕ್ರೀಡಾಂಗಣಗಳಷ್ಟು ವಿಸ್ತೀರ್ಣವನ್ನು ಹೊಂದಿದೆ. ಇದಕ್ಕೆ ಸರ್ದಾರ್‌ ಪಟೇಲ್‌ ಕೋವಿಡ್‌ ಕೇರ್‌ ಸೆಂಟರ್‌ ಹಾಗೂ ಹಾಸ್ಟಿಟಲ್‌ ಎಂದು ಹೆಸರಿಡಲಾಗಿದೆ.

ಆಸ್ಪತ್ರೆಯಾಗಿ ಮಾರ್ಪಟ್ಟ ಕ್ಯಾಂಪಸ್‌: ಈ ಕ್ಯಾಂಪಸ್‌ 1,700 ಅಡಿ ಉದ್ದ, 700 ಅಡಿ ಅಗಲ ಹಾಗೂ 200 ಆವರಣಗಳನ್ನು ಒಳಗೊಂಡಿದೆ. ಇಲ್ಲಿನ ನೆಲ ಮಣ್ಣಿನಿಂದ ಕೂಡಿದ್ದು, ಕಾಪೆìಟ್ಸ್‌ನಿಂದ ಮುಚ್ಚಲಾಗಿದೆ.

ಇದರ ಮೇಲೆ ವಿನೈಲ್‌ ಶೀಟ್‌ ಹಾಕಲಾಗಿದ್ದು, ಸ್ವಚ್ಛಗೊಳಿಸಲು ಸುಲಭವಾಗುವಂತೆ ಮಾಡಲಾಗಿದೆ. ಕ್ಯಾಂಪಸ್‌ ಅನ್ನು 116 ವಿಭಾಗ ಮಾಡಲಾಗಿದ್ದು, ಪ್ರತಿ ವಿಭಾಗಕ್ಕೆ 88 ಬೆಡ್‌ನ‌ಂತೆ 10,208 ಬೆಡ್‌ಗಳನ್ನು ಅಳವಡಿಸಲಾಗುತ್ತಿದೆ.

ಈಗಾಗಲೇ 2 ಸಾವಿರ ಬೆಡ್‌ಗಳನ್ನು ಸಿದ್ಧಪಡಿಸಲಾಗಿದ್ದು, ಜುಲೈ ಮೊದಲ ವಾರದಲ್ಲಿ 10,208 ಹಾಸಿಗೆಗಳು ಸಿದ್ಧವಾಗ ಲಿವೆ. ಈ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ನಿರ್ಮಾಣಕ್ಕಾಗಿ ಇಂಡೋ ಟಿಬೇಟಿಯನ್‌ ಗಡಿ ಪಡೆಯನ್ನು ಬಳಸಿಕೊಳ್ಳಲಾಗಿದೆ.

ಬೆಡ್‌ಗಳ ಅಳವಡಿಕೆ: ಈ ಕೇಂದ್ರದಲ್ಲಿ ಪ್ರತಿ 5 ಅಡಿ ಅಂತರದಲ್ಲಿ ಒಂದು ಬೆಡ್‌ ಅಳವಡಿಸಲಾಗಿದೆ. ಕಬ್ಬಿಣದ ಮಂಚಕ್ಕೆ ಹೊದಿಕೆ, ಹಾಸಿಗೆ, ದಿಂಬುಗಳನ್ನು ಕಲ್ಪಿಸಲಾಗಿದೆ. ಪ್ರತಿ ಬೆಡ್‌ಗೆ ಒಂದು ಚೇರ್‌, ಸ್ಟೂಲ್‌, ಕಸದ ಡಬ್ಬಿಯನ್ನು ಇಡಲಾಗಿದೆ.

3 ಬೆಡ್‌ಗಳಿಗೆ ಒಂದರಂತೆ ಫ್ಯಾನ್‌ ಅಳವಡಿಸಲಾಗಿದೆ. ಜತೆಗೆ 18 ಸಾವಿರ ಟನ್‌ ಹವಾ ನಿಯಂತ್ರಣ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಚಿಕಿತ್ಸಾ ಕೇಂದ್ರವನ್ನು ಮೂರು ವಿಭಾಗಗಳಾಗಿ ವಿಂಗಡಿಸಲಾಗಿದ್ದು, ಒಂದು ಬೃಹತ್‌ ವಿಭಾಗದಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ಇನ್ನೊಂದು ವಿಭಾಗವನ್ನು ವೈದ್ಯರು, ನರ್ಸ್‌ಗಳು ಸೇರಿದಂತೆ ವೈದ್ಯಕೀಯ ಸಿಬಂದಿ ಹಾಗೂ ಮತ್ತೂಂದು ವಿಭಾಗವನ್ನು ಕಮಾಂಡೋಗಳಿಗೆ ಮೀಸಲಿಡಲಾಗಿದೆ.

ಚಿಕಿತ್ಸೆ: ಈ ಚಿಕಿತ್ಸಾ ಕೇಂದ್ರಕ್ಕೆ ರೋಗಿಗಳ ಸಂಬಂ ಧಿಕರು ಪ್ರವೇಶಿಸಲು ಅವಕಾಶವಿಲ್ಲ. ಆ್ಯಂಬುಲೆನ್ಸ್‌ ಮೂಲಕ ಸೋಂಕಿತರನ್ನು ಇಲ್ಲಿಗೆ ಕರೆದುಕೊಂಡು ಬರಲಾಗುವುದು. ಸಿಬಂದಿಗಳ ಮೂಲಕ ರೋಗಿಗಳಿಗೆ ವಸ್ತುಗಳನ್ನು ತಲುಪಿಸಬಹುದಾಗಿದೆ.

ಇ-ಹಾಸ್ಟಿಟಲ್‌ ಆ್ಯಪ್‌ ಅಭಿವೃದ್ಧಿ ಪಡಿಸಲಾಗಿದ್ದು, 400 ಕಂಪ್ಯೂಟರ್‌, ಇಂಟರ್‌ನೆಟ್‌, ಮೊಬೈಲ್‌ ಸಂಪರ್ಕ ಕಲ್ಪಿಸಲಾಗಿದೆ. ಈ ಕೇಂದ್ರವು ಚೀನದಲ್ಲಿ ತೆರೆದಿದ್ದ ತಾತ್ಕಾಲಿಕ ಚಿಕಿತ್ಸಾ ಕೇಂದ್ರಕ್ಕಿಂತ 10 ಪಟ್ಟು ದೊಡ್ಡದ್ದಾಗಿದೆ.

ಮೊಬೈಲ್‌, ಲ್ಯಾಪ್‌ಟಾಪ್‌ ಬಳಸಲು ಸೌಲಭ್ಯ
ಪ್ರತಿ ಬೆಡ್‌ಗೆ ಮೊಬೈಲ್‌, ಲ್ಯಾಪ್‌ಟಾಪ್‌ ಚಾರ್ಜಿಂಗ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಸೋಂಕಿತರು ಲ್ಯಾಪ್‌ಟಾಪ್‌ ತರಲು ಅವಕಾಶ ನೀಡಲಾಗಿದೆ. ರೋಗಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲು ಸ್ವಯಂಸೇವಕರ ಪಡೆಯನ್ನು ನಿಯೋಜಿಸಲಾಗಿದೆ.

ರಾಧಾ ಸೋಮಿ ಸತ್ಸಂಗ ಬಿಯಾಸ್‌ ಸಂಸ್ಥೆಯು ದಿನಕ್ಕೆ 3 ಲಕ್ಷ ಮಂದಿಗೆ ಊಟವನ್ನು ತಯಾರಿಸುವ ಸಾಮರ್ಥ್ಯವನ್ನು ಹೊಂದಿದೆ. 70 ಪೋರ್ಟಬಲ್‌ ಟಾಯ್ಲೆಟ್‌ ಸೇರಿದಂತೆ 600 ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ. ದಿನಕ್ಕೆ 2 ಬಾರಿ ಸ್ವಚ್ಛಗೊಳಿಸಲಾಗುತ್ತಿದೆ. ಪ್ರತಿ ಸಿಬಂದಿ ಪಿಪಿಇ ಕಿಟ್‌ ಧರಿಸಿ ಕಾರ್ಯನಿರ್ವಹಿಸಲಿದ್ದಾರೆ. ದಿಲ್ಲಿ ಜಲ ಮಂಡಳಿಯು ನೀರು ಸರಬರಾಜು ಮಾಡಲಿದೆ.

ಐಸೋಲೇಷನ್‌ ನಿಯಮಗಳಲ್ಲಿ ಬದಲು
ದಿಲ್ಲಿ ಸರಕಾರದ ಕೋರಿಕೆಯ ಮೇರೆಗೆ ಕೇಂದ್ರ ಸರಕಾರವು ಹೋಂ ಐಸೋ ಲೇಷನ್‌ ಮಾರ್ಗಸೂಚಿಯನ್ನು ಗುರುವಾರ ವಾಪಸ್‌ ಪಡೆದಿದೆ. ಕೋವಿಡ್ 19 ಸೋಂಕಿತರೆಲ್ಲರೂ ಕಡ್ಡಾಯವಾಗಿ ಕೋವಿಡ್‌ ಕೇಂದ್ರದಲ್ಲೇ ಚಿಕಿತ್ಸೆ ಪಡೆಯಬೇಕು ಎಂದು ಕೇಂದ್ರ ಸರಕಾರ ಇತ್ತೀಚೆಗೆ ಆದೇಶಿಸಿತ್ತು. ಆದರೆ, ಎಲ್ಲರೂ ಕೋವಿಡ್ 19 ಕೇಂದ್ರಕ್ಕೆ ಬಂದರೆ, ಗೊಂದಲ ಉಂಟಾಗುವುದಲ್ಲದೇ, ವೈದ್ಯಕೀಯ ಸಿಬಂದಿಗೂ ತೀವ್ರ ಹೊರೆಯಾಗಲಿದೆ ಎಂದು ದಿಲ್ಲಿ ಸರಕಾರ ಹೇಳಿತ್ತು.

ಈ ಹಿನ್ನೆಲೆಯಲ್ಲಿ ನಿಯಮ ಬದಲಾಯಿಸಿರುವ ಕೇಂದ್ರ ಸರಕಾರ, ಯಾರಿಗೆ ಮನೆಯಲ್ಲಿ ಸೂಕ್ತ ವ್ಯವಸ್ಥೆ ಲಭ್ಯವಿಲ್ಲವೋ ಅಂಥವರು ಮಾತ್ರ ಕೋವಿಡ್‌ ಕೇಂದ್ರಕ್ಕೆ ಬಂದರೆ ಸಾಕು ಎಂದು ಹೇಳಿದೆ. ಹೀಗಾಗಿ, ಇನ್ನು ಮುಂದೆ ವೈದ್ಯಕೀಯ ತಂಡವೇ ಸೋಂಕಿತರ ಮನೆಗೆ ತೆರಳಿ, ಅವರನ್ನು ಪರೀಕ್ಷೆಗೊಳಪಡಿಸಿ, ಅವರು ಮನೆಯಲ್ಲೇ ಐಸೋಲೇಷನ್‌ನಲ್ಲಿದ್ದರೆ ಸಾಕೇ ಅಥವಾ ಕೋವಿಡ್‌ ಕೇರ್‌ ಕೇಂದ್ರಗಳಿಗೆ ಶಿಫ್ಟ್ ಆಗಬೇಕೇ ಎಂಬುದನ್ನು ನಿರ್ಧರಿಸಲಿದೆ ಎಂದು ಡಿಸಿಎಂ ಮನೀಷ್‌ ಸಿಸೋಡಿಯಾ ಹೇಳಿದ್ದಾರೆ.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.