ಹಾಂಕಾಂಗ್‌ನಲ್ಲಿ ಮಾಸ್ಕ್ ಕಡ್ಡಾಯವಲ್ಲ; ಸೋಲ್‌: ಶಾಲೆ ಮುಚ್ಚಲು ನಿರ್ಧಾರ

ಸಾರ್ವಜನಿಕ ಸ್ಥಳಗಳಲ್ಲಿ ಪಾಲಿಸಬೇಕಾದ ಕೆಲ ನಿಯಮಗಳಲ್ಲಿ ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ.

Team Udayavani, Aug 26, 2020, 8:47 AM IST

ಹಾಂಕಾಂಗ್‌ನಲ್ಲಿ ಮಾಸ್ಕ್ ಕಡ್ಡಾಯವಲ್ಲ; ಸೋಲ್‌: ಶಾಲೆ ಮುಚ್ಚಲು ನಿರ್ಧಾರ

ಹಾಂಕಾಂಗ್‌: ವಿಶ್ವದ ಕೆಲವೊಂದು ದೇಶಗಳಲ್ಲಿ ಸೋಂಕು ಪ್ರಸರಣ ಸಾಮರ್ಥ್ಯ ಕುಂದಿದ್ದು, ದೈನಂದಿನ ಸೋಂಕು ದಾಖಲಾತಿ ಪ್ರಮಾಣವೂ ಕುಗ್ಗಿದೆ. ಇದೀಗ ಹಾಂಕಾಂಗ್‌ನಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಇಳಿಮುಖಗೊಳ್ಳುತ್ತಿದ್ದು, ಕೆಲವೊಂದು ನಿಯಮಗಳನ್ನು ಸಡಿಲಿಸಲು ನಿರ್ಧರಿಸಲಾಗಿದೆ.

ಈ ಹಿನ್ನೆಲೆಯಲ್ಲಿಯೇ ಹೊಟೇಲ್‌ ಗಳನ್ನು ಶುಕ್ರವಾರದಿಂದ ರಾತ್ರಿ 9 ಗಂಟೆಯವರೆಗೂ ತೆರೆಯಲು ಅವಕಾಶ ಮಾಡಿಕೊಡಲಾಗಿದ್ದು, ಈ ಹಿಂದೆ ಸಂಜೆ 6 ಗಂಟೆಯವರೆಗೆ ಮಾತ್ರ ಕಾರ್ಯಾಚರಣೆಗೆ ಅನುಮತಿ ನೀಡಲಾಗಿತ್ತು. ಇದರೊಂದಿಗೆ ಬ್ಯೂಟಿ ಸಲೂನ್‌, ಸಿನಿಮಾ ಮಂದಿರ ಸೇರಿದಂತೆ ಕೆಲ ಕ್ರೀಡಾ ಸ್ಥಳಗಳನ್ನು ಮತ್ತೆ ತೆರೆಯಲು ಅನುಮತಿ ನೀಡಲಾಗಿದ್ದು, ಇನ್ನು ಮುಂದೆ ಉದ್ಯಾನಗಳಲ್ಲಿ ವ್ಯಾಯಮ, ಅಭ್ಯಾಸಗಳನ್ನು ಮಾಡುವಾಗ ಮುಖಗವಸು ಧರಿಸುವುದು ಕಡ್ಡಾಯವಲ್ಲ ಎಂದು ಸರಕಾರ ಹೇಳಿದೆ.

ಸೋಂಕು ಪ್ರಕರಣದಲ್ಲಿ ಇಳಿಮುಖ ಕಂಡಾಗ ಕೆಲವೊಂದು ನಿಯಮಗಳಲ್ಲಿ ಸಡಿಲಿಕೆ ಮಾಡಬೇಕಾಗುತ್ತದೆ ಎಂದು ಹಾಂಕಾಂಗ್‌ ಆರೋಗ್ಯ ಸಚಿವೆ ಸೋಫಿಯಾ ಚನ್‌ ಅವರು ಪ್ರತಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಹಾಂಕಾಂಗ್‌ನಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಅತಿ ಕಠಿನ ನಿಯಮಗಳನ್ನು ಹೇರಲಾಗಿತ್ತು. ಸೋಮವಾರ ಕೇವಲ 9 ಹೊಸ ಪ್ರಕರಣಗಳು ವರದಿಯಾಗಿದ್ದು, ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಹಾಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಪಾಲಿಸಬೇಕಾದ ಕೆಲ ನಿಯಮಗಳಲ್ಲಿ ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ.

ಸೋಲ್‌: ಶಾಲೆ ಮುಚ್ಚಲು ನಿರ್ಧಾರ

ಕೋವಿಡ್ ವೈರಸ್‌ ಸೋಂಕು ಹರಡುವುದನ್ನು ತಪ್ಪಿಸುವ ಉದ್ದೇಶದಿಂದ ಸೋಲ್‌ ನಗರದಾದ್ಯಂತ ಇರುವ ಶಾಲೆಗಳನ್ನು ಮುಚ್ಚಲು ಮತ್ತು ಆನ್‌ಲೈನ್‌ ಮೂಲಕ ಪಾಠ ಮಾಡುವಂತೆ ದಕ್ಷಿಣ ಕೊರಿಯ ಆದೇಶ ನೀಡಿದೆ. ಕೋವಿಡ್ ಪ್ರಕರಣದ ಹೆಚ್ಚಳದಿಂದಾಗಿ ಮುನ್ನಚ್ಚರಿಕೆಯ ಕ್ರಮವಾಗಿ ಸರಕಾರ ಈ ನಿರ್ಧಾರ ತೆಗೆದುಕೊಂಡಿದೆ.

ಸೋಲ್‌, ಇಂಚಿಯಾನ್‌ ಮತ್ತು ಜಿಯೊಂಗಿ ಪ್ರದೇಶದ ಹೈಸ್ಕೂಲ್‌ ಸೀನಿಯರ್ಗಳನ್ನು ಹೊರತುಪಡಿಸಿ ಉಳಿದೆಲ್ಲ ವಿದ್ಯಾರ್ಥಿಗಳಿಗೆ ಸೆ. 11ರ ವರೆಗೆ ಆನ್‌ಲೈನ್‌ನಲ್ಲಿ ಪಾಠ ನಡೆಸುವಂತೆ ಆದೇಶದಲ್ಲಿ ತಿಳಿಸಲಾಗಿದೆ ಎಂದು ಶಿಕ್ಷಣ ಸಚಿವಾಲಯ ಮಂಗಳವಾರ ತಿಳಿಸಿದೆ.

ಕಳೆದ ಎರಡು ವಾರಗಳಲ್ಲಿ ಗ್ರೇಟರ್‌ ಸೋಲ್‌ ನಗರದಲ್ಲಿ ಕಡಿಮೆ ಪಕ್ಷ 150 ವಿದ್ಯಾರ್ಥಿಗಳು ಮತ್ತು 43 ಶಾಲಾ ಸಿಬಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಶಿಕ್ಷಣ ಸಚಿವ ಯೂ ಎನ್‌ ಹಾಯ್‌ ಅವರು ತಿಳಿಸಿದ್ದಾರೆ.

ಕಳೆದ ಮಾರ್ಚ್‌ ವೇಳೆ ಆರಂಭವಾಗ ಬೇಕಿದ್ದ ಸೆಮಿಸ್ಟರ್‌ ಕೋವಿಡ್ ನಿಂದಾಗಿ ಹಲವು ಬಾರಿ ಮುಂದೂಡಲ್ಪಟ್ಟಿತ್ತು. ಆದರೆ ಕೋವಿಡ್ ಹಾವಳಿ ಕಡಿಮೆ ಯಾಗುತ್ತಿದ್ದಂತೆ ಮೇ ತಿಂಗಳಲ್ಲಿ ದಕ್ಷಿಣ ಕೊರಿಯಾದ್ಯಂತ ಶಾಲೆಗಳು ಪುನರಾರಂಭಗೊಂಡಿದ್ದವು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.