ಪ್ರವಾಸೋದ್ಯಮ ಚಿಗುರುವ ನಿರೀಕ್ಷೆ


Team Udayavani, Jun 17, 2020, 2:58 PM IST

ಪ್ರವಾಸೋದ್ಯಮ ಚಿಗುರುವ ನಿರೀಕ್ಷೆ

ಟರ್ಕಿಯಲ್ಲಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದ್ದು ಇಸ್ತಾಂಬುಲ್‌ ಮಾರುಕಟ್ಟೆಯೊಂದರ ದೃಶ್ಯ.

ಬರ್ಲಿನ್‌: ಮೂರು ತಿಂಗಳ ಬಳಿಕ ಐರೋಪ್ಯ ಒಕ್ಕೂಟದ ದೇಶಗಳ ಗಡಿಗಳು ತೆರೆದುಕೊಂಡರೂ ಅಲ್ಲಿನ ಪ್ರವಾಸೋದ್ಯಮ ಮತ್ತೆ ಹಾದಿಗೆ ಮರಳುವುದಕ್ಕೆ ಹಲವು ಸಮಯವೇ ಬೇಕಾಗಿದೆ. ಈ ವರ್ಷ ಯುರೋಪಿಯನ್ನರು ರಜೆ ಕಾಲದಲ್ಲಿ ಪ್ರವಾಸ ಮಾಡುತ್ತಾರಾ? ಅಮೆರಿಕನ್ನರು ಯುರೋಪ್‌ಗೆ ಬರುತ್ತಾರಾ? ಏಷ್ಯನ್ನರು ಬರಬಹುದಾ ಎಂಬ ವಿಚಾರ ಈಗ ಅಲ್ಲಿನ ಪ್ರವಾಸೋದ್ಯಮಿಗಳ ತಲೆಯಲ್ಲಿ ಕೊರೆಯುತ್ತಿದೆ.

ಕೋವಿಡ್‌ನಿಂದಾಗಿ ಗಡಿಯಲ್ಲಿ ಸಂಚಾರಕ್ಕೆ ನಿಯಂತ್ರಣ ಹೇರಲಾಗಿತ್ತು. ಈಗ ಅದನ್ನು ತೆರವುಗೊಳಿಸಲಾಗಿದ್ದು, ಯಾವುದೇ ದಾಖಲೆ ಪರೀಕ್ಷೆ ಇತ್ಯಾದಿಗಳನ್ನು ನಡೆಸುತ್ತಿಲ್ಲ.  ಕೋವಿಡ್‌ನಿಂದಾಗಿ ಐರೋಪ್ಯ ಒಕ್ಕೂಟದ ಎಲ್ಲ ದೇಶಗಳು ತೀವ್ರ ಆರ್ಥಿಕ ಹಾನಿಗೆ ಒಳಗಾಗಿದ್ದು, ತತ್‌ಕ್ಷಣ ಚೇತರಿಕೆಗೆ ಎದುರು ನೋಡುತ್ತಿವೆ. ಇದಕ್ಕಾಗಿ ಇನ್ನು ಶುರುವಾಗುವ ರಜಾ ಸಮಯ ಪ್ರಶಸ್ತವಾಗಿದ್ದು, ಪ್ರವಾಸೋದ್ಯಮದ ಮೂಲಕ ತುಸು ಚೇತರಿಕೆಯಾಗುವ ಆಶಾವಾದ ಹೊಂದಲಾಗಿದೆ.
ಇತ್ತ ಗ್ರೀಸ್‌ನಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಆಗಮನಕ್ಕೆ ಹಸಿರು ನಿಶಾನೆ ತೋರಲಾಗಿದೆ. ಪ್ರವಾಸಿಗರಿಗೆ ವೈರಸ್‌ ಟೆಸ್ಟ್‌ ಕಡ್ಡಾಯ ಎಂದು ಅದು ಹೇಳಿದೆ. ಸ್ಪೇನ್‌ ಕೂಡ ಜರ್ಮನ್‌ ಪ್ರವಾಸಿಗರನ್ನು ತನ್ನ ದ್ವೀಪಗಳಿಗೆ ಬರಮಾಡಿಕೊಂಡಿದೆ.

ಡೆನ್ಮಾರ್ಕ್‌ ಕೂಡ ಜರ್ಮನಿ ಪ್ರವಾಸಿಗರಿಗೆ ಮುಕ್ತವಾಗಿದ್ದು ತನ್ನ ಗಡಿಯನ್ನು ತೆರೆದಿದೆ. ಈ ಹಿನ್ನೆಲೆಯಲ್ಲಿ ಎರಡೂ ದೇಶಗಳ ಗಡಿಯಲ್ಲಿ ಸೋಮವಾರ ದೊಡ್ಡ ಸಂಖ್ಯೆಯಲ್ಲಿ ವಾಹನಗಳು ಕ್ಯೂ ನಿಂತಿದ್ದವು. ಆದರೆ ಡೆನ್ಮಾರ್ಕ್‌ ಗೆ ಹೋಗುವ ಪ್ರವಾಸಿಗರು ಕನಿಷ್ಠ 6 ದಿನ ಮುಂಗಡ ಹೊಟೇಲ್‌ ಬುಕ್ಕಿಂಗ್‌ ಮಾಡಿರುವುದು ಕಡ್ಡಾಯವಾಗಿದೆ. ಬ್ರಿಟನ್‌ ಐರೋಪ್ಯ ಒಕ್ಕೂಟದವರನ್ನು ದೇಶಕ್ಕೆ ಬರಲು ಅನುಮತಿಸಿದ್ದರೂ ಬಂದವರು 14 ದಿನ ಕ್ವಾರಂಟೈನ್‌ಗೆ ಒಳಪಡಬೇಕಾದ್ದು ಕಡ್ಡಾಯ ಎಂದು ಹೇಳಿದೆ. ಇತ್ತ ಫ್ರಾನ್ಸ್‌ ಕೂಡ ಗಡಿಯನ್ನು ತೆರೆದುಕೊಂಡಿದ್ದು, ಅಲ್ಲಿಗೆ ಹೋದವರಿಗೆ 14 ದಿನಗಳ ಕ್ವಾರಂಟೈನ್‌ ಕಡ್ಡಾಯವಾಗಿದೆ. ಡಚ್‌ ಸರಕಾರವೂ ತನ್ನ ಪ್ರಜೆಗಳು ಯುರೋಪಿನಲ್ಲಿ ಎಲ್ಲಿ ಬೇಕಾದರೂ ಸಂಚರಿಸಬಹುದು ಎಂದು ಹೇಳಿದ್ದರೂ, ತೀವ್ರ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಆರ್ಥಿಕತೆಯನ್ನು ಮೇಲೆತ್ತುವ ದೃಷ್ಟಿಯಿಂದ ಈ ಮೊದಲು ಐರೋಪ್ಯ ಒಕ್ಕೂಟ, ದೇಶಗಳ ಮಧ್ಯೆ ಗಡಿಯನ್ನು ತೆರೆಯಲು ಪ್ರಯತ್ನಿಸುವುದಾಗಿ ಹೇಳಿತ್ತು. ಅದರಂತೆ ಒಕ್ಕೂಟದ ಸದಸ್ಯ ರಾಷ್ಟ್ರಗಳ ಸಭೆಯೂ ನಡೆದಿದ್ದು, ಗಡಿ ತೆರೆಯುವ ನಿರ್ಧಾರಕ್ಕೆ ಬರಲಾಗಿದೆ.

ಐರೋಪ್ಯ ಒಕ್ಕೂಟದಲ್ಲಿ ಈವರೆಗೆ 1.82 ಲಕ್ಷ ಮಂದಿ ಕೋವಿಡ್‌ನಿಂದಾಗಿ ಮೃತಪಟ್ಟಿದ್ದು, 20 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕು ಪೀಡಿತರಾಗಿದ್ದಾರೆ. ಕೋವಿಡ್‌ ಸೋಂಕು ಇಟಲಿ, ಜರ್ಮನಿ, ಸ್ವೀಡನ್‌ಗಳಲ್ಲಿ ವ್ಯಾಪಕವಾಗಿದ್ದು ಇತರೆಡೆಗೆ ಹರಡುವ ಭೀತಿ ಇದ್ದರೂ ಸದ್ಯದ ಕ್ರಮದಲ್ಲಿ ಗಡಿಯನ್ನು ತೆರೆಯದೆ ಬೇರೆ ದಾರಿಯಿಲ್ಲ ಎಂದು ಐರೋಪ್ಯ ಒಕ್ಕೂಟ ತೆರೆಯಲು ತೀರ್ಮಾನಿಸಿದೆ. ಆದರೆ ವಿವಿಧ ದೇಶಗಳ ನಾಯಕರು ಜನರು ಎಚ್ಚರಿಕೆಯಿಂದ ಇರುವಂತೆಯೂ ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.