ಮಾರಣಾಂತಿಕ ಕೋವಿಡ್ 19 ವೈರಸ್ ನೊಣಗಳಿಂದ ಹರಡುತ್ತದೆಯೇ? ಕೇಂದ್ರ ಸರ್ಕಾರದ ಸ್ಪಷ್ಟನೆ ಓದಿ
ಈ ಬಗ್ಗೆ ಭಾರತ ಸರ್ಕಾರ ಖಚಿತಪಡಿಸಿದೆ. ಅಷ್ಟೇ ಅಲ್ಲ ಬಾಲಿವುಡ್ ನಟ ಬಿಗ್ ಬಿ ಕೂಡಾ ಈ ಬಗ್ಗೆ ಸಂದೇಶ ರವಾನಿಸಿದ್ದಾರೆ ಎಂದು ವರದಿಯಾಗಿತ್ತು.
Team Udayavani, Apr 6, 2020, 10:05 AM IST
Representative Image
ನವದೆಹಲಿ:ಮಾರಣಾಂತಿಕ ಕೋವಿಡ್ 19 ವೈರಸ್ ಗಾಳಿಯ ಮೂಲಕ ಹರಡಬಲ್ಲದು ಎಂದು ಅಮೆರಿಕದ ವಿಜ್ಞಾನಿಗಳು ಇತ್ತೀಚೆಗೆ
ಅಧ್ಯಯನದಿಂದ ಕಂಡುಕೊಂಡಿರುವುದಾಗಿ ತಿಳಿಸಿದ್ದರು. ಆದರೆ ಇದೀಗ ಕೋವಿಡ್ 19 ವೈರಸ್ ನೊಣಗಳಿಂದ ಹರಡುತ್ತದೆ ಎಂಬ
ವಿಷಯ ಎಲ್ಲೆಡೆ ಹರಿದಾಡುತ್ತಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ಕೂಡಾ ನೀಡಿದ್ದು, ನೊಣಗಳಿಂದ ಕೋವಿಡ್ 19 ವೈರಸ್
ಹರಡುವುದಿಲ್ಲ ಎಂದು ತಿಳಿಸಿದೆ.
ಜಗತ್ತಿನಾದ್ಯಂತ ಭೀತಿ ಹುಟ್ಟಿಸಿರುವ ಕೋವಿಡ್ 19ಗೆ ಸಂಬಂಧಿಸಿದಂತೆ ಚೀನಾ ಕೈಗೊಂಡ ನೂತನ ಅಧ್ಯಯನದ ಪ್ರಕಾರ
ನೊಣಗಳಿಂದ ಕೋವಿಡ್ 19 ವೈರಸ್ ಹರಡುವ ಸಾಧ್ಯತೆ ಇದೆ. ಈ ಬಗ್ಗೆ ಭಾರತ ಸರ್ಕಾರ ಖಚಿತಪಡಿಸಿದೆ. ಅಷ್ಟೇ ಅಲ್ಲ ಬಾಲಿವುಡ್
ನಟ ಬಿಗ್ ಬಿ ಕೂಡಾ ಈ ಬಗ್ಗೆ ಸಂದೇಶ ರವಾನಿಸಿದ್ದಾರೆ ಎಂದು ವರದಿಯಾಗಿತ್ತು.
ಬಿಗ್ ಬಿ ಕೂಡಾ ವಿಡಿಯೋ ಸಂದೇಶದಲ್ಲಿ ನೊಣಗಳು ಒಂದು ವಸ್ತುವಿನಿಂದ ಇನ್ನೊಂದು ವಸ್ತುವಿನ ಮೇಲೆ ಕುಳಿತುಕೊಳ್ಳುವುದರಿಂದ
ಮಾರಣಾಂತಿಕ ವೈರಸ್ ಹರಡುವ ಸಾಧ್ಯತೆ ಇದ್ದು ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕಾಗಿದೆ ಎಂದು ತಿಳಿಸಿದ್ದರು.
ನೊಣಗಳಿಂದ ಹರಡುವುದಿಲ್ಲ:
ಕೋವಿಡ್ 19 ಸಾಂಕ್ರಾಮಿಕ ಸೋಂಕು. ಇದು ನೊಣ ಅಥವಾ ಸೊಳ್ಳೆಗಳಿಂದ ಹರಡುವುದಿಲ್ಲ. ಪ್ರಕರಣಗಳು ದೇಶದಲ್ಲಿ
ಹೆಚ್ಚಳವಾಗುತ್ತಿದೆ. ಆದರೆ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಇದಕ್ಕಾಗಿ ಸಾಮಾಜಿಕ ಅಂತರವನ್ನು ಹೆಚ್ಚು ಕಾಯ್ದುಕೊಳ್ಳಬೇಕಾಗಿದೆ ಎಂದು
ಕೇಂದ್ರ ಆರೋಗ್ಯ ಸಚಿವಾಲಯದ ಮುಖ್ಯ ಕಾರ್ಯದರ್ಶಿ ಲಾವ್ ಅಗರ್ವಾಲ್ ತಿಳಿಸಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ಹೊಸ ಕೋವಿಡ್ ವೈರಸ್ ಶ್ವಾಸಕೋಶಕ್ಕೆ ಸಂಬಂಧಿಸಿದ ವೈರಸ್ ಆಗಿದೆ. ಕೋವಿಡ್ 19 ಸೋಂಕಿತ
ವ್ಯಕ್ತಿ ಕೆಮ್ಮುವುದು ಅಥವಾ ಸೀನುವುದರಿಂದ ಆರೋಗ್ಯವಂತ ವ್ಯಕ್ತಿಯ ಮೂಗಿನ ಮೂಲಕ ದೇಹದೊಳಕ್ಕೆ ಪ್ರವೇಶಿಸುತ್ತದೆ.
ಕೋವಿಡ್ 19 ಹರಡೋದು ಹೇಗೆ?
ಮಾರಣಾಂತಿಕ ಕೋವಿಡ್ 19 ವೈರಸ್ ಮುಖ್ಯವಾಗಿ ವ್ಯಕ್ತಿಯಿಂದ ವ್ಯಕ್ತಿಗೆ, ಒಬ್ಬ ವ್ಯಕ್ತಿ ಹಾಗೂ ಮತ್ತೊಬ್ಬ ವ್ಯಕ್ತಿಯ ನಿಕಟ ಸಂಪರ್ಕದಿಂದ ಸೋಂಕು ಹರಡುತ್ತದೆ ಎಂದು CDC ತಿಳಿಸಿದೆ. ವೈರಸ್ ವ್ಯಕ್ತಿಯ ಬಾಯಿ, ಮೂಗು ಅಥವಾ ಕೈಗೆ ತಗುಲಿದರೆ ಅದು ಶ್ವಾಸಕೋಶವನ್ನು ಸೇರಿಕೊಳ್ಳುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Ballari; ಪ್ರತ್ಯೇಕ ಸ್ಥಳಗಳಲ್ಲಿ ಕರಡಿಗಳ ದಾಳಿ: ಇಬ್ಬರಿಗೆ ತೀವ್ರ ಗಾಯ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ