ಬಾವಲಿ ಭಯಕ್ಕೆ ಮರಗಳಿಗೆ ಕುತ್ತು!

ತಪ್ಪಿತಸ್ಥರ ವಿರುದ್ಧ  ಕ್ರಮ, ಜಾಗೃತಿ ಮೂಡಿಸಲು ಪಿಸಿಸಿಎಫ್ ಸೂಚನೆ

Team Udayavani, Apr 30, 2020, 5:51 AM IST

ಬಾವಲಿ ಭಯಕ್ಕೆ ಮರಗಳಿಗೆ ಕುತ್ತು!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಬಾವಲಿಗಳಿಂದ ಕೋವಿಡ್ 19 ವೈರಸ್ ಹರಡುತ್ತದೆ ಎಂಬ ವದಂತಿಯ ಹಿನ್ನೆಲೆಯಲ್ಲಿ ಅವು ವಾಸಿಸುವ ಮರಗಳು ಮತ್ತು ರೆಂಬೆಗಳನ್ನು ಕಡಿದುರುಳಿಸುವ ಘಟನೆಗಳು ಕಂಡುಬರುತ್ತಿವೆ. ಇದು ಅರಣ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ.

ಹಣ್ಣು ಬಿಡುವ ಮರಗಳು ಬಾವಲಿಗಳ ಆವಾಸ ಸ್ಥಾನ. ಆದರೆ ಕೋವಿಡ್ 19 ವೈರಸ್ ಹರಡುವ ಮೂಢ ಭೀತಿಯಿಂದ ಅಂತಹ ಕಡೆಗಳಲ್ಲಿ ಸುತ್ತಲಿನ ನಿವಾಸಿಗಳು ಆ ಮರಗಳಿಗೆ ಕೊಡಲಿ ಪೆಟ್ಟು ಹಾಕುತ್ತಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿರುವ ಮರಗಳನ್ನು ಕಡಿಯಲು ಅನುಮತಿ ನೀಡುವಂತೆ ಅರಣ್ಯ ಇಲಾಖೆಗೆ ದುಂಬಾಲು ಬೀಳುವುದೂ ಇದೆ. ಅರಣ್ಯ ಇಲಾಖೆ ಇದನ್ನು ನಿರಾಕರಿಸುತ್ತಿರುವುದರಿಂದ ರೆಂಬೆ ಕಡಿಯುವುದು ವರದಿಯಾಗುತ್ತಿದೆ.

ಬಾವಲಿಗಳ ಜೊಲ್ಲು ತಗಲಬಹುದು ಅಥವಾ ತಿಂದೆಸೆಯುವ ಹಣ್ಣುಗಳಿಂದ ಕೋವಿಡ್ 19 ವೈರಸ್ ಸೋಂಕು ತಗಲಬಹುದು ಎಂಬ ಭೀತಿಯಿಂದ ಜನ ಹೀಗೆ ಮಾಡುತ್ತಿದ್ದಾರೆ. ಅದರಲ್ಲೂ ಇದುವರೆಗೆ ಕೋವಿಡ್‌-19 ಪ್ರಕರಣಗಳು ವರದಿಯಾಗದ ಹಾಸನ, ಚಿಕ್ಕಮಗಳೂರಿನಂತಹ ಮಲೆನಾಡು ಭಾಗಗಳಿಂದಲೂ ಮರ ಕಡಿಯಲು ಅನುಮತಿ ಕೋರಿ ಕರೆಗಳು ಇಲಾಖೆಗೆ ಬರುತ್ತಿವೆ.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಈಚೆಗೆ ರಾಜ್ಯದ ಎಲ್ಲ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಬಾವಲಿಗಳಿಂದಾಗಲೀ ಮರಗಳ ಸಹಿತ ಅವುಗಳ ಆವಾಸ ಸ್ಥಾನದಿಂದಾಗಲೀ ಕೋವಿಡ್ 19 ವೈರಸ್ ಹರಡುವುದಿಲ್ಲ.

ಒಂದು ವೇಳೆ ಬಾವಲಿ ಕೊಲ್ಲುವುದು ಮತ್ತು ಮರ ಕಡಿಯುವುದು ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಸ್ಥಳೀಯರಲ್ಲಿ ಜಾಗೃತಿ ಮೂಡಿಸಿ ಬಾವಲಿಗಳು ಮತ್ತು ಮರಗಳನ್ನು ರಕ್ಷಿಸಬೇಕು ಎಂದು ನಿರ್ದೇಶಿಸಿದ್ದಾರೆ.

ಸಾವಿರಾರು ವರ್ಷಗಳಿಂದ ಬಾವಲಿಗಳು ನಮ್ಮಲ್ಲಿ ಇವೆ. ಅವುಗಳಿಂದ ಮನುಷ್ಯನಿಗೆ ಯಾವುದೇ ತೊಂದರೆ ಆಗಿಲ್ಲ ಮತ್ತು ಆಗುವುದೂ ಇಲ್ಲ. ಬಾವಲಿಗಳಿಂದ ಕೋವಿಡ್‌-19 ಸೋಂಕು ತಗಲುವುದಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನ ಸಂಸ್ಥೆ (ಐಸಿಎಂಆರ್‌) ಕೂಡ ಇದನ್ನು ದೃಢಪಡಿಸಿದೆ. ಹಾಗಾಗಿ ವದಂತಿಗಳಿಗೆ ಕಿವಿಗೊಟ್ಟು, ಬಾವಲಿಗಳನ್ನು ಕೊಲ್ಲುವುದು ಮತ್ತು ಮರಗಳನ್ನು ತೆರವುಗೊಳಿಸುವುದರಲ್ಲಿ  ಅರ್ಥವಿಲ್ಲ.
– ಸಂಜಯ್‌ ಮೋಹನ್‌, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ

— ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.