ಕೋವಿಡ್ 19: ಅಬ್ಬಾ ಪಾಕಿಸ್ತಾನದಲ್ಲಿ ಪರಿಸ್ಥಿತಿ ಹೇಗಿದೆ ಗೊತ್ತಾ? ಇಲ್ಲಿನ ವೈದ್ಯರ ಅಳಲು ಓದಿ

ರಂಜಾನ್ ತಿಂಗಳಲ್ಲಿ ಮಸೀದಿಗಳನ್ನು ತೆರೆಯುವುದು ಮತ್ತು ಸಾಮೂಹಿಕ ಪ್ರಾರ್ಥನೆ ನಡೆಸುವುದು ಅಪಾಯಕ್ಕೆ ಎಡೆಮಾಡಿಕೊಡಲಿದೆ

Team Udayavani, Apr 23, 2020, 5:54 PM IST

ಕೋವಿಡ್ 19: ಅಬ್ಬಾ ಪಾಕಿಸ್ತಾನದಲ್ಲಿ ಪರಿಸ್ಥಿತಿ ಹೇಗಿದೆ ಗೊತ್ತಾ? ಇಲ್ಲಿನ ವೈದ್ಯರ ಅಳಲು ಓದಿ

ಇಸ್ಲಾಮಾಬಾದ್:ಮುಂಬರುವ ದಿನಗಳಲ್ಲಿ ಕೋವಿಡ್ 19 ವೈರಸ್ ನ ಪರಿಣಾಮ ಪಾಕಿಸ್ತಾನದಲ್ಲಿ ತುಂಬಾ ಭೀಕರವಾಗಲಿದೆ. ಅಲ್ಲದೇ ರಂಜಾನ್ ತಿಂಗಳಲ್ಲಿ ಜನರು ಮುಖ್ಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲೇಬೇಕಾಗಿದೆ ಎಂದು ಪಾಕಿಸ್ತಾನದ ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಇದೊಂದು ವೈದ್ಯ ಸಂಬಂಧಿ ಸಮಸ್ಯೆಯಾಗಿದೆ ಇದರಿಂದ ಆರ್ಥಿಕ ಮತ್ತು ಸಮಾಜದ ಮೇಲೆ ಪರಿಣಾಮ ಬೀಳಲಿದೆ. ಆದರೆ ಇದಕ್ಕಿಂತ ಮುಖ್ಯವಾಗಿ ಇದೊಂದು ವೈದ್ಯಕೀಯ ಸಮಸ್ಯೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದು ಗ್ಯಾಸ್ಟ್ರೋಎಂಟರಾಲೋಜಿಸ್ಟ್ ಡಾ.ಸಾದ್ ನಿಯಾಝ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಳೆದ ನಾಲ್ಕು ದಿನಗಳಲ್ಲಿ ಪಾಕಿಸ್ತಾನದಲ್ಲಿ ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ ಶೇ.30ರಿರಂದ 40ಕ್ಕೆ ಏರಿಕೆಯಾಗಿದೆ. ಇದೊಂದು ನಿಜಕ್ಕೂ ದುರದೃಷ್ಟಕರ ಸಂಗತಿಯಾಗಿದೆ ಇಲ್ಲಿನ ಜನರು ಇದನ್ನು ಗಂಭೀರವಾಗಿ ಪರಿಗಣಿಸಿಯೇ ಇಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಕೋವಿಡ್ 19 ಅಪಾಯಕ್ಕಿಂತ ಹೆಚ್ಚು ನಾವು ಮೊದಲು ಇದರ ಬಗ್ಗೆ ಆಲೋಚಿಸಬೇಕು. ಕೋವಿಡ್ ಸೋಂಕಿತರ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಒಂದು ವೇಳೆ ಪಾಕಿಸ್ತಾನದಲ್ಲಿ ಲಾಕ್ ಡೌನ್ ಘೋಷಿಸದಿದ್ದರೆ, ಇದರ ಪರಿಣಾಮ ಮುಂದೆ ಮತ್ತಷ್ಟು ಭೀಕರವಾಗಲಿದೆ. ಅಲ್ಲದೇ ನಾವು ಈಗ ಕಾರ್ಯಪ್ರವೃತ್ತರಾಗದೇ ಹೋದರೆ, ಪರಿಸ್ಥಿತಿ ವಿಕೋಪಕ್ಕೆ ಹೋಗಲಿದೆ ಎಂದು ಡಾ.ನಿಯಾಝ್ ಎಚ್ಚರಿಸಿದ್ದಾರೆ.

ದೇಶದಲ್ಲಿನ ವೈದ್ಯಕೀಯ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಬೇಕಾಗಿದೆ. ರೋಗಿಗಳಿಗೆ ಬೇಕಾದ ಬೆಡ್ಸ್ ಗಳು ಇಲ್ಲ. ಬೆಡ್ ಗಳು ಇಲ್ಲದ ಪರಿಣಾಮ ನಾವು ರೋಗಿಗಳನ್ನು ದಾಖಲು ಮಾಡಿಕೊಳ್ಳಲು ನಿರಾಕರಿಸಿದರೆ ಮುಂದಿನ ದಿನಗಳು ಮತ್ತಷ್ಟು ಕಠಿಣವಾಗಲಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಪಾಕಿಸ್ತಾನದಲ್ಲಿ ಅಂದಾಜಿನ ಪ್ರಕಾರ 70 ಸಾವಿರ ಮಂದಿಗೆ ಕೋವಿಡ್ ಸೋಂಕು ತಗುಲಬಹುದು ಎಂದು ಅಂದಾಜಿಸಲಾಗಿದೆ. ಒಂದು ವೇಳೆ ಶೇ.10ರಷ್ಟು ರೋಗಿಗಳು ಸೀರಿಯಸ್ ಆದರೂ ಕೂಡಾ ಅವರಿಗೆ ಆಸ್ಪತ್ರೆಯಲ್ಲಾಗಲಿ, ವೆಂಟಿಲೇಟರ್ ವ್ಯವಸ್ಥೆ ಮಾಡಲು ಸಾಧ್ಯವಿಲ್ಲ ಎಂದು ಡಾ.ನಿಯಾಝ್ ತಿಳಿಸಿದ್ದಾರೆ.

ನಾವೀಗ ರೋಗಿಗಳಿಗೆ ಚಿಕಿತ್ಸೆ ನೀಡಲು ಆರಂಭಿಸಿದರೆ ನಾವು 35 ವರ್ಷದವರಿಗೆ ಅಥವಾ 55 ವರ್ಷದವರಿಗೆ ಆದ್ಯತೆ ಕೊಡಬೇಕಾ ಎಂಬ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಆದರೆ ನಾವು ಯುವಕರಿಗೆ ಹೆಚ್ಚಿನ ಆದ್ಯತೆ ನೀಡಬೇಕಾಗುತ್ತದೆ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ರಂಜಾನ್ ತಿಂಗಳಲ್ಲಿ ಮಸೀದಿಗಳನ್ನು ತೆರೆಯುವುದು ಮತ್ತು ಸಾಮೂಹಿಕ ಪ್ರಾರ್ಥನೆ ನಡೆಸುವುದು ಅಪಾಯಕ್ಕೆ ಎಡೆಮಾಡಿಕೊಡಲಿದೆ ಎಂದು ಈಗಾಗಲೇ ವೈದ್ಯರು ಮಸೀದಿ ಮೌಲ್ವಿಗಳಿಗೆ ಪತ್ರ ಬರೆದು ಮನವಿ ಮಾಡಿಕೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಪಾಕಿಸ್ತಾನದಲ್ಲಿ ಈಗಾಗಲೇ ಕೋವಿಡ್ 19 ವೈರಸ್ ನಿಂದ 200 ಮಂದಿ ಸಾವನ್ನಪ್ಪಿದ್ದು, 10,513 ಜನರು ಸೋಂಕು ಪೀಡಿತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.