ಮೇ 3ರ ನಂತರ ಹಾಂಕಾಂಗ್‌ ಮಾದರಿ ಜಾರಿಗೊಳಿಸಲು ಕೇಂದ್ರ ಚಿಂತನೆ

ಯೂರೋಪ್‌, ಅಮೆರಿಕಕ್ಕೂ ಮಾದರಿಯಾಗಿರುವ ಹಾಂಕಾಂಗ್‌

Team Udayavani, Apr 30, 2020, 6:30 AM IST

ಮೇ 3ರ ನಂತರ ಹಾಂಕಾಂಗ್‌ ಮಾದರಿ ಜಾರಿಗೊಳಿಸಲು ಕೇಂದ್ರ ಚಿಂತನೆ

ಭಾರತದಲ್ಲಿ ಎರಡನೇ ಹಂತದ ಕೋವಿಡ್ ಲಾಕ್‌ಡೌನ್‌ ಕೊನೆಗೊಳ್ಳಲು ಇನ್ನು ನಾಲ್ಕೇ ದಿನ ಬಾಕಿ ಇವೆ. ಹೀಗಿರುವಾಗ ದೇಶದಲ್ಲಿ ಲಾಕ್‌ಡೌನ್‌ ತೆರವು ಮಾಡಬೇಕೆ, ಬೇಡವೇ ಎಂಬ ಬಗ್ಗೆ ತಜ್ಞರ ವಲಯದಲ್ಲಿ ಚರ್ಚೆಗಳು ಆರಂಭವಾಗಿವೆ.

ಈ ನಡುವೆ ಸೋಂಕನ್ನು ಪರಿಣಾಮಕಾರಿಯಾಗಿ ಕಟ್ಟಿಹಾಕಲು ಹಾಗೂ ಲಾಕ್‌ಡೌನ್‌ನಿಂದ ಹೊರಬರಲು ಹಾಂಗ್‌ಕಾಂಗ್‌ ಮಾದರಿ ಅನುಸರಣೆ ಸೂಕ್ತ ಎಂಬ ಮಾತುಗಳೂ ಕೇಳಿಬರುತ್ತಿವೆ.

ಮೇ 3ರ ನಂತರ, ಲಾಕ್‌ಡೌನ್‌ ತೆರವಾದ ಬಳಿಕ ಹಾಟ್‌ಸ್ಪಾಟ್‌ಗಳಲ್ಲಿ ಮಾತ್ರ ಈಗಿರುವಂಥ ಎಲ್ಲ ನಿರ್ಬಂಧಗಳೂ ಮುಂದುವರಿಯಲಿವೆ ಎಂದು ಕೇಂದ್ರ ಸರಕಾರ ತಿಳಿಸಿದೆ.

ಜತೆಗೆ ಈಗಾಗಲೇ ಗುರುತಿಸಿರುವ ವಲಯಗಳ ಆಧಾರದಲ್ಲಿ ಲಾಕ್‌ಡೌನ್‌ನ ನಿರ್ಬಂಧಗಳನ್ನು ಸಡಿಲಿಸುವ ನಿರ್ಧಾರವೂ ಕೇಂದ್ರದ ಮುಂದಿದೆ. ಈಗಾಗಲೇ ಹಸಿರು ವಲಯದಯಲ್ಲಿರುವ ಹಲವು ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಸಡಿಲಿಸಿ, ಕೆಲ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ.

ಆದರೆ, ಕೆಂಪು ವಲಯ ಮತ್ತು ಹಾಟ್‌ಸ್ಪಾಟ್‌ಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗದಂತೆ ಎಚ್ಚರ ವಹಿಸುವ ಚಿಂತೆ ಸರಕಾರವನ್ನು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಹಾಂಗ್‌ಕಾಂಗ್‌ ಮಾದರಿ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ. ಭಾರತ ಮಾತ್ರವಲ್ಲದೆ, ಯುರೋಪ್‌ ರಾಷ್ಟ್ರಗಳು ಮತ್ತು ಅಮೆರಿಕ ಕೂಡ ಈ ಮಾದರಿ ಮೊರೆ ಹೋಗಲು ಚಿಂತನೆ ನಡೆಸುತ್ತಿವೆ.

ಅಲ್ಲಿ ಇಬ್ಬರೇ ಮೃತರು!: ಚೀನದ ವುಹಾನ್‌ನಿಂದ ಬಂದಿದ್ದ ಕೇರಳದ ಮೂವರು ಯುವಕರಲ್ಲಿ ಕೋವಿಡ್ ಸೋಂಕು ದೃಢಪಡುವ ಮೂಲಕ ಭಾರತದಲ್ಲಿ ವೈರಸ್‌ ತನ್ನ ಖಾತೆ ತೆರೆದಿತ್ತು. ಅದಕ್ಕೂ ಒಂದು ವಾರ ಹಿಂದಷ್ಟೇ ಹಾಂಗ್‌ಕಾಂಗ್‌ನಲ್ಲಿ ಮೊದಲ ಪ್ರಕರಣ ಬೆಳಕಿಗೆ ಬಂದಿತ್ತು.

ಆದರೆ, ಭಾರತ ಲಾಕ್‌ಡೌನ್‌ ಜಾರಿಗೊಳಿಸುವ ಮೂಲಕ ಚೀನದ ಹಾದಿಯಲ್ಲಿ ನಡೆದರೆ, ಹಾಂಗ್‌ಕಾಂಗ್‌ ಆಡಳಿತ ಮಾತ್ರ ಲಾಕ್‌ಡೌನ್‌ ಜಾರಿಯ ಯೋಚನೆ ಕೂಡ ಮಾಡಲಿಲ್ಲ.

ಆದಾಗ್ಯೂ ಅಲ್ಲಿ ವೈರಸ್‌ ಅನ್ನು ಪರಿಣಾಮಕಾರಿಯಾಗಿ ಕಟ್ಟಿಹಾಕಲಾಯಿತು. ಈವರೆಗೆ ಅಲ್ಲಿ ಕೇವಲ 1,038 ಸೋಂಕಿತರಿದ್ದು, ಕೇವಲ ಇಬ್ಬರು ಮೃತಪಟ್ಟಿದ್ದಾರೆ. ಲಾಕ್‌ಡೌನ್‌ ಜಾರಿ ಹೊರತಾಗಿಯೂ ಭಾರತದಲ್ಲಿಂದು 30 ಸಾವಿರಕ್ಕೂ ಹೆಚ್ಚು ಸೋಂಕಿತರಿದ್ದಾರೆ.

ಅದ್ಭುತವಾಗಿತ್ತು ಜನಸ್ಪಂದನೆ: ಜನಸಂಖ್ಯೆ ದೃಷ್ಟಿಯಿಂದ ನೋಡುವುದಾದರೆ ಭಾರತ ಮತ್ತು ಹಾಂಗ್‌ಕಾಂಗ್‌ ಅನ್ನು ಒಂದೇ ತಕ್ಕಡಿಯಲ್ಲಿಟ್ಟು ತೂಗಲು ಆಗುವುದಿಲ್ಲ. ಏಕೆಂದರೆ ಅಲ್ಲಿನ ಜನಸಂಖ್ಯೆ ನಮ್ಮ ಬೆಂಗಳೂರಿಗಿಂತಲೂ ಕಡಿಮೆ.

ಆದರೆ, ಸೋಂಕು ಹರಡದಂತೆ ತಡೆಯಲು ಅಲ್ಲಿನ ಜನ ತೋರಿದ ಪ್ರಬುದ್ಧತೆ ಮಾತ್ರ ಅದ್ಭುತ. ಹಾಂಗ್‌ಕಾಂಗ್‌ ಆಡಳಿತ, ಜನರು ತಪ್ಪದೇ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದಷ್ಟೇ ಹೇಳಿತು.

ಇದಕ್ಕೆ ಜನ ಸ್ಪಂದಿಸಿದ ರೀತಿ ಕಂಡು ಜಗತ್ತೇ ಬೆರಗಾಯಿತು. ಏಕೆಂದರೆ ಹಾಂಗ್‌ಕಾಂಗ್‌ನ ಶೇ. 99 ಜನ ಮಾಸ್ಕ್ ಧರಿಸಿ ಓಡಾಡುತ್ತಿದ್ದರು. ಶೇ. 88 ಮಂದಿ ಸಾಮಾಜಿಕ ಅಂತರದ ನಿಯಮ ಪಾಲಿಸಿದರು.

ಏನಿದು ಹಾಂಗ್‌ಕಾಂಗ್‌ ಮಾದರಿ?
ಚೀನ ಹಾಗೂ ಭಾರತದಂತೆ ಲಾಕ್‌ಡೌನ್‌ ಜಾರಿಗೊಳಿಸದೆ, ಕೋವಿಡ್ ಸೋಂಕಿತರನ್ನು ಪರಿಣಾಮಕಾರಿಯಾಗಿ ಪತ್ತೆಹಚ್ಚುವುದು, ಸೋಂಕಿತರ ಸಂಪರ್ಕಕ್ಕೆ ಒಳಗಾದವರ ಕಟ್ಟುನಿಟ್ಟಿನ ಕ್ವಾರೆಂಟೈನ್‌ ಮತ್ತು ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ನಿಯಮದ ಶಿಸ್ತಿನ ಪಾಲನೆ; ರೀತಿಯ ಮೂರು ಅಂಶಗಳ ಕಾರ್ಯಕ್ರಮದ ಮೂಲಕ ಸೋಂಕು ಹರಡುವುದನ್ನು ತಡೆಗಟ್ಟುವುದೇ ಹಾಂಗ್‌ಕಾಂಗ್‌ ಮಾದರಿ.

ಯುಕೆ ಮೂಲದ ದಿ ಲ್ಯಾನ್ಸೆಟ್‌ ವೈದ್ಯಕೀಯ ವಾರಪತ್ರಿಕೆಯ ಏಪ್ರಿಲ್‌ ಎರಡನೇ ವಾರದ ಸಂಚಿಕೆಯಲ್ಲಿ ಪ್ರಕಟವಾಗಿದ್ದ ವಿಶ್ಲೇಷಣೆ ಮೂಲಕ ಜಗತ್ತಿಗೆ ಹಾಂಗ್‌ಕಾಂಗ್‌ ಮಾದರಿ ಪರಿಚಯವಾಯಿತು. ಸರ್ಕಾರದ ಆದೇಶಕ್ಕೆ ಕಾಯದೆ ಸಾರ್ವಜನಿಕರೇ ಸ್ವಯಂಪ್ರೇರಣೆಯಿಂದ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡಿದ್ದು ಈ ಮಾದರಿ ಯಶಸ್ವಿಯಾಗಲು ಪ್ರಮುಖ ಕಾರಣವಾಗಿತ್ತು.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.