4 ಸಾವಿರ ಪ್ರಕರಣಕ್ಕೆ ಇವೆ ತಬ್ಲಿಘಿ ಲಿಂಕ್‌: ಕೇಂದ್ರ ಸರಕಾರದ ಮಾಹಿತಿ ಪ್ರಕಟ


Team Udayavani, Apr 19, 2020, 6:35 AM IST

4 ಸಾವಿರ ಪ್ರಕರಣಕ್ಕೆ ಇವೆ ತಬ್ಲಿಘಿ ಲಿಂಕ್‌: ಕೇಂದ್ರ ಸರಕಾರದ ಮಾಹಿತಿ ಪ್ರಕಟ

ತಬ್ಲಿಘಿ ಜಮಾತ್ ಧಾರ್ಮಿಕ ಸಮಾವೇಶದಲ್ಲಿ ಪಾಲ್ಗೊಂಡವರನ್ನು ಕೋವಿಡ್ ತಪಾಸಣೆಗೆ ಕರೆದೊಯ್ಯುತ್ತಿರುವ ಫೈಲ್ ಚಿತ್ರ.

ನವದೆಹಲಿ: ಕೋವಿಡ್ 19 ವೈರಸ್  ಲಾಕ್‌ ಡೌನ್‌ ಆರಂಭವಾಗಿ 25 ದಿನ ಪೂರೈಸುತ್ತಿರುವಂತೆಯೇ, ಒಂದೇ ದಿನದಲ್ಲಿ ದೇಶವು 43 ಸಾವುಗಳನ್ನು ಕಂಡಿದೆ ಮತ್ತು 24 ಗಂಟೆಗಳಲ್ಲಿ 991 ಮಂದಿಗೆ ಸೋಂಕು ದೃಢಪಟ್ಟಿದೆ.

ವಿಶೇಷವೆಂದರೆ, ದೇಶಾದ್ಯಂತ ಪತ್ತೆಯಾದ ಒಟ್ಟಾರೆ 14,777 ಪ್ರಕರಣಗಳ ಪೈಕಿ 4,291 ಪ್ರಕರಣಗಳು ತಬ್ಲಿಘಿ ಜಮಾತ್‌ ಗೆ ಸಂಬಂಧಿಸಿದ್ದು ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಕೋವಿಡ್ 19 ವೈರಸ್  ಸೋಂಕಿಗೆ ಸಂಬಂಧಿಸಿ ಮಾತನಾಡಿದ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್, ನಮ್ಮ ದೇಶದಲ್ಲಿ ಕೋವಿಡ್ 19 ವೈರಸ್  ಗೆ ಬಲಿಯಾದವರ ಪೈಕಿ ಶೇ. 75.3ರಷ್ಟು ಮಂದಿ 60 ವರ್ಷ ಮೇಲ್ಪಟ್ಟವರು ಮತ್ತು ಇವರಲ್ಲಿ ಶೇ. 83ರಷ್ಟು ಮಂದಿ ಈ ಹಿಂದೆಯೇ ಹಲವು ಕಾಯಿಲೆಗಳಿಂದ ಬಳಲುತ್ತಿದ್ದವರು ಎಂದೂ ಹೇಳಿದ್ದಾರೆ.

ಒಟ್ಟು 1,992 ರೋಗಿಗಳು ಗುಣಮುಖರಾಗಿದ್ದು, ಇವರ ಪ್ರಮಾಣ ಶೇ.13.85ರಷ್ಟಿದೆ ಎಂದೂ ತಿಳಿಸಿದ್ದಾರೆ. ಇದೇ ವೇಳೆ, ಉತ್ತಮ ಬೆಳವಣಿಗೆ ಎಂಬಂತೆ 23 ರಾಜ್ಯಗಳ 47 ಜಿಲ್ಲೆಗಳಲ್ಲಿ ಯಾವುದೇ ಹೊಸ ಸೋಂಕಿನ ಪ್ರಕರಣ ಪತ್ತೆಯಾಗಿಲ್ಲ.

ಕರ್ನಾಟಕದ ಕೊಡಗು ಹಾಗೂ ಪುದುಚೇರಿಯ ಮಾಹೆಯಲ್ಲಿ ಕಳೆದ 28 ದಿನಗಳಲ್ಲಿ ಯಾವುದೇ ವ್ಯಕ್ತಿಗೂ ಸೋಂಕು ತಗುಲಿಲ್ಲ. ಉಳಿದ 45 ಜಿಲ್ಲೆಗಳಲ್ಲಿ ಕಳೆದ 14 ದಿನಗಳಿಂದ ಸೋಂಕು ಪತ್ತೆಯಾಗಿಲ್ಲ ಎಂದು ಅಗರ್ವಾಲ್‌ ಹೇಳಿದ್ದಾರೆ.

ಸೈಡ್‌ ಎಫೆಕ್ಟ್ ಬಗ್ಗೆ ಸಂಶೋಧನೆ: ಮಲೇರಿಯಾ ನಿಗ್ರಹ ಔಷಧವಾದ ಹೈಡ್ರಾಕ್ಸಿಕ್ಲೋರೋಕ್ವಿನ್‌ ಅನ್ನು ಕೊರೊನಾ ಸೋಂಕಿತರಿಗೆ ನೀಡುವುದರ ಕುರಿತು ಹಾಗೂ ಆ ಔಷಧದಿಂದಾಗುವ ಸೈಡ್‌ ಎಫೆಕ್ಟ್ ಗಳ ಕುರಿತು ಸಂಶೋಧನೆ ನಡೆಸಲಾಗುತ್ತಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಹೇಳಿದೆ.

ಈ ಔಷಧವನ್ನು ರೋಗಿಗಳ ಮೇಲೆ ಬಳಸಬಾರದು ಮತ್ತು ಅದರಿಂದ ಸಾಕಷ್ಟು ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆಯಿದೆ ಎಂದು ಇತ್ತೀಚೆಗೆ ಕೆಲವು ವೈದ್ಯರ ಹೇಳಿಕೆಗಳನ್ನು ಉಲ್ಲೇಖೀಸಿ ಮಾಧ್ಯಮಗಳು ವರದಿ ಪ್ರಕಟಿಸಿದ್ದವು. ಈ ಹಿನ್ನೆಲೆಯಲ್ಲಿ ಐಸಿಎಂಆರ್‌ ಹೇಳಿಕೆ ಮಹತ್ವ ಪಡೆದಿದೆ.

ವಿದೇಶಿಯರ ಸ್ಕ್ರೀನಿಂಗ್‌ಗೆ ಸೂಚನೆ
ವಿವಿಧ ರಾಜ್ಯಗಳ ವಶ ಕೇಂದ್ರದಲ್ಲಿರುವ ವಿದೇಶಿ ಕೈದಿಗಳನ್ನು ಕೂಡ ಸ್ಕ್ರೀನಿಂಗ್‌ ಗೆ ಒಳಪಡಿಸಬೇಕು ಎಂದು ಕೇಂದ್ರ ಗೃಹ ಇಲಾಖೆ ಸೂಚಿಸಿದೆ. ಈ ಕುರಿತು ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ಗೃಹ ಕಾರ್ಯದರ್ಶಿಗಳು ಹಾಗೂ ಜೈಲುಗಳ ಡಿಜಿಗಳಿಗೆ ಪತ್ರ ಬರೆಯಲಾಗಿದೆ.

ಕೋವಿಡ್ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಯಾವ್ಯಾವ ರಾಜ್ಯಗಳ ವಶ ಕೇಂದ್ರಗಳಲ್ಲಿ ವಿದೇಶಿಯರಿದ್ದಾರೋ, ಅವರ ಮೇಲೆ ಹಾಗೂ ಅವರನ್ನು ಭೇಟಿಯಾಗಲು ಬರುವವರ ಮೇಲೆ ಗಮನವಿಡಬೇಕು ಹಾಗೂ ಅವರನ್ನು ಸ್ಕ್ರೀನಿಂಗ್‌ಗೆ ಒಳಪಡಿಸಬೇಕು ಎಂದು ಪತ್ರದಲ್ಲಿ ಸೂಚಿಸಲಾಗಿದೆ.

ಮೃತರ ಪ್ರಮಾಣ

ವಯಸ್ಸು — ಮರಣ ಪ್ರಮಾಣ

0-45          ಶೇ.14.4

45- 60        ಶೇ.10.3

60-75          ಶೇ.33.1

75 ವರ್ಷ ಮೇಲ್ಪಟ್ಟವರು: 42.2%

ದೇಶದಲ್ಲಿ ಒಟ್ಟಾರೆ ಮರಣ ಪ್ರಮಾಣ: 3.3%

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.