ಜಗತ್ತಿನ ಆಶಾಕಿರಣವಾದ ಎಝಡ್‌ಡಿ 1222 ಲಸಿಕೆ


Team Udayavani, Jul 22, 2020, 6:40 AM IST

ಜಗತ್ತಿನ ಆಶಾಕಿರಣವಾದ ಎಝಡ್‌ಡಿ 1222 ಲಸಿಕೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕೋವಿಡ್ 19 ನಿಗ್ರಹಕ್ಕೆ ಆಕ್ಸ್‌ಫ‌ರ್ಡ್‌ನ ಸಂಶೋಧಕರು ‘ಎಝಡ್‌ಡಿ 1222′ ಎಂಬ ಲಸಿಕೆಯನ್ನು ಸಿದ್ಧಪಡಿಸಿದ್ದಾರೆ.

ಅದು ಈವರೆಗೆ ನಡೆಸಲಾಗಿರುವ ಪ್ರಾಥಮಿಕ ಹಂತದ ಪರೀಕ್ಷೆಗಳಲ್ಲಿ ಮನುಷ್ಯರ ಮೇಲೆ ಉತ್ತಮ ಪರಿಣಾಮ ಬೀರಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ಕೋವಿಡ್ 19ನಿಂದ ತತ್ತರಿಸಿರುವ ವಿಶ್ವಕ್ಕೆ ಸಂಶೋಧಕರ ಈ ಮಾತುಗಳು ಆಶಾಕಿರಣವಾಗಿ ಗೋಚರಿಸಿವೆ.

ಲಸಿಕೆ ತಯಾರಿಕೆ ಹೇಗೆ?
ಸಾಮಾನ್ಯ ನೆಗಡಿಯನ್ನು ಉಂಟು ಮಾಡುವಂಥ ವೈರಾಣುಗಳನ್ನು ಜಿಂಪಾಜಿಗಳ ದೇಹಕ್ಕೆ ಸೇರಿಸಿ, ಅಲ್ಲಿ ಉತ್ಪತ್ತಿಯಾಗುವ ಪ್ರತಿಕಾಯಗಳನ್ನು ಹಾಗೂ ಪ್ರೊಟೀನುಗಳನ್ನು ಪಡೆದು ಅದರಿಂದ ಈ ಲಸಿಕೆ ತಯಾರಿಸಲಾಗಿದೆ. ಹಾಗಾಗಿ ಇದಕ್ಕೆ ಚಿಂಪಾಝೀಸ್‌ ಅಡೆನೊವೈರಸ್‌ ವೈರಲ್‌ ವೆಕ್ಟರ್‌ (ಸಿಎಚ್‌ಎಡಿಒಎಕ್ಸ್‌ಎಲ್‌) ಎಂಬ ಹೆಸರಿಡಲಾಗಿದೆ.

ಪರೀಕ್ಷಾ ಹಂತ
ಪ್ರಾಥಮಿಕ ಪರೀಕ್ಷೆಗಳನ್ನು ದಾಟಿರುವ ಈ ಲಸಿಕೆಯನ್ನು ಈಗ ಅಂತಿಮ ಚರಣದ ಪರೀಕ್ಷೆಗಳಿಗೆ ಒಳಪಡಿಸಲಾಗಿದೆ. 18ರಿಂದ 55 ವರ್ಷದೊಳಗಿನ 1,077 ಆರೋಗ್ಯವಂತ ಯುವಕರನ್ನು ಆಯ್ದು ಅವರಿಗೆ ಈ ಲಸಿಕೆ ನೀಡಲಾಗಿತ್ತು.

ಎಪ್ರಿಲ್‌, ಮೇ ತಿಂಗಳಲ್ಲಿ ಯು.ಕೆ.ಯ ಐದು ಆಸ್ಪತ್ರೆಗಳಲ್ಲಿ ಕ್ಲಿನಿಕಲ್‌ ಟ್ರಯಲ್‌ ನಡೆಸಲಾಗಿದೆ. ಒಮ್ಮೆ ಲಸಿಕೆ ನೀಡಿದರೆ ಅದರ ಪರಿಣಾಮವಾಗಿ 56 ದಿನ ಕಾಲ ಆ ವ್ಯಕ್ತಿಗಳಲ್ಲಿ ರೋಗ ನಿರೋಧಕ ಶಕ್ತಿ ಬಲಿಷ್ಟವಾಗಿರುವುದನ್ನು ಸಂಶೋಧಕರು ಕಂಡುಕೊಂಡಿದ್ದಾರೆ.

ಲಸಿಕೆ ದರ ಎಷ್ಟು?
ಈ ಲಸಿಕೆಯ ಒಂದು ಡೋಸ್‌ನ ಬೆಲೆ ಯೂರೋಪ್‌ನಲ್ಲಿ 2.5 ಯೂರೋ (ಅಂದಾಜು 213 ರೂ.) ಆಗಿರಲಿದೆ. ಇಟಲಿಯ ಆರೋಗ್ಯ ಇಲಾಖೆಯೇ ಇದನ್ನು ದೃಢಪಡಿಸಿದೆ. ಇದನ್ನು ತಯಾರಿಸಲು ಪರವಾನಿಗೆ ಪಡೆದಿರುವ ಆ್ಯಸ್ಟ್ರಾಜೆನಿಕಾ ಕಂಪನಿ ಕೂಡ, ವಿಶ್ವ ಎದುರಿಸುತ್ತಿರುವ ಇಂಥ ತುರ್ತು ಪರಿಸ್ಥಿತಿಯಲ್ಲಿ ಲಾಭ ಮಾಡಿಕೊಳ್ಳುವ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದೆ. ಆದರೆ, ಬ್ರಿಟನ್‌ನಲ್ಲಿ ತಯಾರಾಗುವ ಈ ಲಸಿಕೆ ವಿಶ್ವದ ಇತರೆಡೆ ತಲುಪಿದಾಗ ಸಾಗಾಣಿಕೆ ವೆಚ್ಚವೂ ಸೇರಿ ಇದರ ಒಟ್ಟಾರೆ ವೆಚ್ಚ ಹೆಚ್ಚಾಗಲೂಬಹುದು.

ಪ್ರಯೋಗ ಎಲ್ಲೆಲ್ಲಿ ನಡೆಯುತ್ತಿದೆ?
ಬ್ರೆಜಿಲ್‌, ದಕ್ಷಿಣ ಆಫ್ರಿಕಾದಲ್ಲೂ ಅಲ್ಲಿನ ಸ್ಥಳೀಯರ ಮೇಲೆ ಈ ಪರೀಕ್ಷೆಗಳು ನಡೆಯುತ್ತಿವೆ. ಸದ್ಯದಲ್ಲೇ ಅಮೆರಿಕದಲ್ಲೂ ಪರೀಕ್ಷೆಗಳು ಆರಂಭವಾಗಲಿವೆ.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.