ಐಸಿಎಂಆರ್ ಮುಖ್ಯಸ್ಥ ಬಲರಾಮ್ ಗೆ ಕೋವಿಡ್ 19 ಸೋಂಕು ದೃಢ, ಏಮ್ಸ್ ಗೆ ದಾಖಲು

ಭಾರತದಲ್ಲಿ ಕೋವಿಡ್ 19 ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 1,44,789ಕ್ಕೆ ಏರಿಕೆಯಾಗಿದೆ.

Team Udayavani, Dec 18, 2020, 6:12 PM IST

ಐಸಿಎಂಆರ್ ಮುಖ್ಯಸ್ಥ ಬಲರಾಮ್ ಗೆ ಕೋವಿಡ್ 19 ಸೋಂಕು ದೃಢ, ಏಮ್ಸ್ ಗೆ ದಾಖಲು

ನವದೆಹಲಿ: ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿ(ಐಸಿಎಂಆರ್)ಯ ಮುಖ್ಯಸ್ಥ ಡಾ.ಬಲರಾಮ್ ಭಾರ್ಗವ್ ಅವರಿಗೆ ಶುಕ್ರವಾರ(ಡಿಸೆಂಬರ್ 18, 2020) ಕೋವಿಡ್ 19 ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ. ಭಾರ್ಗವ್ ಅವರು ರಾಜಧಾನಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೋವಿಡ್ ಗೆ ಸಂಬಂಧಿಸಿದ ಎಲ್ಲಾ ವಿಷಯಗಳು ಡಾ.ಭಾರ್ಗವ್ ಅವರ ಮೇಲ್ವಿಚಾರಣೆಯಲ್ಲಿ ನಡೆಯುತ್ತಿತ್ತು. ಇಂದು ಭಾರತದಲ್ಲಿ 22,890 ಕೋವಿಡ್ 19 ಪ್ರಕರಣ ಪತ್ತೆಯಾಗಿದ್ದು, ದೇಶದಲ್ಲಿ ಒಟ್ಟು ಕೋವಿಡ್ ಸಂಖ್ಯೆ 99.79 ಲಕ್ಷಕ್ಕೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶದ ಪ್ರಕಾರ, ದೇಶದಲ್ಲಿ ಒಟ್ಟು 95 ಲಕ್ಷಕ್ಕಿಂತಲೂ ಅಧಿಕ ಮಂದಿ ಕೋವಿಡ್ 19 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ತಿಳಿಸಿದೆ. ಕಳೆದ 24ಗಂಟೆಯಲ್ಲಿ 338 ಜನರು ಸಾವನ್ನಪ್ಪಿದ್ದು, ಇದರೊಂದಿಗೆ ಭಾರತದಲ್ಲಿ ಕೋವಿಡ್ 19 ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 1,44,789ಕ್ಕೆ ಏರಿಕೆಯಾಗಿದೆ.

95, 20, 827 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿ ಶೇ.95.40ರಷ್ಟು ಚೇತರಿಕೆ ಪ್ರಮಾಣ ಹೆಚ್ಚಳವಾಗಿದೆ. ಕೋವಿಡ್ 19 ಸೋಂಕಿನ ಮರಣ ಪ್ರಮಾಣ ಶೇ.1.45ಕ್ಕೆ ಇಳಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಭಾರತದಲ್ಲಿ 3,13,831 ಸಕ್ರಿಯ ಕೋವಿಡ್ 19 ಸೋಂಕಿನ ಪ್ರಕರಣ ಇದ್ದು, ಇದು ಒಟ್ಟು ಪ್ರಕರಣಕ್ಕೆ ಹೋಲಿಸಿದರೆ ಶೇ.3.4ರಷ್ಟು ಆಗಿರುವುದಾಗಿ ವಿವರಿಸಿದೆ. ಆಗಸ್ಟ್ 7ರಂದು 20 ಲಕ್ಷ ಪ್ರಕರಣ ಪತ್ತೆಯಾಗಿತ್ತು. ಆಗಸ್ಟ್ 23ರಂದು 30 ಲಕ್ಷ, ಸೆಪ್ಟೆಂಬರ್ 5ರಂದು 40 ಲಕ್ಷ ಪ್ರಕರಣ ಪತ್ತೆಯಾಗಿದ್ದು, ನವೆಂಬರ್ ನಲ್ಲಿ 90 ಲಕ್ಷ ಪ್ರಕರಣ ವರದಿಯಾಗಿತ್ತು.

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.