ಜನರು ಸಹಕಾರ ನೀಡದೇ ಇದ್ದರೆ ಲಾಕ್ ಡೌನ್ ಮುಂದುವರಿಕೆ ಅನಿವಾರ್ಯ: ಬಿ ಎಸ್ ಯಡಿಯೂರಪ್ಪ
Team Udayavani, Apr 6, 2020, 1:40 PM IST
ಬೆಂಗಳೂರು: ಕೋವಿಡ್-19 ಸೋಂಕು ತಡೆಗಟ್ಟಲು ನಾವು ಸದಾ ನಿಮ್ಮ ಜೊತೆಯಿದ್ದೇವೆ. ನೀವು ಮನೆಯಲ್ಲಿದ್ದು ನಮಗೆ ಸಹಕಾರ ನೀಡಿ. ಒಂದು ವೇಳೆ ಹೀಗಾಗದೇ ಇದ್ದಲ್ಲಿ ಲಾಕ್ ಡೌನ್ ಮುಂದುವರಿಕೆ ಮಾಡುವುದು ಅನಿವಾರ್ಯವಾಗಬಹುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಪರಿಸ್ಥಿತಿ ಅವಲೋಕಿಸಿ ಲಾಕ್ ಡೌನ್ ಮುಂದುವರಿಸುವ ಬಗ್ಗೆ ನಿರ್ಣಯಿಸಲಾಗುವುದು ಎಂದರು.
ಎಲ್ಲಾ ಸಚಿವರುಗಳಿಗೆ ಸೂಚನೆ ನೀಡಿದ್ದು, ಯಾರೂ ಮನೆಯಲ್ಲಿ ಕುಳಿತುಕೊಳ್ಳಬಾರದು. ತಮ್ಮ ಉಸ್ತುವಾರಿ ಇರುವ ಜಿಲ್ಲೆಗಳಿಗೆ ತೆರಳಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದರು.
ಎಲ್ಲಾ ಸಚಿವರುಗಳಿಗೆ ಜಿಲ್ಲಾ ಉಸ್ತುವಾರಿ ನೀಡದ ಕುರಿತಾಗಿ ಮಾತನಾಡಿ ಇಂದು ಅಥವಾ ನಾಳೆ ಇದರ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುತ್ತೇವೆ ಎಂದರು.
ಮರ್ಯಾದೆ ಉಳಿಸಿದ್ದು ಜಿಲ್ಲಾಧಿಕಾರಿಗಳು
ಈ ಸಂಕಷ್ಟದ ಸಂದರ್ಭದಲ್ಲಿ ಸರಕಾರದ ಮರ್ಯಾದೆ ಉಳಸಿದ್ದು ಸಚಿವರುಗಳಲ್ಲ, ಬದಲಾಗಿ ಜಿಲ್ಲಾಧಿಕಾರಿಗಳು. ಎಲ್ಲಾ ಜಿಲ್ಲಾಧಿಕಾರಿಗಳು ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ಅವರಿಗೆ ನನ್ನ ಧನ್ಯವಾದಗಳು ಎಂದರು.
ಯಾವ ರೈತರೂ ತಮ್ಮ ಬೆಳೆಗಳನ್ನು ಹಾಳು ಮಾಡಬಾರದು. ತರಕಾರಿ ಹಣ್ಣುಗಳನ್ನು ಕೊಳ್ಳಲು ಸೂಚನೆ ನೀಡಲಾಗಿದೆ. ಹಾಪ್ ಕಾಮ್ಸ್ ಗಳನ್ನು 24 ಗಂಟೆಯೂ ತೆರೆಯಲು ಆದೇಶಿಸಲಾಗಿದೆ ಎಂದರು.
ಸಚಿವರ ನಡುವಿನ ಭಿನ್ನಾಭಿಪ್ರಾಯದ ಬಗ್ಗೆ ಮಾತನಾಡಿದ ಬಿಎಸ್ ವೈ, ರಾಮುಲು ಮತ್ತು ಸುಧಾಕರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಇಬ್ಬರ ಕೆಲಸದ ಬಗ್ಗೆಯೂ ನಮಗೆ ತೃಪ್ತಿಯಿದೆ. ಸಚಿವ ಸುರೇಶ್ ಕುಮಾರ್ ಅವರು ಬೆಂಗಳೂರಿನಲ್ಲಿ ಇರುತ್ತಾರೆ ಎನ್ನುವ ಕಾರಣ ಅವರಿಗೆ ಕೋವಿಡ್-19 ವಕ್ತಾರ ಜವಾಬ್ದಾರಿ ನೀಡಲಾಗಿದೆ ಎಂದರು.
ಎಲ್ಲರ ಪ್ರಾಣ ಒಂದೇ. ಅದಕ್ಕೆ ಧರ್ಮದ ಬೇಧವಿಲ್ಲ. ಕೆಲವರು ಮಾಡಿದ ತಪ್ಪಿಗೆ ಒಂದು ಸಮುದಾಯವನ್ನು ಸಂಪೂರ್ಣ ದೂಷಣೆ ಮಾಡುವುದು ಸರಿಯಲ್ಲ ಎಂದು ಬಿ ಎಸ್ ವೈ ಅಭಿಪ್ರಾಯಪಟ್ಟರು.
ಕೋವಿಡ್-19 ಸೋಂಕು ಹತೋಟಿಗೆ ಬಂದ ನಂತರ ರಾಜ್ಯದ ಗಡಿಗಳನ್ನು ತೆರೆಯಲಾಗುತ್ತದೆ. ಅಲ್ಲಿಯರೆಗೆ ಯಾವುದೇ ಕಾರಣಕ್ಕೂ ಗಡಿಗಳನ್ನು ತೆರೆಯಲು ಅವಕಾಶವಿಲ್ಲ. ಮುಂದಿನ ದಿನಗಳಲ್ಲಿ ಆರ್ಥಿಕ ಸ್ಥಿತಿಗತಿಯ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ