ಈ ಗ್ರಾಮದಲ್ಲಿ ಸಾಮಾಜಿಕ ಅಂತರಕ್ಕೆ ಕಂಡುಕೊಳ್ಳಾಗಿದೆ ‘ಛತ್ರಿ’ ಐಡಿಯಾ


Team Udayavani, Apr 29, 2020, 9:41 PM IST

ಈ ಗ್ರಾಮದಲ್ಲಿ ಸಾಮಾಜಿಕ ಅಂತರಕ್ಕೆ ಕಂಡುಕೊಳ್ಳಾಗಿದೆ ‘ಛತ್ರಿ’ ಐಡಿಯಾ

ಅಲಪ್ಪುಝ: ಕೋವಿಡ್ 19 ವೈರಸ್ ವಿಶ್ವವ್ಯಾಪಿಯಾಗಿ ಹಬ್ಬಿರುವ ಈ ಸಂದರ್ಭದಲ್ಲಿ ಈ ಮಹಾಮಾರಿ ಸಾಂಕ್ರಾಮಿಕವಾಗುವುದನ್ನು ತಡೆಗಟ್ಟಲು ಭಾರತ ಸೇರಿದಂತೆ ಹಲವಾರು ರಾಷ್ಟ್ರಗಳು ಕಟ್ಟುನಿಟ್ಟಿನ ಲಾಕ್ ಡೌನ್ ಮೊರೆ ಹೋಗಿವೆ.

ಈ ಸಂದರ್ಭದಲ್ಲಿ ಕ್ವಾರೆಂಟೈನ್, ಸುರಕ್ಷಾ ಸಾಧನಗಳನ್ನು ಧರಿಸಿಕೊಳ್ಳುವುದು ಹಾಗೂ ಸೂಕ್ತ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಈ ವೈರಸ್ ಸಾಂಕ್ರಾಮಿಕವಾಗಿ ಹಬ್ಬುವುದನ್ನು ತಡೆಗಟ್ಟಬಹುದಾಗಿರುತ್ತದೆ.

ಹೇಳಿಕೇಳಿ ಭಾರತದಲ್ಲಿ ಜನಸಂಖ್ಯಾ ಪ್ರಮಾಣವೂ ಹೆಚ್ಚು ಹಾಗೂ ಜಸಾಂದ್ರತೆಯೂ ಹೆಚ್ಚು. ಇಂತಹ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಒಂದು ಸವಾಲಿನ ಕೆಲಸವೇ ಸರಿ.

ಇದಕ್ಕೊಂದು ಸರಳ ಪರಿಹಾರವನ್ನು ನಮ್ಮ ನೆರೆ ರಾಜ್ಯ ಕೇರಳ ಇದೀಗ ಕಂಡುಕೊಂಡಿದೆ. ಅದೇನೆಂದರೆ ಸಾರ್ವಜನಿಕ ಸ್ಥಳಗಳಲ್ಲಿ ಕೊಡೆಗಳ (ಛತ್ರಿ) ಬಳಕೆ! ಹೌದು, ಜನರು ಸಾರ್ವಜನಿಕ ಸ್ಥಳಗಳಲ್ಲಿ ಕೊಡೆಗಳನ್ನು ಬಿಡಿಸಿಕೊಂಡು ನಿಲ್ಲುವುದರಿಂದ ಸೂಕ್ತ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳು ಸಾಧ್ಯ ಎಂಬುದನ್ನು ಕೇರಳದ ಅಲಪ್ಪುಝ ಜಿಲ್ಲೆಯ ಥನೀರ್ ಮುಕ್ಕೊಂ ಪಂಚಾಯತ್ ವ್ಯಾಪ್ತಿಯಲ್ಲಿ ಸಾಧಿಸಿ ತೋರಿಸಲಾಗಿದೆ.

ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಅಲಪ್ಪುಝಾದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗಿತ್ತು. ಈ ಸಂದರ್ಭದಲ್ಲೇ ಕೇರಳ ಹಣಕಾಸು ಸಚಿವರಾಗಿರುವ ಥೋಮಸ್ ಐಸಾಕ್ ಅವರು ಸಾಮಾಜಿಕ ಅಂತರ ಕಾಪಾಡಲು ಈ ‘ಛತ್ರಿ’ ಐಡಿಯಾ ನೀಡಿದರು.

ಇಬ್ಬರು ವ್ಯಕ್ತಿಗಳು ಎರಡು ಛತ್ರಿಗಳನ್ನು ಬಿಡಿಸಿಕೊಂಡು ನಿಂತರೆ ಅವರ ನಡುವೆ ಕನಿಷ್ಟ ಒಂದು ಮೀಟರ್ ನಷ್ಟು ಅಂತರ ಸೃಷ್ಟಿಯಾಗುತ್ತದೆ. ಇದು ಜನರು ತಾವಾಗಿಯೇ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಪ್ರೇರೇಪಿಸುವಂತ ವಿಷಯವಾಗಿದೆ ಎಂದು ಇಲ್ಲಿನ ಪಂಚಾಯತ್ ಅಧಿಕಾರಿ ರೀಮಾ ಅವರು ವಿವರಿಸುತ್ತಾರೆ.

ಹೀಗಾಗಿ, ಜನರು ತಮ್ಮ ಮನೆಯಿಂದ ಹೊರಬರುವ ಸಂದರ್ಭದಲ್ಲಿ ಕಡ್ಡಾಯವಾಗಿ ಛತ್ರಿಗಳನ್ನು ಹಿಡಿದುಕೊಂಡೇ ಬರಬೇಕೆಂದು ಇಲ್ಲಿನ ಗ್ರಾಮ ಪಂಚಾಯತ್ ಆದೇಶವನ್ನೇ ಹೊರಡಿಸುತ್ತದೆ. ಪರಸ್ಪರ ಒಂದಕ್ಕೊಂದು ತಾಗದ ಛತ್ರಿಗಳು ಕನಿಷ್ಟ ಒಂದು ಮೀಟರ್ ನಷ್ಟು ಅಂತರವನ್ನು ವ್ಯಕ್ತಿಗಳ ನಡುವೆ ಉಂಟುಮಾಡುವುದರಿಂದ ಕೋವಿಡ್ ವೈರಸ್ ಹರಡುವಿಕೆಗೆ ಅಷ್ಟರಮಟ್ಟಿಗೆ ತಡೆಯಾದಂತಾಗುತ್ತದೆ ಎಂಬುದು ಸಚಿವ ಥೋಮಸ್ ಐಸಾಕ್ ಅವರ ಅಭಿಪ್ರಾಯವಾಗಿದೆ.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.