ಕರ್ನಾಟಕದಲ್ಲಿ17ಕ್ಕೆ ಏರಿದ ಸಾವಿನ ಸಂಖ್ಯೆ ; ದೇಶದಲ್ಲಿ 20 ಸಾವಿರ ಸೋಂಕುಪೀಡಿತರು


Team Udayavani, Apr 22, 2020, 6:26 AM IST

ಕರ್ನಾಟಕದಲ್ಲಿ17ಕ್ಕೆ ಏರಿದ ಸಾವಿನ ಸಂಖ್ಯೆ ; ದೇಶದಲ್ಲಿ 20 ಸಾವಿರ ಸೋಂಕುಪೀಡಿತರು

ಮೈಸೂರಿನಲ್ಲಿ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಅವಶ‍್ಯ ಮಾಹಿತಿ ಸಂಗ್ರಹಿಸುತ್ತಿರುವುದು.

ಬೆಂಗಳೂರು: ಕೋವಿಡ್ 19 ವೈರಸ್ ಮಾರಿಯಿಂದಾಗಿ ರಾಜ್ಯದಲ್ಲಿ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಕಲಬುರಗಿಯ 80 ವರ್ಷದ ವೃದ್ಧ ಮೃತಪಟ್ಟವರಾಗಿದ್ದು, ಈ ಮೂಲಕ ಸಾವಿನ ಸಂಖ್ಯೆಯೂ 17ಕ್ಕೆ ಏರಿದೆ.

ಮಂಗಳವಾರ ರಾಜ್ಯದಲ್ಲಿ ಮತ್ತೆ 10 ಪ್ರಕರಣಗಳು ಕಾಣಿಸಿಕೊಂಡಿದ್ದು, ಒಟ್ಟಾರೆ ಸೋಂಕಿಗೊಳಗಾದವರ ಸಂಖ್ಯೆ 418ಕ್ಕೆ ಏರಿಕೆಯಾಗಿದೆ.

ಕಲಬುರಗಿಯಲ್ಲಿ ಸೋಂಕಿನಿಂದ ಮೃತಪಟ್ಟ ವೃದ್ಧ ನಾಲ್ಕು ವರ್ಷಗಳಿಂದ ಪಾರ್ಕಿನ್‌ಸನ್‌ ಕಾಯಿಲೆಯಿಂದ ಬಳಲುತ್ತಿದ್ದರು. ಎ.19ರಂದು ತೀವ್ರ ಉಸಿರಾಟ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಮಂಗಳವಾರ ಪಾಸಿಟಿವ್‌ ವರದಿ ಬಂದಿತ್ತು. ಆದರೆ ಇದಕ್ಕೂ ಮುನ್ನ ವೃದ್ಧ ಸೋಮವಾರ (ಎ. 20) ರಾತ್ರಿ ಚಿಕಿತ್ಸೆ ಫ‌ಲಿಸದೆ ಮೃತಪಟ್ಟಿದ್ದಾರೆ.

17 ಮಂದಿ ಗುಣಮುಖ
ರಾಜ್ಯದ ಸೊಂಕುಪೀಡಿತರ ಪೈಕಿ ಮಂಗಳ ವಾರ 17 ಮಂದಿ ಗುಣಮುಖರಾಗಿದ್ದಾರೆ. ಇದರೊಂದಿಗೆ ಒಟ್ಟಾರೆ ಗುಣಮುಖರಾದವರ ಸಂಖ್ಯೆ 129ಕ್ಕೆ ಏರಿದೆ.

ದೇಶದಲ್ಲಿ 20 ಸಾವಿರ ಸೋಂಕುಪೀಡಿತರು
ಮಂಗಳವಾರ ರಾತ್ರಿ ವೇಳೆಗೆ ದೇಶದಲ್ಲಿ 20 ಸಾವಿರ ಮಂದಿಗೆ ಸೋಂಕು ದೃಢಪಟ್ಟಿದೆ. ಮಹಾರಾಷ್ಟ್ರ ಒಂದರಲ್ಲಿಯೇ ಮಂಗಳವಾರ ಮತ್ತೆ 552 ಮಂದಿಗೆ ಸೋಂಕು ತಗುಲಿದೆ. ಈ ರಾಜ್ಯದಲ್ಲಿ ಪೀಡಿತರ ಸಂಖ್ಯೆ 5,200ನ್ನೂ ದಾಟಿ ಮುಂದುವರಿಯುತ್ತಿದೆ. ಮಂಗಳವಾರ 19 ಮಂದಿ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 259ಕ್ಕೆ ತಲುಪಿದೆ. ಮಹಾರಾಷ್ಟ್ರದಲ್ಲಿ ರವಿವಾರ 552 ಮತ್ತು ಸೋಮವಾರ 446 ಪ್ರಕರಣಗಳು ವರದಿಯಾಗಿದ್ದವು.

ದಿಲ್ಲಿಯಲ್ಲಿ ಲೋಕಸಭಾ ಕಾರ್ಯಾಲಯದ ಸ್ಪಚ್ಛತಾ ಸಿಬಂದಿಯೊಬ್ಬರಿಗೆ ಕೋವಿಡ್ 19 ವೈರಸ್ ಸೋಂಕು ಮಂಗಳವಾರ ದೃಢಪಟ್ಟಿದೆ. ಸದ್ಯ ಅವರ ಕುಟುಂಬದ 11 ಮಂದಿಯನ್ನು ಕ್ವಾರಂಟೈನ್‌ ನಲ್ಲಿ ಇರಿಸಲಾಗಿದೆ.

55 ವರ್ಷ ಮೇಲ್ಪಟ್ಟವರಿಗೆ ಪರೀಕ್ಷೆ
ರಾಜ್ಯದಲ್ಲಿ ಅಸ್ತಮಾ, ಶ್ವಾಸಕೋಶ, ಹೃದಯ ಸಂಬಂಧಿ ಕಾಯಿಲೆಗಳನ್ನು ಹೊಂದಿರುವ 55 ವರ್ಷ ಮೇಲ್ಪಟ್ಟವರಿಗೆ ಶಂಕಿತ ಕೋವಿಡ್ 19 ವೈರಸ್ ಸಣ್ಣ ಪ್ರಮಾಣದ ಲಕ್ಷಣ ಕಂಡುಬಂದರೂ ತಪಾಸಣೆಗೆ ಒಳಪಡಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್‌ ಹೇಳಿದ್ದಾರೆ.

ಇದುವರೆಗೆ ಕೋವಿಡ್ 19 ವೈರಸ್ ಸೋಂಕು 55 ವರ್ಷ ಮೇಲ್ಪಟ್ಟವರಲ್ಲಿ ಹೆಚ್ಚಾಗಿ ಪತ್ತೆಯಾಗಿವೆ. ಅಲ್ಲದೆ 55ರಿಂದ 80 ವರ್ಷ ವಯಸ್ಸಿನವರು ಸೋಂಕಿನಿಂದ ಸಾವಿಗೀಡಾಗಿದ್ದಾರೆ ಎಂದವರು ತಿಳಿಸಿದ್ದಾರೆ.

ಜಾಗತಿಕ ಸೋಂಕು ಪೀಡಿತರ ಸಂಖ್ಯೆ: 25,01,156
ಒಟ್ಟು ಸಾವು (ಜಗತ್ತು) : 1,76,810

ಭಾರತ (ಸೋಂಕು): 20,004

ಸಾವು (ಭಾರತ): 641
ಚೇತರಿಕೆ : 3,121

ಕರ್ನಾಟಕ (ಸೋಂಕು): 418
ಎಲ್ಲಿ ಹೆಚ್ಚು ಸೋಂಕು
ಬೆಂಗಳೂರು 89
ಮೈಸೂರು 86
ಬೆಳಗಾವಿ 43
ವಿಜಯಪುರ 35

ಅತಿ ಹೆಚ್ಚು
ಮಹಾರಾಷ್ಟ್ರ 5,218
ಗುಜರಾತ್‌ 2,178
ದಿಲ್ಲಿ 2,156
ರಾಜಸ್ಥಾನ 1,659

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.