6 ವಾರಗಳ ಬಳಿಕ ಅತೀ ಕಡಿಮೆ ಪ್ರಕರಣ ಪತ್ತೆ: 24 ಗಂಟೆಗಳಲ್ಲಿ 1.65 ಲಕ್ಷ ಮಂದಿಗೆ ಸೋಂಕು
Team Udayavani, May 30, 2021, 10:30 AM IST
ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1.65 ಲಕ್ಷ ಮಂದಿಗೆ ಸೋಂಕು ತಗುಲಿದ್ದು, 3,460 ಮಂದಿ ಕೋವಿಡ್ ಕಾರಣದಿಂದ ಪ್ರಾಣ ತ್ಯಜಿಸಿದ್ದಾರೆ. ಕಳೆದ 6 ವಾರಗಳಲ್ಲಿ ಪತ್ತೆಯಾದ ಅತೀ ಕಡಿಮೆ ಕೋವಿಡ್ ಪ್ರಕರಣಗಳು ಇವು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕಳೆದ ಒಂದು ದಿನದಲ್ಲಿ 1,65,553 ಮಂದಿ ಕೋವಿಡ್ ಗೆ ತುತ್ತಾಗಿದ್ದು, ದೇಶದಲ್ಲಿ ಒಟ್ಟಾರೆ ಸೋಂಕಿತರ ಪ್ರಮಾಣ 2,78,94,800ಕ್ಕೆ ಏರಿಕೆಯಾಗಿದೆ. ಸುಮಾರು 21,14,508 ಸಕ್ರಿಯ ಪ್ರಕರಣಗಳಿದ್ದು, 2.54 ಕೋಟಿ ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದೇ ವೇಳೆ ಈವರೆಗೂ ಸುಮಾರು 3.25 ಲಕ್ಷ ಜನರು ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಹೆಚ್ಚಾದ ಇಲಿಗಳ ಹಾವಳಿ: ಪ್ಲೇಗ್ ಭೀತಿ; ಭಾರತದಿಂದ ಪಾಷಾಣ ಆಮದಿಗೆ ಅಸ್ತು
ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯ ವರದಿ ಪ್ರಕಾರ ಈವರೆಗೂ 34,31,83,748 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಮೇ 29 ರಂದು ಸುಮಾರು 20,63,839 ಜನರ ಗಂಟಲು ದ್ರವ ಮಾದರಿಯ ಪರೀಕ್ಷೆ ನಡೆಲಾಗಿದೆ.
ಏತನ್ಮಧ್ಯೆ ಕೋವಿಡ್ 19 ಸೋಂಕಿನಿಂದ ಪೋಷಕರನ್ನು ಕಳೆದುಕೊಂಡು ಅನಾಥರಾದ ಎಲ್ಲಾ ಮಕ್ಕಳಿಗೆ “PM-CARES ಯೋಜನೆಯಡಿ ನೆರವು ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ(ಮೇ 29) ಘೋಷಿಸಿದ್ದಾರೆ.
ಮಕ್ಕಳು ದೇಶದ ಭವಿಷ್ಯದ ಪ್ರಜೆಗಳು ಮತ್ತು ಈ ಮಕ್ಕಳನ್ನು ಬೆಂಬಲಿಸಲು ಮತ್ತು ರಕ್ಷಿಸಲು ದೇಶವು ಎಲ್ಲಾ ರೀತಿಯ ಬೆಂಬಲ ನೀಡಲಿದೆ. ಇದರಿಂದ ದೇಶದ ಬಲಿಷ್ಠ ಪ್ರಜೆಗಳಾಗಿ ಅಭಿವೃದ್ಧಿ ಹೊಂದಲು ಉಜ್ವಲ ಭವಿಷ್ಯ ಕಲ್ಪಿಸಿಕೊಡಲಿದೆ ಎಂದು ಪ್ರಧಾನಿ ಹೇಳಿದರು.
ಇದನ್ನೂ ಓದಿ: ಪ್ರೇಯಸಿಯ ಜೊತೆಗೆ ವಿವಾಹ ಬಂಧನಕ್ಕೆ ಒಳಗಾದ ಯುಕೆ ಪ್ರಧಾನಿ ಬೋರಿಸ್ ಜಾನ್ಸನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ