ಗಲ್ಫ್ ವಾಸಿ ಭಾರತೀಯರ ಕರೆತರಲು ನೌಕಾಪಡೆ ಸಜ್ಜು

ಐಎನ್‌ಎಸ್‌ ಜಲಾಶ್ವ ಸಹಿತ 3 ಹಡಗುಗಳ ಮೂಲಕ ಲಕ್ಷಕ್ಕೂ ಅಧಿಕ ಮಂದಿ ವಾಪಸ್‌

Team Udayavani, Apr 30, 2020, 6:12 AM IST

ಗಲ್ಫ್ ವಾಸಿ ಭಾರತೀಯರ ಕರೆತರಲು ನೌಕಾಪಡೆ ಸಜ್ಜು

ಭಾರತೀಯ ನೌಕಾದಳದ ಎರಡನೇ ದೈತ್ಯ ಹಡಗು ಐಎನ್‌ಎಸ್‌ ಜಲಾಶ್ವ ಈ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ.

ಹೊಸದಿಲ್ಲಿ: ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿರುವ ಸಹಸ್ರಾರು ಭಾರತೀಯ ವಲಸೆ ಕಾರ್ಮಿಕರನ್ನು ತಾಯ್ನಾಡಿಗೆ ಕರೆತರಲು ನೌಕಾಪಡೆ, ವಾಯುಪಡೆಗಳು ಸಜ್ಜಾಗಿವೆ.

ನೌಕಾಪಡೆಯು ಕನಿಷ್ಠ ಮೂರು ಹಡಗುಗಳನ್ನು ಇದಕ್ಕಾಗಿ ಸಿದ್ಧಪಡಿಸುತ್ತಿದ್ದು, ವೈದ್ಯಕೀಯ ಸೌಲಭ್ಯಗಳ ಜತೆಗೆ ಸಾಮಾಜಿಕ ಅಂತರದಲ್ಲಿ ಆಸನ ವ್ಯವಸ್ಥೆಯನ್ನೂ ಮಾಡಿಕೊಳ್ಳುತ್ತಿದೆ.

ಡಜನ್‌ಗಟ್ಟಲೆ ಯುದ್ಧ ಟ್ಯಾಂಕ್‌ಗಳನ್ನು ಸಾಗಿಸಬಲ್ಲ, ಭಾರತೀಯ ನೌಕಾದಳದ ಎರಡನೇ ದೈತ್ಯ ಹಡಗು ಐಎನ್‌ಎಸ್‌ ಜಲಾಶ್ವ ಈ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ.

ಇದಕ್ಕೆ ನಿಯೋಜಿಸಲ್ಪಟ್ಟ ಪ್ರತೀ ಹಡಗಿನಲ್ಲೂ ವೈದ್ಯಕೀಯ ತಂಡಗಳು ಇರಲಿವೆ. ಭಾರತ ಹಿಂದೆಂದೂ ಕೈಗೊಂಡಿರದಂಥ ಬಹುದೊಡ್ಡ ಸ್ಥಳಾಂತರ ಪ್ರಕ್ರಿಯೆ ಇದಾಗಿದ್ದು, ಸುಮಾರು 1 ಲಕ್ಷಕ್ಕೂ ಅಧಿಕ ಮಂದಿಯನ್ನು ಕರೆತರಲಾಗುತ್ತದೆ.

ವ್ಯವಸ್ಥೆ ಹೇಗಿದೆ?
ಪ್ರತೀ ಹಡಗಿನಲ್ಲಿ ಸಾಮಾಜಿಕ ಅಂತರ ನೀಡಿ, ತಲಾ 500 ಮಂದಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ಮೇಲ್ಭಾಗದ ಡೆಕ್‌ಗಳಲ್ಲಿ, ತೆರೆದ ಸ್ಥಳಗಳಲ್ಲಿ ಪುರುಷರಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿದ್ದರೆ, ಮಹಿಳೆಯರು, ಮಕ್ಕಳು, ವೃದ್ಧರಿಗೆ ಕೆಳಗಿನ ಡೆಕ್‌ಗಳಲ್ಲಿ ವಸತಿ ವ್ಯವಸ್ಥೆ ಇರುತ್ತದೆ. ಆಹಾರ, ಔಷಧ ಸಂಗ್ರಹ ಕಾರ್ಯ ಭರದಿಂದ ಸಾಗಿದೆ. ಕೊಚ್ಚಿ, ವಿಶಾಖಪಟ್ಟಣ, ಕಾರವಾರದಿಂದ ಈ ಹಡಗುಗಳು ಹೊರಡಲಿವೆ.

ಸ್ಥಳಾಂತರಕ್ಕೂ ಮುನ್ನ ಆರೋಗ್ಯ ಪರೀಕ್ಷೆ ನಡೆಸಲಾಗುತ್ತದೆ. ಕೋವಿಡ್ ನೆಗೆಟಿವ್‌ ಇದ್ದವರನ್ನು ವಿಮಾನಗಳಲ್ಲೂ ಕರೆತರಲಾಗುತ್ತದೆ. ಏರ್‌ ಇಂಡಿಯಾ, ಏರ್‌ಫೋರ್ಸ್‌ನ ವಿಮಾನಗಳು ಈ ಕಾರ್ಯಾಚರಣೆಗೆ ಸಜ್ಜಾಗುತ್ತಿವೆ.

ತಾಯ್ನಾಡಿಗೆ ಬಂದ ಪ್ರತಿಯೊಬ್ಬರನ್ನೂ ಮತ್ತೆ ಆರೋಗ್ಯ ಪರೀಕ್ಷೆಗೊಳಪಡಿಸಿ, 14 ದಿನಗಳ ಕ್ವಾರಂಟೈನ್‌ಗೆ ಕಳುಹಿಸಲಾಗುತ್ತದೆ. ಇಂಥವರಿಗೆ ಕ್ವಾರಂಟೈನ್‌ ವ್ಯವಸ್ಥೆ ಕಲ್ಪಿಸಲು ಕೇರಳ ಈಗಾಗಲೇ ಮುಂದೆ ಬಂದಿದೆ. ಕರಾವಳಿ ತೀರಗಳನ್ನು ಹೊಂದಿರುವ ಇತರ ರಾಜ್ಯಗಳನ್ನೂ ಇದಕ್ಕಾಗಿ ಕೇಂದ್ರ ಸರಕಾರ ಒಪ್ಪಿಸುವ ಸಾಧ್ಯತೆ ಇದೆ.

ಕಾರ್ಮಿಕರಿಗೆ ಮೊದಲ ಆದ್ಯತೆ
ಯುಎಇ, ಸೌದಿ ಅರೇಬಿಯಾ, ಕುವೈಟ್‌, ಒಮಾನ್‌, ಕತಾರ್‌, ಬಹ್ರೈನ್‌ಗಳಲ್ಲಿ ನೆಲೆಸಿರುವ ಶೇ.70 ಭಾರತೀಯರು ತಾಯ್ನಾಡಿಗೆ ಮರಳಲು ತುದಿಗಾಲಿನಲ್ಲಿ ನಿಂತಿದ್ದಾರೆ. ಅಲ್ಲಿನ ರಾಯಭಾರಿ ಕಚೇರಿಗಳನ್ನು ಸಂಪರ್ಕಿಸಿ ಸ್ಥಳಾಂತರಿಸಬೇಕಾದವರ ವಿವರಗಳನ್ನು ಒಟ್ಟುಗೂಡಿಸುವ ಪ್ರಕ್ರಿಯೆ ಆರಂಭಗೊಂಡಿದೆ.

ಮೂಲಗಳ ಪ್ರಕಾರ, ವಲಸೆ ಕಾರ್ಮಿಕರಿಗೆ ಮೊದಲ ಆದ್ಯತೆ ನೀಡಲು ಕೇಂದ್ರ ಸರಕಾರ ನಿರ್ಧರಿಸಿದೆ. ಕೆಲಸದ ಅವಧಿಯ ವೀಸಾ ಮುಗಿದಿರುವ, ಇನ್ನೇನು ಮುಗಿಯಲಿರುವ, ಹಸಿವಿನಿಂದ ಕಂಗೆಟ್ಟಿರುವ ವಲಸೆ ಕಾರ್ಮಿಕರನ್ನು ಮೊದಲ ಹಂತದಲ್ಲಿಯೇ ಕರೆತರಲಾಗುತ್ತದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.