ಇಂಡೋನೇಷ್ಯಾ: ದಾಖಲೆ ಏರಿಕೆ ; ಇಂಡೋನೇಷ್ಯಾ ಒಂದೇ ದಿನ 1043 ಪಾಸಿಟಿವ್‌ ಕೇಸು


Team Udayavani, Jun 10, 2020, 2:20 PM IST

ಇಂಡೋನೇಷ್ಯಾ: ದಾಖಲೆ ಏರಿಕೆ ; ಇಂಡೋನೇಷ್ಯಾ ಒಂದೇ ದಿನ 1043 ಪಾಸಿಟಿವ್‌ ಕೇಸು

ಸಾಂದರ್ಭಿಕ ಚಿತ್ರ

ಜಕಾರ್ತಾ: ಲಾಕ್‌ಡೌನ್‌ ಸಡಿಲಗೊಳಿಸಿದ ಬಳಿಕ ಇಂಡೋನೇಷ್ಯಾದಲ್ಲಿ ದಾಖಲೆಯ ಸಂಖ್ಯೆಯಲ್ಲಿ ಕೋವಿಡ್‌ ಸೋಂಕು ಪ್ರಕರಣಗಳು ಏರಿಕೆ ಕಂಡಿವೆ.  ಮಂಗಳವಾರ ಒಂದೇ ದಿನ 1043 ಪಾಸಿಟಿವ್‌ ಕೇಸುಗಳು ಪತ್ತೆಯಾಗಿವೆ. ಇಂಡೋನೇಷ್ಯಾದ ಆರೋಗ್ಯ ಸಚಿವಾಲಯದ ಪ್ರಕಾರ, ದೇಶದಲ್ಲಿ 33076 ಪ್ರಕರಣಗಳು ಕಂಡು ಬಂದಿದ್ದು, 1923 ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು 14414 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.

ಈ ಮೊದಲು ಜಕಾರ್ತದಲ್ಲಿ ಕೋವಿಡ್‌ ಪಾಸಿಟಿವ್‌ ಪ್ರಕರಣಗಳು ಇಳಿಕೆಯಾಗುತ್ತಿವೆ ಎಂದು ಹೇಳಲಾಗುತ್ತಿತ್ತು. ಆದರೆ ಒಂದೇ ದಿನ 232 ಕೇಸುಗಳು ಪತ್ತೆಯಾಗಿದ್ದು ಇಡೀ ನಗರವನ್ನು ಬೆಚ್ಚಿ ಬೀಳಿಸಿವೆ. ಲಾಕ್‌ಡೌನ್‌ ಸಡಿಲವಾದ್ದರಿಂದ ಇಲ್ಲಿನ ಜನಜೀವನ ಸಹಜ ಸ್ಥಿತಿಗೆ ಬರುತ್ತಿದ್ದು, ಜನರ ಓಡಾಟವೂ ಹೆಚ್ಚಿತ್ತು ಎಂದು ಹೇಳಲಾಗಿದೆ. ಲಾಕ್‌ಡೌನ್‌ ಅನ್ನು ತರಾತುರಿಯಲ್ಲಿ ಸಡಿಲಗೊಳಿಸಿರುವುದು ಮತ್ತು ಸರಕಾರದ ಕ್ರಮಗಳಿಂದಾಗಿ ಪ್ರಕರಣಗಳು ದೇಶದ ವಿವಿಧೆಡೆ ಏರಿಕೆ ಕಂಡಿವೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಅದರಲ್ಲೂ ರಾಜಧಾನಿ ಜಕಾರ್ತದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಿರುವುದು ನಗರ ವಾಸಿಗಳನ್ನು ಬೆಚ್ಚಿ ಬೀಳಿಸಿದೆ.  ಇನ್ನು ಪೂರ್ವ ಜಾವಾದಲ್ಲಿ 180 ಪ್ರಕರಣಗಳು ಕಂಡು ಬಂದಿದ್ದು, ದಕ್ಷಿಣ ಕಲಿಮಂತನ್‌ನಲ್ಲಿ 91 ಪ್ರಕರಣಗಳು ಕಂಡು ಬಂದಿವೆ.

ಈ ಮೊದಲು ಶನಿವಾರ ದೇಶದಲ್ಲಿ 993 ಪ್ರಕರಣ ಗಳು ಕಂಡು ಬಂದಿದ್ದು ಇದು ಈವರೆಗಿನ ಸರ್ವಾಧಿಕ ದಾಖಲೆಯಾಗಿತ್ತು.  ಕೋವಿಡ್‌ ಲಾಕ್‌ಡೌನ್‌ ತೆರವುಗೊಂಡ ಬಳಿಕ ಪ್ರತ್ಯೇಕ ನಿಯಮಗಳನ್ನು ಇಂಡೋನೇಷ್ಯಾ ಸರಕಾರ ಜಾರಿ ಮಾಡಿದ್ದು, ಸಮೂಹಕ್ಕೆ ಅನ್ವಯವಾಗುವಂತಹ ಕಾನೂನುಗಳನ್ನು ಜಾರಿಗಳಿಸಿತ್ತು. ಅದರಂತೆ ಎ.10ರಿಂದ ಈ ನಿಯಮಗಳು ಜಾರಿ ಯಾಗಿದ್ದವು. ಶಾಲೆ, ಕಚೇರಿ, ಧಾರ್ಮಿಕ ಕೇಂದ್ರಗಳು ಮುಚ್ಚಿದ್ದವು. ಸೋಮವಾರದಿಂದ ಇವುಗಳನ್ನು ತೆರೆಯಲು ಉದ್ದೇಶಿಸಲಾಗಿತ್ತ. ಅದರಂತೆ ರೆಸ್ಟೋರೆಂಟ್‌ಗಳು, ಕಚೇರಿಗಳು, ಮೃಗಾಲಯಗಳು ತೆರೆದುಕೊಂಡಿದ್ದವು.

ಜಕಾರ್ತ ನಗರದಲ್ಲಿ ಸಾರ್ವಜನಿಕ ಸಾರಿಗೆಯನ್ನು ಆರಂಭಿಸಲು ಅನುಮತಿ ನೀಡಿತ್ತು. ವಾಹನಗಳ ಓಡಾಟಕ್ಕೆ ಮುಕ್ತ ಅವಕಾಶವನ್ನು ಕಲ್ಪಿಸಲಾಗಿತ್ತು.  ಕೋವಿಡ್‌ ಪ್ರಕರಣಗಳು ಕಡಿಮೆಯಾಗುತ್ತಿದ್ದಂತೆಯೇ ಜಕಾರ್ತದಲ್ಲಿ ರೆಡ್‌ಝೋನ್‌ಗಳಿಂದ ಗ್ರೀನ್‌ ಝೋನ್‌ಗಳಿಗೆ ಮತ್ತು ಯಲ್ಲೋ ಝೋನ್‌ಗಳಿಗೆ ಸಾರ್ವಜನಿಕ ಸಾರಿಗೆ ಮತ್ತು ವಾಹನಗಳ ಓಡಾಟಕ್ಕೆ ಅನುಮತಿ ಕಲ್ಪಿಸಿದ್ದಾಗಿ ಅಲ್ಲಿನ ಗವರ್ನರ್‌ ಅನೀಸ್‌ ಬಾಸ್ವೀಡನ್‌ ಅವರು ಹೇಳಿದ್ದರು.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.