ಮಾಸ್ಕ್ ಧರಿಸದ ಜನರೇ ಕೋವಿಡ್19 ಸೋಂಕು ವಾಹಕರಾಗುತ್ತಿದ್ದಾರೆ!: ICMR ತಜ್ಞರ ಆತಂಕ
Team Udayavani, Aug 25, 2020, 8:44 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ದೇಶದಲ್ಲಿ ಕೋವಿಡ್ 19 ಸೋಂಕುಪೀಡಿತರ ಒಟ್ಟು ಸಂಖ್ಯೆ 31.50 ಲಕ್ಷಕ್ಕೆ ಏರಿಕೆಯಾಗಿದೆ ಮತ್ತು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 60,975 ಹೊಸ ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದೆ.
ಈ ನಡುವೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ICMR) ತಜ್ಞರು ಹೊಸ ಆತಂಕ ಒಂದನ್ನು ಹೊರ ಹಾಕಿದ್ದಾರೆ. ಅದೇನೆಂದರೆ ನಮ್ಮಲ್ಲಿ ವಯಸ್ಸಿನ ಬೇಧವಿಲ್ಲದೆ ಈ ಸೋಂಕು ವ್ಯಾಪಕವಾಗಿ ಹರಡುತ್ತಿದೆ.
ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸರಿಯಾಗಿ ಮಾಸ್ಕ್ ಧರಿಸದಿರುವಿಕೆ ಮತ್ತು ಇನ್ನಿತರ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳದೇ ಇರುವಂತ ವ್ಯಕ್ತಿಗಳೇ ಈ ಸೋಂಕಿನ ವಾಹಕರಾಗಿದ್ದಾರೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
‘ಕೋವಿಡ್ 19 ಸೋಂಕಿಗೆ ಯುವಕರು ಅಥವಾ ವಯಸ್ಸಾದ ವ್ಯಕ್ತಿಗಳೇ ಒಳಗಾಗುತ್ತಿದ್ದಾರೆ ಎಂದು ನಾನು ಖಚಿತವಾಗಿ ಹೇಳಲಾರೆ. ಆದರೆ ನಮ್ಮಲ್ಲಿ ಬೇಜವಾಬ್ದಾರಿತನ ತೋರುವವರೇ ಈ ಸೋಂಕಿನ ವಾಹಕರಾಗಿದ್ದಾರೆ ಎಂಬುದನ್ನು ಮಾತ್ರ ನಾನು ಖಚಿತವಾಗಿ ಹೇಳಬಲ್ಲೆ’ ಎಂದು ICMRನ ಡೈರೆಕ್ಟರ್ ಜನರಲ್ ಡಾ. ಬಲರಾಮ ಭಾರ್ಗವ ಅವರು ಹೇಳಿದ್ದಾರೆ.
ಕೋವಿಡ್ 19 ಸೋಂಕಿಗೆ ಲಸಿಕೆ ಕಂಡುಹಿಡಿಯುವ ಪ್ರಕ್ರಿಯೆ ಭರದಿಂದ ಸಾಗಿದೆ ಎಂದು ಡಾ. ಭಾರ್ಗವ ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.
ಸೀರಂ ಇನ್ ಸ್ಟಿಟ್ಯೂಟ್ ಹೊರತರಲು ಉದ್ದೇಶಿಸಿರುವ ಲಸಿಕೆ 2ಬಿ ಹಂತದಲ್ಲಿದೆ ಹಾಗೂ ಭಾರತ್ ಬಯೋಟೆಕ್ ಮತ್ತು ಝೈಡಸ್ ಕ್ಯಾಡಿಲ್ಲಾ ಲಸಿಕೆಗಳು ಒಂದನೇ ಹಂತದ ಪ್ರಯೋಗವನ್ನು ಪೂರ್ಣಗೊಳಿಸಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ