ಕೋವಿಡ್‌ 19 ಸಂಕಷ್ಟ; ಅಮೆರಿಕದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ


Team Udayavani, Aug 28, 2020, 2:50 AM IST

ಕೋವಿಡ್‌ 19 ಸಂಕಷ್ಟ; ಅಮೆರಿಕದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ

ಹೊಸದಿಲ್ಲಿ: ಕೋವಿಡ್‌ ಸೋಂಕಿತ ವ್ಯಕ್ತಿಯಿಂದ ಮಾಹಿತಿ ಪಡೆಯುತ್ತಿರುವ ಆರೋಗ್ಯ ಸಿಬಂದಿಗಳು.

ನ್ಯೂಯಾರ್ಕ್‌: ಕಳೆದ ವಾರ ಅಮೆರಿಕದಲ್ಲಿ ಒಂದು ಮಿಲಿಯನ್‌ ಕಾರ್ಮಿಕರು ನಿರುದ್ಯೋಗ ಪ್ರಯೋಜನಗಳಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ದೇಶ ವ್ಯಾಪಿ ಸಂಪೂರ್ಣ ಲಾಕ್‌ಡೌನ್‌ ನಿರ್ಧಾರದಿಂದಾಗಿ ನಿರುದ್ಯೋಗದ ಪ್ರಮಾಣ ಹೆಚ್ಚಾಗಿದೆ. ವಸತಿ ಮಾರುಕಟ್ಟೆ, ವಾಹನ ಮಾರಾಟ ಮತ್ತು ಆರ್ಥಿಕತೆಯ ಇತರ ವಿಭಾಗಗಳಲ್ಲಿ ಕುಸಿತ ಹೆಚ್ಚಾಗುತ್ತಿದೆ. ಅಮೆರಿಕದಲ್ಲಿ ಕೋವಿಡ್‌ ವೈರಸ್‌ ಅತೀ ಹೆಚ್ಚಿ ಸಂಖ್ಯೆಯಲ್ಲಿ ಇದ್ದಾರೆ. ಇದು ಅತೀ ಹೆಚ್ಚಿನ ಉದ್ಯೋಗ ನಷ್ಟಕ್ಕೆ ಮತ್ತೂಂದು ಕಾರಣವಾಗಿದೆ.

ಯುಎಸ್‌ ಬ್ಯೂರೋ ಆಫ್ ಲೇಬರ್‌ ಸ್ಟ್ಯಾಟಿಸ್ಟಿಕ್ಸ್‌ ಗುರುವಾರ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ ಕಳೆದ ವಾರ ನಿರುದ್ಯೋಗ ಹಕ್ಕುಗಳನ್ನು ಸಲ್ಲಿಸುವವರ ಸಂಖ್ಯೆ ಹಿಂದಿನ ವಾರಕ್ಕಿಂತ 98,000ರಷ್ಟು ಕಡಿಮೆಯಾಗಿದೆ ಎಂದಿದೆ. 14.5 ದಶಲಕ್ಷಕ್ಕೂ ಹೆಚ್ಚು ಜನರು ನಿರುದ್ಯೋಗ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ. ಒಂದು ವರ್ಷದ ಹಿಂದೆ 1.7 ದಶಲಕ್ಷದಷ್ಟಿತ್ತು.

ಕಳೆದ ವಾರ, ಸುಮಾರು 608,000 ಜನರು ನಿರುದ್ಯೋಗ ಸಹಾಯಕ್ಕಾಗಿ ಹೊಸ ಕಾರ್ಯಕ್ರಮದಡಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಸರಕಾರ ಈ ಹೊಸ ಯೋಜನೆ ಫ‌ಲಾನುಭವಿಗಳ ಅರ್ಹತೆಯನ್ನು ವಿಸ್ತರಿಸುತ್ತದೆ. ಒಟ್ಟಾರೆಯಾಗಿ, ಕಾರ್ಮಿಕ ಇಲಾಖೆಯಡಿ 27 ಮಿಲಿಯನ್‌ ಜನರು ಕೆಲವು ರೀತಿಯ ನಿರುದ್ಯೋಗ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ.

ಸಾಂಕ್ರಾಮಿಕ ರೋಗವು ಅಮೆರಿಕದ ಆರ್ಥಿಕತೆಯ ಮೇಲೆ ಭಾರೀ ಪರಿಣಾಮವನ್ನು ಬೀರಿದೆ. ವ್ಯಾಪಾರಗಳು ಬಂದ್‌ ಆಗಿದ್ದು, ಲಾಕ್‌ಡೌನ್‌ ಜಾರಿಗೊಳಿಸಳಾಗಿದೆ. ಮಾರ್ಚ್‌ ಮತ್ತು ಎಪ್ರಿಲ್‌ ತಿಂಗಳಲ್ಲಿ 22 ದಶಲಕ್ಷಕ್ಕೂ ಹೆಚ್ಚಿನ ಉದ್ಯೋಗಗಳು ನಷ್ಟಗೊಂಡಿವೆ.

ಕೋವಿಡ್‌ ತನ್ನ ಶಕ್ತಿ ಕಳೆದುಕೊಳ್ಳುತ್ತಿದೆ !
ಲಂಡನ್‌: ಕೇಂಬ್ರಿಡ್ಜ್ ವಿಶ್ವವಿದ್ಯಾಲಯ ಎಲ್ಲ ಮಾದರಿಯ ಕೊರೊನಾ ವೈರಸ್‌ ಸೋಂಕಿಗೆ ಲಸಿಕೆ ಅಭಿವೃದ್ಧಿಪಡಿಸುವಲ್ಲಿ ಯಶಸ್ವಿಯಾಗಿದೆ ಎಂದು ಬ್ರಿಟನ್‌ ಹೇಳಿದೆ. ಈ ಲಸಿಕೆ ಕೋವಿಡ್‌-19ಗೆ ಮಾತ್ರವಲ್ಲದೇ ಎಲ್ಲ ಮಾದರಿಯ ಕೊರೊನಾ ವೈರಸ್‌ ಸೋಂಕಿಗೂ ಪರಿಣಾಮಕಾರಿ ಎಂದು ಬ್ರಿಟನ್‌ ವಿಜ್ಞಾನಿಗಳು ತಿಳಿಸಿದ್ದಾರೆ.

ಈಗಾಗಲೇ ಪ್ರಾಣಿಗಳ ಮೇಲಿನ ಪರೀಕ್ಷೆ ಯಶಸ್ವಿಯಾಗಿದ್ದು, ಮುಂದಿನ ವಾರದಲ್ಲಿ ಮಾನವರ ಮೇಲೆ ಪ್ರಯೋಗ ನಡೆಸಲಾಗುವುದು ಎಂದು ಅವರು ಖಚಿತಪಡಿಸಿದ್ದಾರೆ. ಇದೀಗ ಜಾಗತಿಕವಾಗಿ ಕೊರೊನಾ ಸೋಂಕಿನ ತೀವ್ರತೆ ಕಡಿಮೆಯಾಗಿದೆ. ಈ ಹಿಂದೆ ಇದ್ದ ಆರ್ಭಟವನ್ನು ವೈರಸ್‌ ಈಗ ಹೊಂದಿಲ್ಲ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಇದಕ್ಕೆ ಹವಾಮಾನ ಕಾರಣವಾಗಿರಬಹುದು.

ಜರ್ಮನಿ ಪ್ರಯಾಣದ ಹಿನ್ನೆಲೆ ಇರುವವರ ಕಡ್ಡಾಯ ಕೋವಿಡ್‌ ಪರೀಕ್ಷೆಯನ್ನು ಹಿಂಪಡೆದಿದೆ. ಈ ನಡುವೆ ಆಸ್ಟ್ರೇಲಿಯಾದಲ್ಲಿ ಸೋಂಕಿನ ಪ್ರಮಾನ ಹೆಚ್ಚುತ್ತಿದೆ. ಜಗತ್ತಿನಾದ್ಯಂತ ಒಟ್ಟು 24,466,049 ಸೋಂಕಿತರು ಇದ್ದಾರೆ. ಇದರಲ್ಲಿ 16,967,210 ಸೋಂಕಿತರು ಗುಣಮುಖರಾಗಿದ್ದಾರೆ. 832,242 ಸೋಂಕಿತರು ಮೃತಪಟ್ಟಿದ್ದಾರೆ. ಜಗತ್ತಿನಲ್ಲಿ ಅತಿಹೆಚ್ಚು ಪ್ರಕರಣಗಳು ವರದಿಯಾಗಿರುವ ಅಮೆರಿಕದಲ್ಲಿ ಈ ವರೆಗೆ 6,015,317 ಜನರಿಗೆ ಸೋಂಕು ತಗುಲಿದೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.