BIES ಕೋವಿಡ್ 19 ಕೇರ್ ಕೇಂದ್ರ ಆರಂಭ; ತಕ್ಷಣಕ್ಕೆ 1,536 ಹಾಸಿಗೆಗಳು ಲಭ್ಯ

ಒಟ್ಟು 10,100 ಹಾಸಿಗೆಗಳ ಸಾಮರ್ಥ್ಯದ ಆರೈಕೆ ಕೇಂದ್ರ ಸೋಂಕಿತರ ಆರೈಕೆಗೆ ಸಜ್ಜು

Team Udayavani, Jul 27, 2020, 8:53 PM IST

BIES ಕೋವಿಡ್ 19 ಕೇರ್ ಕೇಂದ್ರ ಆರಂಭ; ತಕ್ಷಣಕ್ಕೆ 1,536 ಹಾಸಿಗೆಗಳು ಲಭ್ಯ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ನಡುವೆ, ಕೋವಿಡ್ 19 ಕಾರಣದಿಂದ ಭವಿಷ್ಯದಲ್ಲಿ ಎದುರಾಗಬಹುದಾದ ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ಸರಕಾರ ಸರ್ವ ಸಜ್ಜಾಗಿದೆ.

ಇದರ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ದೇಶದ ಅತಿದೊಡ್ಡ ಕೋವಿಡ್ ಆರೈಕೆ ಕೇಂದ್ರವನ್ನು ಲೋಕಾರ್ಪಣೆ ಮಾಡಿದ್ದಾರೆ.

ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ (BIES) ಸ್ಥಾಪಿಸಲಾಗಿರುವ 10,100 ಹಾಸಿಗೆಗಳ ಸಾಮರ್ಥ್ಯದ ಆರೈಕೆ ಕೇಂದ್ರವು ನಾಳೆಯಿಂದಲೇ ಬಳಕೆಗೆ ಲಭ್ಯವಾಗಲಿದೆ.

ಮೊದಲ ಹಂತದಲ್ಲಿ 1,536 ಹಾಸಿಗೆಗಳು ಬಳಕೆಗೆ ಲಭ್ಯವಾಗಲಿವೆ. ಕೂಡಲೇ ಈ ಕೇಂದ್ರಕ್ಕೆ ಸೋಂಕಿತರನ್ನು ಸ್ಥಳಾಂತರಿಸಿ ಚಿಕಿತ್ಸೆ ನೀಡಬಹುದಾಗಿದೆ.

ಪಂಚತಾರಾ ಹೋಟೆಲಿನಂಥ ಸೌಲಭ್ಯಗಳನ್ನು ಒಳಗೊಂಡಿರುವ ಈ ಕೋವಿಡ್ ಆರೈಕೆ ಕೇಂದ್ರವನ್ನು ಸೋಮವಾರ ಸೋಂಕಿತರ ಸೇವೆಗೆ ಮುಕ್ತಗೊಳಿಸಿದ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳ ಜೊತೆ, ಕಂದಾಯ ಸಚಿವ ಆರ್. ಅಶೋಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್, ಮೇಯರ್ ಗೌತಮ್ ಕುಮಾರ್, ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಏನೇನಿದೆ ಇಲ್ಲಿ?

ಅತ್ಯಂತ ಸುಸಜ್ಜಿತ ಹಾಗೂ ಅತ್ಯಾಧುನಿಕವಾಗಿ ಯಾವುದೇ ಬೃಹತ್ ಖಾಸಗಿ ಆಸ್ಪತ್ರೆಯನ್ನು ಸರಿಗಟ್ಟುವಂತೆ ನಿರ್ಮಾಣವಾಗಿರುವ ಈ ಆರೈಕೆ ಕೇಂದ್ರದಲ್ಲಿ ಸೋಂಕಿತರಿಗೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಒಟ್ಟು 5,000 ಹಾಸಿಗೆಗಳು ಸಿದ್ಧವಾಗಿದ್ದು, ಈ ಪೈಕಿ 1,536 ಹಾಸಿಗೆಗಳು ಕೂಡಲೇ ಬಳಕೆಗೆ ಲಭ್ಯ ಇವೆ.

ಐದನೇ ಸಂಖ್ಯೆಯ ಹಾಲ್ ನಲ್ಲಿ 24 ವಾರ್ಡುಗಳ ವ್ಯವಸ್ಥೆ ಮಾಡಲಾಗಿದ್ದು, ಒಮ್ಮೆಲೆ 350 ಜನರು ಒಟ್ಟಿಗೆ ಊಟ ಮಾಡಬಹುದು. ಇದರ ಜತೆಗೆ, ಮನರಂಜನಾ ಕೊಠಡಿ ಮಾಡಲಾಗಿದ್ದು ಟಿವಿ, ಕುಳಿತುಕೊಳ್ಳಲು ಆಸನದ ವ್ಯವಸ್ಥೆ, ಸೋಫಾ, ಕುರ್ಚಿಗಳು ಹಾಗೂ ಫ್ಯಾನ್ ಸೌಕರ್ಯವನ್ನು ಮಾಡಲಾಗಿದೆ. ಹಾಗೆಯೇ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಇದೆ. ಸ್ನಾನಕ್ಕೆ, ಮೂತ್ರ ವಿಸರ್ಜನೆಗೆ, ಕೈ ತೊಳೆದುಕೊಳ್ಳಲು ಪ್ರತ್ಯೇಕ ವ್ಯವಸ್ಥೆ ಇದೆ.

ಇವುಗಳೊಂದಿಗೆ ಇಡೀ ಕೇಂದ್ರದಲ್ಲಿ ಯಾವುದೇ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಲು ನಿಯಂತ್ರಣ ಕೊಠಡಿಯನ್ನೂ ತೆರೆಯಲಾಗಿದೆ. ಕೋವಿಡ್ ಪಾಸಿಟೀವ್ ಬಂದಿರುವ ರೋಗಿಗಳು ನೋಂದಣಿ ಅಥವಾ ದಾಖಲು ಮಾಡಿಕೊಳ್ಳಲು ಪ್ರತ್ಯೇಕ ಕೊಠಡಿ ಮಾಡಲಾಗಿದೆ.

ಜತೆಗೆ, ಇಡೀ ಕೇಂದ್ರವನ್ನು ನಿರ್ವಹಣೆ ಮಾಡಲು ಪ್ರತ್ಯೇಕ ಸಿಬ್ಬಂದಿಯನ್ನು ನೇಮಿಸಲಾಗಿದೆ. ಹೌಸ್ ಕೀಪಿಂಗ್ ಮತ್ತು ಬಟ್ಟೆ ಒಗೆಯಲು ಪ್ರತ್ಯೇಕ ಸಿಬ್ಬಂದಿಯನ್ನು ಇಡಲಾಗಿದೆ. ಇನ್ನು ಸುರಕ್ಷತೆ ಕಾರಣಕ್ಕೆ ಮಾರ್ಷಲ್’ಗಳು ಹಾಗೂ ಕೆ.ಎಸ್.ಆರ್.ಪಿ.ಯ ಒಂದು ತುಕಡಿಯನ್ನು ಮತ್ತು ಅಗ್ನಿಶಾಮಕ ದಳದ ತುಕಡಿಯನ್ನು ಇಲ್ಲಿ ನಿಯೋಜನೆ ಮಾಡಲಾಗಿದೆ.

ದಿನದ 24 ಗಂಟೆ ವಿದ್ಯುತ್ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈ ಕೋವಿಡ್ 19 ಕೇಂದ್ರಕ್ಕೆ ಪ್ರತ್ಯೇಕ ವಿದ್ಯುತ್ ಲೈನ್ ಎಳೆಯಲಾಗಿದೆ. ಇನ್ನು ಸರಕಾರ ಈಗಾಗಲೇ ನಿಗದಿ ಮಾಡಿರುವ ಫುಡ್ ಮೆನು ಪ್ರಕಾರ ಸೋಂಕಿತರಿಗೆ ನಿತ್ಯವೂ ಆಹಾರ ಪೂರೈಕೆ ಮಾಡಲಾಗುವುದು.

ಮಂಚದ ಗುಣಮಟ್ಟ ಪರಿಶೀಲನೆ:

ಕೋವಿಡ್ 19 ಪರಿಕರಗಳ ಗುಣಮಟ್ಟದ ಬಗ್ಗೆ ಕೆಲವರು ತಕರಾರು ತೆಗೆದಿರುವ ಹಿನ್ನೆಲೆಯಲ್ಲಿ ಡಿಸಿಎಂ ಅವರು, 170 ಕೆಜಿ ತೂಕದ ವ್ಯಕ್ತಿಯೊಬ್ಬರನ್ನು ಹಾಸಿಗೆಯ ಮೇಲೆ ಮಲಗಿಸಿ ಮಂಚದ ಸಾಮರ್ಥ್ಯವನ್ನು ಪರಿಶೀಲನೆ ನಡೆಸಿದರು. ಇದರ ಜತೆಗೆ, ಎಲ್ಲ ಸಚಿವರು, ಅಧಿಕಾರಿಗಳ ಜತೆ ಇಡೀ ಕೇಂದ್ರವನ್ನು ಕೂಲಂಕಷವಾಗಿ ಪರಿಶೀಲನೆ ಮಾಡಿದರಲ್ಲದೆ, ಗುಣಮಟ್ಟದ ವಿಚಾರದಲ್ಲಿ ರಾಜಿ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಈ ಕೇಂದ್ರದಲ್ಲಿ ರೋಗಿಗಳು ದಾಖಲಾಗುತ್ತಿದ್ದಂತೆ ಹಾಸಿಗೆಗಳ ಪ್ರಮಾಣವನ್ನು ಹೆಚ್ಚಿಸಲಾಗುವುದು. ಎ ಸಿಂಪ್ಟೆಮಿಕ್ ರೋಗಿಗಳು ಇಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.


ಮತ್ತಷ್ಟು ಕಡೆ ಕೋವಿಡ್ ಕೇಂದ್ರಗಳು:
ಈಗ ಬೆಂಗಳೂರು ನಗರದಲ್ಲಿ 9 ಕಡೆ ಕೋವಿಡ್ 19 ಆರೈಕೆ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳ ಜತೆಗೆ ಬಿ.ಐ.ಎಸ್.ಸಿ. ಕೇಂದ್ರವು ಸೇರ್ಪಡೆಯಾಗಿದೆ. ಇದರ ಜತೆಗೆ ಅರಮನೆ ಮೈದಾನ, ಅಂತಾರಾಷ್ಟ್ರೀಯ ಕನ್ವೆಂಷನ್ ಸೆಂಟರ್, ಪೊಲೀಸ್ ಕ್ವಾಟ್ರಸ್ ಮುಂತದ ಕಡೆ ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆಯಲಾಗುತ್ತಿದೆ.

ಹಾಗೆಯೇ ಕೆಲ ಖಾಸಗಿ ಅಪಾರ್ಟ್ ಮೆಂಟ್ ಗಳಲ್ಲಿ ಕೂಡ ಇಂತಹ ಕೇಂದ್ರಗಳನ್ನು ಆರಂಭಿಸಲಾಗುವುದು. ಅಗತ್ಯಕ್ಕೆ ತಕ್ಕಂತೆ ಸರಕಾರ ವ್ಯವಸ್ಥೆ ಮಾಡುತ್ತ ಹೋಗಲಿದೆ. ಇದರ ಜತೆಯಲ್ಲಿಯೇ ಹೋಂ ಕೇರ್ ಬಗ್ಗೆಯೂ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅಶ್ವತ್ಥನಾರಾಯಣ ಅವರು ಮಾಹಿತಿ ನೀಡಿದರು.

ಫಲಿತಾಂಶ ತಡವಾಗಲ್ಲ:
ಇನ್ನು ಮೇಲೆ ಸೋಂಕಿತರ ತಪಾಸಣೆ ಅಥವಾ ಸ್ಯಾಂಪಲ್ ಪರೀಕ್ಷೆ ನಂತರ ರಿಸಲ್ಟ್ ತಡವಾಗಲ್ಲ. ಸ್ಯಾಂಪಲ್ ಕೊಟ್ಟ ನಂತರ ಅರ್ಧ ಗಂಟೆಯಲ್ಲೇ ರಿಸಲ್ಟ್ ಸಿಗಲಿದೆ. ಇದಕ್ಕೆ ಬೇಕಾದ ಎಲ್ಲ ವ್ಯವಸ್ಥೆಯನ್ನು ಮಾಡಲಾಗಿದೆ. ರಾಪಿಡ್ ಟೆಸ್ಟಿಂಗ್ ಕಿಟ್ ಗಳನ್ನೂ ಸಹ ಅಗತ್ಯವಿದ್ದಷ್ಟು ಒದಗಿಸಲಾಗಿದೆ. ಜನರು ಈ ಬಗ್ಗೆ ಆತಂಕಪಡುವುದು ಬೇಡ ಎಂದು ಡಿಸಿಎಂ ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.