ಶನಿವಾರ ಕೇಂದ್ರದಿಂದ ಮತ್ತಷ್ಟು ವಿನಾಯ್ತಿ: ಯಾವುದಕ್ಕೆ ಅನುಮತಿ, ಮದ್ಯದ ಅಂಗಡಿ ತೆರೆಯಬಹುದೇ?

ಏ. 25ರಿಂದ ಇನ್ನಷ್ಟು ವಿನಾಯ್ತಿಯನ್ನು ಘೋಷಿಸಿದ್ದು ಲಾಕ್ ಡೌನ್ ನಡುವೆಯೂ ಅಧಿಕೃತ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಿದೆ

Team Udayavani, Apr 25, 2020, 9:16 AM IST

ಶನಿವಾರ ಕೇಂದ್ರದಿಂದ ಮತ್ತಷ್ಟು ವಿನಾಯ್ತಿ: ಯಾವುದಕ್ಕೆ ಅನುಮತಿ, ಮದ್ಯದ ಅಂಗಡಿ ತೆರೆಯಬಹುದೇ?

Representative Image

ನವದೆಹಲಿ:ಕೋವಿಡ್ 19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ ಡೌನ್ ಮುಂದುವರಿದಿದ್ದು ಒಂದು ತಿಂಗಳು ಕಳೆದಿದೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರು ಏ.20ರಿಂದ ಕೆಲವು ಕ್ಷೇತ್ರಗಳಿಗೆ ಲಾಕ್ ಡೌನ್ ನ ವೇಳೆ ಕೆಲವು ವಿನಾಯ್ತಿ ಘೋಷಿಸಿದ್ದರು. ಇದೀಗ ಶುಕ್ರವಾರ ರಾತ್ರಿ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ವಿನಾಯ್ತಿಯ ಹೊಸ ಆದೇಶವನ್ನು ಹೊರಡಿಸಿದೆ.

ಏಪ್ರಿಲ್ 25ರಿಂದ ಇನ್ನಷ್ಟು ವಿನಾಯ್ತಿಯನ್ನು ಘೋಷಿಸಿದ್ದು ಲಾಕ್ ಡೌನ್ ನಡುವೆಯೂ ಅಧಿಕೃತ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಿದೆ. ಪುರಸಭೆ ವ್ಯಾಪ್ತಿಯೊಳಗಿನ ಹಾಗೂ ಪುರಸಭೆ ವ್ಯಾಪ್ತಿ ಹೊರಗಿನ ಸ್ಥಳೀಯ ರೆಸಿಡೆನ್ಶಿಯಲ್ ಕಾಂಪ್ಲೆಕ್ಸ್ ಗಳನ್ನು ತೆರೆಯಲು ಅವಕಾಶ ನೀಡಿದೆ ಎಂದು ವರದಿ ತಿಳಿಸಿದೆ. ಆದರೆ ಪುರಸಭೆ ವ್ಯಾಪ್ತಿಯೊಳಗಿನ ಮಾರುಕಟ್ಟೆ ಕಾಂಪ್ಲೆಕ್ಸ್ ತೆರೆಯಲು ಅನುಮತಿ ಇಲ್ಲ ಎಂದು ಸ್ಪಷ್ಟಪಡಿಸಿದೆ.

ಹಾಟ್ ಸ್ಪಾಟ್ ಹಾಗೂ ನಿಯಂತ್ರಿತ ಪ್ರದೇಶಗಳಲ್ಲಿನ ಮಾರುಕಟ್ಟೆ ಪ್ರದೇಶದಲ್ಲಿರುವ ಅಂಗಡಿಗಳು, ಮಲ್ಟಿ ಬ್ರಾಂಡ್ ಮತ್ತು ಸಿಂಗಲ್ ಬ್ರಾಂಡ್ ಮಾಲ್ ಗಳನ್ನು ತೆರೆಯಲು ಅವಕಾಶ ಇಲ್ಲ.

ಇಂದಿನಿಂದ ಯಾವುದೆಲ್ಲಾ ತೆರೆಯಲಿದೆ?
1)ಶಾಪ್ಸ್ ಆ್ಯಂಡ್ ಎಸ್ಟಾಬ್ಲಿಷ್ ಮೆಂಟ್ ಕಾಯ್ದೆಯಡಿ ದಾಖಲಾದ ಎಲ್ಲಾ ಅಂಗಡಿಗಳು. ರೆಸಿಡೆನ್ಶಿಯಲ್ ಕಾಂಪ್ಲೆಕ್ಸ್ ಅಂಗಡಿಗಳು, ಮಾರ್ಕೆಟ್ ಕಾಂಪ್ಲೆಕ್ಸ್ ತೆರೆಯಲು ಅವಕಾಶ
2)ಪುರಸಭೆ ವ್ಯಾಪ್ತಿಯ ಸ್ಥಳೀಯ ಅಂಗಡಿಗಳು, ಸಣ್ಣ ಅಂಗಡಿ ತೆರೆಯಲು ಅವಕಾಶ
3)ಸಾಮಾಜಿಕ ಅಂತರ ಕಾಯ್ದುಕೊಂಡು, ಮುಖಕ್ಕೆ ಮಾಸ್ಕ್ ಹಾಕಿಕೊಂಡು ಶೇ.50ರಷ್ಟು ಸಿಬ್ಬಂದಿಗಳೊಂದಿಗೆ ಪುರಸಭೆಯ ವ್ಯಾಪ್ತಿಯ ಪ್ರದೇಶದಲ್ಲಿ ಕಾರ್ಯನಿರ್ವಹಿಸಬಹುದು.
4)ಇಂದಿನಿಂದ ಸ್ಥಳೀಯ ಸೆಲೂನ್ ಮತ್ತು ಪಾರ್ಲರ್ ಗಳು ತೆರೆಯಬಹುದಾಗಿದೆ
5)ಗ್ರಾಮೀಣ ಮತ್ತು ಅರೆ ಗ್ರಾಮೀಣ ಪ್ರದೇಶದಲ್ಲಿ ಎಲ್ಲಾ ಮಾರ್ಕೆಟ್ ಅನ್ನು ತೆರೆಯಬಹುದಾಗಿದೆ
6)ನಗರ ಪ್ರದೇಶದಲ್ಲಿ ತುರ್ತುಯೇತರ ವಸ್ತು ಮತ್ತು ಸೇವೆಗಳಿಗೆ ಅವಕಾಶ ನೀಡಲಾಗಿದೆ.
7)ಗ್ರಾಮೀಣ ಪ್ರದೇಶದಲ್ಲಿನ ತುರ್ತು ಅಗತ್ಯವಲ್ಲದ ಸೇವೆಯ ಎಲ್ಲಾ ವಸ್ತುಗಳನ್ನು ಮಾರಾಟ ಮಾಡಲು ಅವಕಾಶವಿದೆ

ಯಾವುದು ಪುನಃ ಬಂದ್:
1)ಪುರಸಭೆ ವ್ಯಾಪ್ತಿಯ ಮಲ್ಟಿ ಬ್ರಾಂಡ್ ಅಂಗಡಿಗಳು, ಸಿಂಗಲ್ ಬ್ರಾಂಡ್ ಮಾಲ್ಸ್ ಗಳು ತೆರೆಯುವಂತಿಲ್ಲ
2)ಮಾರ್ಕೆಟ್ ಕಾಂಪ್ಲೆಕ್ಸ್ ನ ಅಂಗಡಿ, ಮಲ್ಟಿ ಬ್ರಾಂಡ್, ಸಿಂಗಲ್ ಬ್ರಾಂಡ್ ಮಾಲ್ ಗಳನ್ನು ತೆರೆಯುವಂತಿಲ್ಲ
3)ಸಿನಿಮಾ ಹಾಲ್, ಮೇಲ್ಸ್, ಶಾಪಿಂಗ್ ಕಾಂಪ್ಲೆಕ್ಸ್, ಜಿಮ್ನೇಶಿಯಂ, ಸ್ಫೋರ್ಟ್ ಕಾಂಪ್ಲೆಕ್ಸ್, ಸ್ವಿಮ್ಮಿಂಗ್ ಪೂಲ್ಸ್, ಮಕ್ಕಳ ಪಾರ್ಕ್, ಬಾರ್ ಮತ್ತು ಅಡಿಟೋರಿಯಂ, ಅಸೆಂಬ್ಲಿ ಹಾಲ್ ಗಳನ್ನು ತೆರೆಯುವಂತಿಲ್ಲ.
4)ದೊಡ್ಡ ಮಳಿಗೆ, ಮಾರುಕಟ್ಟೆ ಸ್ಥಳಗಳ ಬಂದ್ ಮುಂದುವರಿಯಲಿದೆ
5)ನೆಹರು ಸ್ಥಳ, ಲಾಜ್ ಪತ್ ನಗರದಂತಹ ಸ್ಥಳಗಳಲ್ಲಿನ ಮಾರ್ಕೆಟ್ ಕಾಂಪ್ಲೆಕ್ಸ್ ಗಳು ತೆರೆಯುವಂತಿಲ್ಲ

ವಿನಾಯ್ತಿ ಇವುಗಳಿಗೆ ಅನ್ವಯವಾಗುವುದಿಲ್ಲ:
ಗೃಹ ಸಚಿವಾಲಯ ಸ್ಪಷ್ಟಪಡಿಸಿರುವ ಪ್ರಕಾರ, ಮದ್ಯದ ಅಂಗಡಿಗಳನ್ನು ತೆರೆಯುವಂತಿಲ್ಲ. ಆಲ್ಕೋಹಾಲ್ ಪ್ರತ್ಯೇಕ ಕಾಯ್ದೆಯಡಿ ಬರಲಿದ್ದು, ಇದು ಶಾಪ್ಸ್ ಆ್ಯಂಡ್ ಎಸ್ಟಾಬ್ಲಿಷ್ ಮೆಂಟ್ ಕಾಯ್ದೆಯಡಿ ಬರುವುದಿಲ್ಲ. ಹೀಗಾಗಿ ಲಾಕ್ ಡೌನ್ ವೇಳೆ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ ಎಂದು ಹೇಳಿದೆ.

ಟಾಪ್ ನ್ಯೂಸ್

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.