Covid; ಮೇ 7ರವರೆಗೆ ಲಾಕ್ ಡೌನ್ ಮುಂದುವರಿಕೆ, ಫುಡ್ ಡೆಲಿವರಿ Appಗೆ ಅವಕಾಶ ಇಲ್ಲ: ತೆಲಂಗಾಣ
ತೆಲಂಗಾಣದಲ್ಲಿ ಮಾರಣಾಂತಿಕ ಕೋವಿಡ್ ವೈರಸ್ ಸೋಂಕಿತರ ಸಂಖ್ಯೆ 858ಕ್ಕೆ ತಲುಪಿದೆ
Team Udayavani, Apr 20, 2020, 10:01 AM IST
Representative Image
ಹೈದರಾಬಾದ್:ಕೋವಿಡ್ 19 ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಅನ್ನು ರಾಜ್ಯದಲ್ಲಿ ಮೇ 7ರವರೆಗೆ ವಿಸ್ತರಿಸಲಾಗಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಘೋಷಿಸಿದ್ದು, ಫುಡ್ ಡೆಲಿವರಿ ಮೊಬೈಲ್ ಆ್ಯಪ್ಲಿಕೇಷನ್ ಗೆ ಸೋಮವಾರದಿಂದ ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಕೋವಿಡ್ 19 ತಡೆಗಟ್ಟಲು ರಾಜ್ಯ ಸರ್ಕಾರಗಳ ಮನವಿ ಮೇರೆಗೆ ಮೇ 3ರವರೆಗೆ ದೇಶಾದ್ಯಂತ ಲಾಕ್ ಡೌನ್ ಮುಂದುವರಿಯಲಿದೆ ಎಂದು ಘೋಷಿಸಿದ್ದರು. ಇದೀಗ ರಾಜ್ಯಗಳಲ್ಲಿನ ಪರಿಸ್ಥಿತಿ ಅವಲೋಕನದ ನಂತರ ಲಾಕ್ ಡೌನ್ ಮುಂದುವರಿಸುವ ನಿರ್ಧಾರ ಸಂಪುಟದಲ್ಲಿ ಕೈಗೊಳ್ಳಲಾಗಿದೆ ಎಂದು ಕೆಸಿಆರ್ ವಿವರಿಸಿದ್ದಾರೆ.
ತೆಲಂಗಾಣದಲ್ಲಿ ಮಾರಣಾಂತಿಕ ಕೋವಿಡ್ ವೈರಸ್ ಸೋಂಕಿತರ ಸಂಖ್ಯೆ 858ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 21ಕ್ಕೆ ಏರಿದೆ. ರಾಜ್ಯದ ವಾರಂಗಲ್, ಯಾದ್ರಾದ್ರಿ ಭದ್ರಾದ್ರಿ, ಸಿದ್ದಿಪೇಟ್, ವಾನಪಾರ್ಥೈ ಕೋವಿಡ್ ಮುಕ್ತ ಜಿಲ್ಲೆಗಳಾಗಿದೆ ಎಂದು ತಿಳಿಸಿದ್ದಾರೆ.
ಕೋವಿಡ್ 19 ವೈರಸ್ ಪರೀಕ್ಷಾ ವಿಚಾರದಲ್ಲಿಯೂ ತೆಲಂಗಾಣ ರಾಜ್ಯ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯ ಸರ್ಕಾರ 12ಕೆಜಿ ಅಕ್ಕಿ, 87 ಲಕ್ಷ ಪಡಿತರ ಚೀಟಿ ಹೊಂದಿರುವವರಿಗೆ 1,500 ರೂಪಾಯಿ ನಗದು ನೀಡಲಾಗಿದೆ. ತೆಲಂಗಾಣದಲ್ಲಿರುವ ವಲಸೆ ಕಾರ್ಮಿಕ ಕುಟುಂಬಗಳಿಗೆ 1500 ರೂಪಾಯಿ ನಗದು, 12ಕೆಜಿ ಅಕ್ಕಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು