ರಾಜ್ಯದಲ್ಲಿ ಲಾಕ್ ಡೌನ್ ಕೊಂಚ ಸಡಿಲಿಕೆ ; ಯಾವುದಕ್ಕೆಲ್ಲಾ ಇದೆ ಅನುಮತಿ ಇಲ್ಲಿದೆ ಮಾಹಿತಿ

ಕೃಷಿ, ನಿರ್ಮಾಣ ಕಾರ್ಯಗಳಿಗೆ ಷರತ್ತುಬದ್ಧ ಅನುಮತಿ ; ಸದ್ಯಕ್ಕಿಲ್ಲ ಮದ್ಯ ಮಾರಾಟ, ಎಲೆಕ್ಟ್ರಿಷಿಯನ್, ಪ್ಲಂಬರ್ ಕೆಲಸಗಳಿಗೂ ಅನುಮತಿ

Team Udayavani, Apr 22, 2020, 4:33 PM IST

ರಾಜ್ಯದಲ್ಲಿ ಲಾಕ್ ಡೌನ್ ಕೊಂಚ ಸಡಿಲಿಕೆ ; ಯಾವುದಕ್ಕೆಲ್ಲಾ ಇದೆ ಅನುಮತಿ ಇಲ್ಲಿದೆ ಮಾಹಿತಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಕೋವಿಡ್ ಮಹಾಮಾರಿ ಸಾಂಕ್ರಾಮಿಕಗೊಳ್ಳುವುದನ್ನು ತಪ್ಪಿಸುವ ಸಲುವಾಗಿ ದೇಶಾದ್ಯಂತ ಮಾರ್ಚ್ 25ರಿಂದ ಜಾರಿಗೊಂಡಿರುವ ಲಾಕ್ ಡೌನ್ ಇದೀಗ ಎರಡನೇ ಸುತ್ತಿಗೆ ಪ್ರವೇಶಿಸಿದೆ. ಎಪ್ರಿಲ್ 14ರಂದು ಮುಕ್ತಾಯಗೊಳ್ಳಬೇಕಿದ್ದ ಲಾಕ್ ಡೌನ್ ಅನ್ನು ಕೇಂದ್ರ ಸರಕಾರವು ಮತ್ತೆ ಮೇ 3ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.

ಈ ನಡುವೆ ಸ್ಥಳೀಯ ಆರ್ಥಿಕತೆಗೆ ಪುನಶ್ಚೇತನ ನೀಡುವ ಸಲುವಾಗಿ ಕೆಲವೊಂದು ಅವಶ್ಯ ಚಟುವಟಿಕೆಗಳನ್ನು ಈ ಲಾಕ್ ಡೌನ್ ಸಂದರ್ಭದಲ್ಲಿ ನಡೆಸಲು ಷರತ್ತುಬದ್ಧ ಅನುಮತಿ ಲಭಿಸಿತ್ತು.

ಇದೀಗ ರಾಜ್ಯ ಸರಕಾರವು ಲಾಕ್ ಡೌನ್ ನಿಯಮಗಳಲ್ಲಿ ಒಂದಷ್ಟು ಸಡಿಲಿಕೆಗಳನ್ನು ಮಾಡಿ ಇಂದು ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಆದರೆ ಈ ಮಾರ್ಗಸೂಚಿ ಸೋಂಕು ಪ್ರಕರಣಗಳು ಅಧಿಕವಾಗಿರುವ ಕಂಟೈನ್ ಮೆಂಟ್ ಪ್ರದೇಶಗಳಿಗೆ ಅನ್ವಯಿಸುವುದಿಲ್ಲ.

ಇಂದು ಮಧ್ಯರಾತ್ರಿಯಿಂದಲೇ ಈ ಪರಿಷ್ಕೃತ ಮಾರ್ಗಸೂಚಿ ಜಾರಿಗೆ ಬರಲಿದೆ.

ಲಾರಿ ರಿಪೇರಿ ಅಂಗಡಿ, ಹೆದ್ದಾರಿ ಡಾಬಾಗಳು, ಕೊರಿಯರ್ ಸೇವೆ, ಎಲೆಕ್ಟ್ರಿಷಿಯನ್ ಸೇವೆಗಳು, ಪ್ಲಂಬರ್ ಗಳು, ಬಡಗಿ, ಮೋಟರ್ ರಿಪೇರಿ, ಆಹಾರ ಸಂಸ್ಕರಣಾ ಘಟಕಗಳು, ಪ್ಯಾಕೇಜಿಂಗ್ ಘಟಕಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.

ಇದರೊಂದಿಗೆ ಗ್ರಾಮೀಣ ಭಾಗದಲ್ಲಿ ರಸ್ತೆ, ಕಟ್ಟಡ ನಿರ್ಮಾಣ ಕಾರ್ಯಗಳಿಗೆ ಷರತ್ತುಬದ್ಧ ಅನುಮತಿ ಇದೆ. ಅಗತ್ಯ ವಸ್ತುಗಳ ಆನ್ ಲೈನ್ ಡೆಲಿವರಿ ಮತ್ತು ಎ.ಪಿ.ಎಂ.ಸಿ. ಮಾರುಕಟ್ಟೆಗಳಲ್ಲಿ ವ್ಯವಹಾರಕ್ಕೆ ಅನುಮತಿಯನ್ನು ನೀಡಲಾಗಿದೆ.

ಮುಂಗಾರು ಪೂರ್ವದ ಕೃಷಿ ಚಟುವಟಿಕೆಗಳು ಪ್ರಾರಂಭಗೊಂಡಿರುವುದರಿಂದ ರಸಗೊಬ್ಬರ, ಬೀಜ ಹಾಗೂ ಔಷಧಿ ಮಾರಾಟಕ್ಕೆ ಅನುಮತಿಯನ್ನು ನೀಡಲಾಗಿದೆ.

ಆದರೆ ಮೇ 3ರವರೆಗೆ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅನುಮತಿ ನೀಡದಿರಲು ಸರಕಾರ ತೀರ್ಮಾನಿಸಿದೆ. ಬಸ್ ಸಂಚಾರ, ರೈಲು ಸಂಚಾರ, ಮೆಟ್ರೋ ಹಾಗೂ ವಿಮಾನ ಸಂಚಾರಕ್ಕೆ ಅನುಮತಿ ನೀಡಲಾಗಿಲ್ಲ. ಆಟೋ, ಕ್ಯಾಬ್ ಗಳ ಓಡಾಟ ಹಾಗೂ ಚಿತ್ರಮಂದಿರಗಳ ತೆರೆಯುವಿಕೆಗೂ ಅನುಮತಿ ನೀಡಲಾಗಿಲ್ಲ. ಕೆ.ಎಸ್.ಆರ್.ಟಿ.ಸಿ. ಮತ್ತು ಬಿ.ಎಂ.ಟಿ.ಸಿ. ಬಸ್ಸುಗಳು ಸದ್ಯಕ್ಕೆ ರಸ್ತೆಗೆ ಇಳಿಯುವುದಿಲ್ಲ.

ಧಾರ್ಮಿಕ ಸಭೆ-ಸಮಾರಂಭಗಳು, ಜನಸಂದಣಿ ಸೇರಲು ನಿರ್ಬಂಧವಿದೆ. ಕೃಷಿ ಹಾಗೂ ಮೀನಗಾರಿಕಾ ವಲಯಕ್ಕೆ ಸಂಪೂರ್ಣ ರಿಲೀಫ್ ನೀಡಲಾಗಿದೆ. ಇನ್ನು ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಸಾಮಾಗ್ರಿಗಳ ಸಾಗಾಟಕ್ಕೂ ಅನುಮತಿ ನೀಡಲಾಗಿದೆ.

ಐಟಿ ಬಿಟಿ ವಲಯಕ್ಕೆ ಸದ್ಯಕ್ಕೆ ಯಾವುದೇ ರಿಲೀಪ್ ನೀಡದಿರಲು ರಾಜ್ಯ ಸರಕಾರ ತೀರ್ಮಾನಿಸಿದೆ. ಈ ವಲಯಗಳಲ್ಲಿ ಶೇ.33 ರಷ್ಟು ಸಿಬ್ಬಂದಿಗಳ ಕಾರ್ಯನಿರ್ವಹಣೆಗೆ ಅವಕಾಶ ಮಾಡಿಕೊಡಬೇಕೆಂಬ ಕೋರಿಕೆಯನ್ನು ಸರಕಾರ ಮನ್ನಿಸಿಲ್ಲ.

ಹೊಟೇಲುಗಳಲ್ಲಿ ಕುಳಿತು ಆಹಾರ ಸೇವನೆಗೆ ಅವಕಾಶವಿಲ್ಲ. ಆಹಾರ ಪದಾರ್ಥಗಳ ಪಾರ್ಸೆಲ್ ಸೇವೆಗೆ ಮಾತ್ರವೇ ಸದ್ಯಕ್ಕೆ ಅನುಮತಿ ನೀಡಲಾಗಿದೆ. ಶಾಲಾ-ಕಾಲೇಜುಗಳ ಕಾರ್ಯಚಟುವಟಿಕೆಗಳ ಮೆಲಿನ ನಿರ್ಬಂಧವೂ ಸಹ ಮೇ 3ರವರೆಗೆ ಮುಂದುವರಿಯಲಿದೆ. ಹಾಗಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಕುರಿತಾದ ನಿರ್ಧಾರ ಇನ್ನೂ ಡೋಲಾಯಮಾನವಾಗಿದೆ.

ಕೇಬಲ್ ಹಾಗೂ ಡಿಟಿಎಚ್ ಅಪರೆಟರ್ ಗಳು ತಮ್ಮ ಕಾರ್ಯನಿಮಿತ್ತ ಸಂಚಾರ ಮಾಡಲು ಅನುಮತಿ ನೀಡಲಾಗಿದೆ. ಆದರೆ ಈಗಿರುವಂತೆಯೇ ತುರ್ತು ಸೇವೆಗಳಿಗೆ ಪಾಸ್ ಪಡೆದುಕೊಂಡು ಸಂಚರಿಸುವುದು ಕಡ್ಡಾಯವಾಗಿರಲಿದೆ. ಆರೋಗ್ಯ ಮತ್ತು ತುರ್ತು ಸೇವೆಗಳು ಈ ಹಿಂದಿನಂತೆಯೇ ಅಬಾಧಿತವಾಗಿ ಮುಂದುವರಿಯುತ್ತದೆ.

ಇವೆಲ್ಲಾ ಸೇವೆಗಳು ನಾಳೆಯಿಂದ ಲಭ್ಯ

1. ಲಾರಿ ರಿಪೇರಿ ಅಂಗಡಿ, ಡಾಬಾ, ಕೊರಿಯರ್ ಸೇವೆ, ಎಲೆಕ್ಟ್ರಿಷಿಯನ್ ಅಂಗಡಿ.

2. ಪ್ಲಂಬರ್, ಕಾರ್ಪೆಂಟರ್, ಮೋಟರ್ ರಿಪೇರಿ, ಆಹಾರ ಸಂಸ್ಕರಣಾ ಘಟಕಗಳ ಕಾರ್ಯನಿರ್ವಹಣೆಗೆ ಅವಕಾಶ

3. ಪ್ಯಾಕೇಜಿಂಗ್ ಘಟಕಗಳು, ಗ್ರಾಮೀಣ ಭಾಗದಲ್ಲಿ ರಸ್ತೆ ಮತ್ತು ಕಟ್ಟಡ ನಿರ್ಮಾಣ ಕಾರ್ಯಗಳಿಗೆ ಅನುಮತಿ.

4. ಆರೋಗ್ಯ ಕ್ಷೇತ್ರದಲ್ಲಿನ ಎಲ್ಲಾ ಚಟುವಟಿಕೆಗಳೂ ಈ ಹಿಂದಿನಂತೆಯೇ ಕಾರ್ಯನಿರ್ವಹಿಸಲಿವೆ.

5. ಆಸ್ಪತ್ರೆ, ನರ್ಸಿಂಗ್ ಹೋಂಗಳು, ಕ್ಲಿನಿಕ್ ಗಳು ಹಾಗೂ ಟೆಲಿಮೆಡಿಸಿನ್ ಎಂದಿನಂತೇ ಕಾರ್ಯನಿರ್ವಹಿಸಲಿವೆ.

6. ಔಷಧಿ ಅಂಗಡಿಗಳು, ಜನೌಷಧಿ ಕೇಂದ್ರಗಳು ಮತ್ತು ಮೆಡಿಕಲ್ ಲ್ಯಾಬೊರೇಟರಿಗಳ ಕಾರ್ಯನಿರ್ವಹಣೆಗೆ ಅಡ್ಡಿ ಇರುವುದಿಲ್ಲ.

7. ಕೃಷಿ ಸಂಬಂಧಿತ ಚಟುವಟಿಕೆಗಳನ್ನು ಪ್ರಾರಂಭಿಸಲು ಮಾರ್ಗಸೂಚಿ ಜಾರಿ.

8. ಮೀನುಗಾರಿಕೆ ಮತ್ತು ಪ್ಲಾಂಟೇಶನ್ ಗಳಿಗೆ ಸಂಬಂಧಿಸಿದ ಕೆಲಸಕಾರ್ಯಗಳನ್ನು ಪ್ರಾರಂಭಿಸಲು ಅನುಮತಿ.

9. ಮನ್ ನರೇಗಾ ಅಡಿಯಲ್ಲಿ ನೀರಾವರಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಪ್ರಾರಂಭಿಸಲು ಆದ್ಯತೆ ಮೇರೆಗೆ ಅನುಮತಿ.

10. ಗೂಡ್ಸ್ ಮತ್ತು ಕಾರ್ಗೋ ಸಂಚಾರಕ್ಕೆ ಅನುಮತಿ ಲಭಿಸಿದೆ.

11. ಸಿಮೆಂಟ್, ಸ್ಟೀಲ್, ಜಲ್ಲಿ, ಟೈಲ್ಸ್, ಪೇಂಟ್, ಇಟ್ಟಿಗೆ ಹಾಗೂ ಟಾರ್ ಸಾಗಾಟಕ್ಕೆ ಅನುಮತಿ

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.