ಲಾಕ್ ಡೌನ್ ಸ್ಟೋರಿ: ಹಲವು ವರ್ಷಗಳ ಕಾಲ ಕಳೆದು ಹೋಗಿದ್ದ ಮಕ್ಕಳು ಮನೆ ಸೇರುವಂತಾಯ್ತು!

ಸೋಮವಾರ ಬೆಳಗ್ಗೆ ಮನೆಯಲ್ಲಿದ್ದವರಿಗೆ ಅಚ್ಚರಿ, ಸಂತಸ ಎಲ್ಲವೂ ಏಕಕಾಲದಲ್ಲಿ ಆಗಿತ್ತು.

Team Udayavani, May 14, 2020, 8:46 PM IST

ಲಾಕ್ ಡೌನ್ ಸ್ಟೋರಿ: ಹಲವು ವರ್ಷಗಳ ಕಾಲ ಕಳೆದು ಹೋಗಿದ್ದ ಮಕ್ಕಳು ಮನೆ ಸೇರುವಂತಾಯ್ತು!

ಭೋಪಾಲ್:ದೇಶಾದ್ಯಂತ ಕೋವಿಡ್ 19 ತಡೆಗಟ್ಟಲು ಲಾಕ್ ಡೌನ್ ಮುಂದುವರಿದಿದ್ದರೆ, ಮತ್ತೊಂದೆಡೆ ಲಾಕ್ ಡೌನ್ ಚತ್ತೀಸ್ ಗಢ ಮತ್ತು ಮಧ್ಯಪ್ರದೇಶದ ಎರಡು ಕುಟುಂಬಗಳಿಗೆ ಸಂತಸವನ್ನೇ ನೀಡಿದೆ. ಯಾಕೆಂದರೆ ಹಲವು ವರ್ಷಗಳಿಂದ ನಾಪತ್ತೆಯಾಗಿದ್ದ ಮಕ್ಕಳನ್ನು ಮತ್ತೆ ಒಂದಾಗುವಂತೆ ಮಾಡಿದೆ!

ಮಧ್ಯಪ್ರದೇಶದ ಛಾತಾರ್ ಪುರ್ ಜಿಲ್ಲೆಯ ಬುಂದೇಲ್ ಖಾಂಡ್ ಪ್ರದೇಶದ ದೇಲಾರಿ ಗ್ರಾಮದ ಬುಡಕಟ್ಟು ಕುಟುಂಬದ 16 ವರ್ಷದ ಮಗ ಉದಯ್ ಆದಿವಾಸಿಯನ್ನು ಮತ್ತೆ ಒಟ್ಟುಗೂಡಿಸಿದೆ. ಉದಯ್ 2017ರಲ್ಲಿ ನಾಪತ್ತೆಯಾಗಿದ್ದ. ಸ್ಥಳೀಯ ಪೊಲೀಸರು ಅಪಹರಣ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ ಈತ ಸಾವನ್ನಪ್ಪಿರಲಿಲ್ಲ ಎಂಬುದು ಖಚಿತವಾಗಿತ್ತು.

ಉದಯ್ ದಿಲ್ಲಿ ಮತ್ತು ಗುರುಗ್ರಾಮದ ಅಂಗಡಿ, ಹೋಟೆಲುಗಳಲ್ಲಿ ಕೆಲಸ ಮಾಡುತ್ತಿದ್ದ. ಈ ವರ್ಷದ ಹೋಳಿ ಸಂದರ್ಭದಲ್ಲಿ ತಂದೆಗೆ ಕರೆ ಮಾಡಿದ್ದ. ಆದರೆ ತಂದೆ ಕರೆ ಮಾಡಿದ ಮಗನಿಗೆ ನೀನು ತಪ್ಪಾಗಿ ಕರೆ ಮಾಡಿದ್ದೀಯಾ ನನ್ನ ಮಗ ಮೂರು ವರ್ಷದ ಹಿಂದೆಯೇ ಸಾವನ್ನಪ್ಪಿದ್ದ ಎಂದು ತಿಳಿಸಿರುವುದಾಗಿ ಸಬ್ ಡಿವಿಷನಲ್ ಅಧಿಕಾರಿ ಸೀತಾರಾಮ್ ಅಸ್ವಾ ತಿಳಿಸಿದ್ದಾರೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಉದಯ್ ಊರಿಗೆ ಮರಳಲು ನಿರ್ಧರಿಸಿಬಿಟ್ಟಿದ್ದ. ಸೋಮವಾರ ಬೆಳಗ್ಗೆ ಮನೆಯಲ್ಲಿದ್ದವರಿಗೆ ಅಚ್ಚರಿ, ಸಂತಸ ಎಲ್ಲವೂ ಏಕಕಾಲದಲ್ಲಿ ಆಗಿತ್ತು. ಯಾಕೆಂದರೆ ಸತ್ತು ಹೋಗಿದ್ದ ಎಂದು ತಿಳಿದುಕೊಂಡಿದ್ದ ಮಗ ಮನೆಗೆ ಬಂದಿದ್ದ.

ಹತ್ತು ವರ್ಷದಿಂದ ನಾಪತ್ತೆಯಾಗಿದ್ದ ಮಗ ಮನೆ ಸೇರಿದ್ದ!
ಹತ್ತು ವರ್ಷಗಳ ಹಿಂದೆ ಚತ್ತೀಸ್ ಗಢದ ಕೋಬ್ರಾ ಜಿಲ್ಲೆಯ ವಲಸೆ ಕಾರ್ಮಿಕ ಲಕ್ಷ್ಮಿ ದಾಸ್ ಮಾಣಿಕ್ ಪುರಿ ಎಂಬಾತ ನಾಪತ್ತೆಯಾಗಿದ್ದ. 25 ವರ್ಷದ ಈತ ಮಧ್ಯಪ್ರದೇಶದ ಬಾರ್ವಾನಿ ಜಿಲ್ಲೆಯಲ್ಲಿರುವ ವಲಸೆ ಕಾರ್ಮಿಕರ ಶಿಬಿರದಿಂದ ನಾಪತ್ತೆಯಾಗಿದ್ದ ಎಂದು ವರದಿ ತಿಳಿಸಿದೆ.

ಕಳೆದ ತಿಂಗಳು ಲಕ್ಷ್ಮಿ ದಾಸ್ ಮಾಣಿಕ್ ಪುರಿ ಮಹಾರಾಷ್ಟ್ರದಿಂದ ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಿಗೆ ತೆರಳುತ್ತಿದ್ದ ವಲಸೆ ಕಾರ್ಮಿಕರ ಲಾರಿಯಲ್ಲಿ ಹೋಗುತ್ತಿದ್ದ. ಏತನ್ಮಧ್ಯೆ ಮಹಾರಾಷ್ಟ್ರ ಮಧ್ಯಪ್ರದೇಶ ಗಡಿಯಲ್ಲಿ ಬಾರ್ವಾನಿ ಜಿಲ್ಲೆಯ ಅಧಿಕಾರಿಗಳು ಪ್ರಶ್ನಿಸಿದ್ದರು. ಈತ ತನ್ನ ಹೆಸರನ್ನು ಮಾಲ್ಟು ಯುರಾವೊ ಎಂದು ಚಿಕ್ಕ ಪೇಪರ್ ತುಣುಕನ್ನು ನೀಡಿದ್ದ.

ಕೊನೆಗೆ ಚತ್ತೀಸ್ ಗಢದಲ್ಲಿ ಈತನ ಕುಟುಂಬ ಇದೆಯೇ ಎಂಬ ಬಗ್ಗೆ ಅಧಿಕಾರಿಗಳು ಶೋಧ ನಡೆಸಿದ್ದರು. ಅಂತೂ ಎರಡು ವಾರಗಳ ನಂತರ ಚತ್ತೀಸ್ ಗಢದ ಕೋಬ್ರಾ ಜಿಲ್ಲೆಯಲ್ಲಿ ಪತ್ತೆಹಚ್ಚಿದ್ದರು. ತಂದೆ ಇಟ್ವಾರಿ ದಾಸ್ ಅವರಿಗೆ ಮಗನ ಪೋಟೋ ಕಳುಹಿಸಿದಾಗ ಕೂಡಲೇ ಮಗನ ಗುರುತು ಕಂಡುಹಿಡಿದ್ದರು ಎಂದು ವರದಿ ವಿವರಿಸಿದೆ. ಮೇ 9ರಂದು ಬಾರ್ವಾನಿಯಲ್ಲಿರುವ ತನ್ನ ಮನೆಗೆ ತಲುಪಿದ್ದಾನೆ. ಹತ್ತು ವರ್ಷಗಳಿಂದ ನಾಪತ್ತೆಯಾಗಿದ್ದ ಮಗನನ್ನು ಕಂಡು ತಂದೆ, ತಾಯಿ ಹಾಗೂ ಕುಟುಂಬದ ಸದಸ್ಯರು ಆನಂದಬಾಷ್ಪ ಸುರಿಸಿ ಆಲಿಂಗನದೊಂದಿಗೆ ಬರಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.