90 ನಿಮಿಷ ಅವಧಿಯಲ್ಲಿ ಆಕ್ಸಿಜನ್ ಸಿಗದೇ 7 ಸಾವು
Team Udayavani, Jun 1, 2020, 7:39 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮುಂಬಯಿ: ಮುಂಬಯಿಯ ಜೋಗೇಶ್ವರಿ ಆಸ್ಪತ್ರೆಯಲ್ಲಿ 90 ನಿಮಿಷಗಳ ಅವಧಿಯಲ್ಲಿ ಆಕ್ಸಿಜನ್ ಕೊರತೆಯಿಂದ 7 ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ.
ಈ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಶನಿವಾರ ಇಬ್ಬರು ಎಂಬಿಬಿಎಸ್ ಪದವೀಧರರು, ಇಬ್ಬರು ನರ್ಸ್ಗಳು ಕರ್ತವ್ಯದಲ್ಲಿದ್ದರು. ಅನಾರೋಗ್ಯ ಕಾರಣ ಇಬ್ಬರು ಹಿರಿಯ ವೈದ್ಯರು ಗೈರಾಗಿದ್ದರು.
ಈ ವೇಳೆ ಸಮರ್ಪಕವಾಗಿ ಆಕ್ಸಿಜನ್ ಲಭಿಸದ ಕಾರಣ ರೋಗಿಗಳು ಪರದಾಡುತ್ತಿದ್ದರು. ಇದನ್ನು ಗಮನಿಸಿದ ನರ್ಸ್ಗಳು, ಬೇರೆ ವಾರ್ಡ್ನಲ್ಲಿದ್ದ ಹಿರಿಯ ವೈದ್ಯರನ್ನು ಸಂಪರ್ಕಿಸಿದ್ದಾರೆ.
ಕೂಡಲೇ ತಜ್ಞವೈದ್ಯರು, ತಾಂತ್ರಿಕ ಸಿಬಂದಿ ತುರ್ತು ಚಿಕಿತ್ಸಾ ಘಟಕಕ್ಕೆ ಧಾವಿಸಿ, ಆಕ್ಸಿಜನ್ ವ್ಯವಸ್ಥೆಯನ್ನು ಸರಿಪಡಿಸುವಷ್ಟರಲ್ಲಿ 7 ರೋಗಿಗಳು ಮೃತಪಟ್ಟಿದ್ದಾರೆ.
ಈ ಆಸ್ಪತ್ರೆಯಲ್ಲಿ ಕಳೆದ 2 ವಾರಗಳ ಅವಧಿಯಲ್ಲಿ ಸುಮಾರು 20 ಸೋಂಕಿತರು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯ ಅಸಮರ್ಪಕ ವೈದ್ಯಕೀಯ ವ್ಯವಸ್ಥೆ ಕುರಿತು ತನಿಖೆ ನಡೆಸಲಾಗುತ್ತಿದೆ.
ಚೇತರಿಕೆ ಪ್ರಮಾಣ ವೃದ್ಧಿ: ಮಹಾರಾಷ್ಟ್ರದಲ್ಲಿ ಹೊಸ ಡಿಸ್ಚಾರ್ಜ್ ನೀತಿಯಿಂದ ರೋಗಿಗಳ ಚೇತರಿಕೆ ಪ್ರಮಾಣ ಏರಿಕೆಯಾಗಿದೆ. ಶೇ.50ರಷ್ಟು ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಸೋಂಕಿತರ ಪೈಕಿ ಶೇ.83ರಷ್ಟು ಮಂದಿ ರೋಗ ಲಕ್ಷಣ ಇಲ್ಲದವರಾಗಿದ್ದಾರೆ. ಶೇ.16ರಷ್ಟು ಮಂದಿಗೆ ಸೌಮ್ಯ ಸೋಂಕಿನ ಲಕ್ಷಣಗಳು ಕಂಡುಬಂದಿವೆ. ಶೇ.1.5ರಷ್ಟು ರೋಗಿಗಳು ಮಾತ್ರ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!