ವಿದರ್ಭ, ಮರಾಠವಾಡದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ; ಏ.29ರಂದು ಸಂಪುಟ ಸಭೆ
ಒಟ್ಟು ಪ್ರಕರಣಗಳ ಸಂಖ್ಯೆ 42,95,027ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 64,760ಕ್ಕೆ ಹೆಚ್ಚಳವಾಗಿದೆ
Team Udayavani, Apr 27, 2021, 3:16 PM IST
ಮುಂಬಯಿ: ಮುಂಬಯಿ ಮತ್ತು ಥಾಣೆ ಪ್ರದೇಶದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಇಳಿಕೆಯಾಗಿದೆ. ಆದರೆ ವಿದರ್ಭ ಮತ್ತು ಮರಾಠವಾಡಾದಲ್ಲಿ ಸೋಂಕು ಹೆಚ್ಚಳವಾಗುತ್ತಿದೆ ಎಂದು ಮಹಾರಾಷ್ಟ್ರ ಸಮಾಜ ಕಲ್ಯಾಣ ಸಚಿವ ವಿಜಯ್ ವಾಡೆಟ್ಟಿವಾರ್ ತಿಳಿಸಿದ್ದಾರೆ.
ಕೋವಿಡ್ ಸೋಂಕು ನಿಗ್ರಹಿಸುವ ನಿಟ್ಟಿನಲ್ಲಿ ಗುರುವಾರ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ ಎಂದು ವಿಜಯ್ ತಿಳಿಸಿದ್ದಾರೆ. ಏಪ್ರಿಲ್ 29ರ ಮಧ್ಯಾಹ್ನ 12.30ಕ್ಕೆ ಸಭೆ ನಡೆಯಲಿದೆ ಎಂದು ವರದಿ ವಿವರಿಸಿದೆ.
ಈ ಹಿಂದಿನ ಸಭೆಯಲ್ಲಿ ರಾಜ್ಯದ ಜನತೆಗೆ ಉಚಿತವಾಗಿ ಕೋವಿಡ್ ಲಸಿಕೆಯನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಘೋಷಿಸಿದ್ದರು. ಮಹಾರಾಷ್ಟ್ರದಲ್ಲಿ 66,191 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 42,95,027ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 64,760ಕ್ಕೆ ಹೆಚ್ಚಳವಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸರಕಾರ ಏಪ್ರಿಲ್ 15ರಿಂದ ಲಾಕ್ ಡೌನ್ ಮಾದರಿಯ ನಿರ್ಬಂಧಗಳನ್ನು ಜಾರಿಗೊಳಿಸಿತ್ತು. ಏಪ್ರಿಲ್ 21ರಂದು ಮಹಾರಾಷ್ಟ್ರ ಸರಕಾರ ಕಠಿಣ ಮಾರ್ಗಸೂಚಿಯನ್ನು ಜಾರಿಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ