ಸೂರತ್: ವಲಸೆ ಕಾರ್ಮಿಕರು, ಪೊಲೀಸರ ನಡುವೆ ಘರ್ಷಣೆ, ಕಲ್ಲು ತೂರಾಟ: ಅಶ್ರುವಾಯು ಪ್ರಯೋಗ
ಈ ಹಿನ್ನೆಲೆಯಲ್ಲಿ ಸೂರತ್ ಹೊರವಲಯದ ವರೇಲಿ ಪ್ರದೇಶದಲ್ಲಿ ವಲಸೆ ಕಾರ್ಮಿಕರು ಪ್ರತಿಭಟನೆ ನಡೆಸಿದರು.
Team Udayavani, May 4, 2020, 5:42 PM IST
ನವದೆಹಲಿ:ತಮ್ಮನ್ನು ಊರುಗಳಿಗೆ ಕಳುಹಿಸಿ ಎಂದು ಆಗ್ರಹ ವ್ಯಕ್ತಪಡಿಸಿದ ವಲಸೆ ಕಾರ್ಮಿಕರು ಪೊಲೀಸರ ಜತೆ ಘರ್ಷಣೆಗೆ ಇಳಿದ ಘಟನೆ ಸೋಮವಾರ ಸೂರತ್ ನಲ್ಲಿ ನಡೆದಿದೆ. ಸೂರತ್ ನಲ್ಲಿ ವಲಸೆ ಕಾರ್ಮಿಕರು ನಡೆಸುತ್ತಿರುವ ನಾಲ್ಕನೇ ಪ್ರತಿಭಟನೆ ಇದಾಗಿದೆ ಎಂದು ವರದಿ ತಿಳಿಸಿದೆ.
ವಜ್ರ ಹಾಗೂ ಜವಳಿ ಕೈಗಾರಿಕೆಗಳಲ್ಲಿ ಕೆಲಸ ಮಾಡಲು ವಿವಿಧ ರಾಜ್ಯಗಳಿಂದ ಬಂದಿದ್ದ ಸಾವಿರಾರು ವಲಸೆ ಕಾರ್ಮಿಕರು ಇದೀಗ ತಮ್ಮನ್ನು ಊರುಗಳಿಗೆ ಕಳುಹಿಸಿಕೊಡುವಂತೆ ಒತ್ತಾಯಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಸೂರತ್ ಹೊರವಲಯದ ವರೇಲಿ ಪ್ರದೇಶದಲ್ಲಿ ವಲಸೆ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದರು. ಆದರೆ ಆಕ್ರೋಶಿತ ವಲಸೆ ಕಾರ್ಮಿಕರು ಕಲ್ಲುತೂರಾಟ ನಡೆಸಿದ್ದರಿಂದ ಪೊಲೀಸರು ಗುಂಪನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದ ಘಟನೆ ನಡೆಯಿತು ಎಂದು ವರದಿ ವಿವರಿಸಿದೆ.
ಸೂರತ್ ನ ಪಾಲಾನ್ ಪುರ್ ಪಾಟಿಯಾ ಪ್ರದೇಶದಲ್ಲಿಯೂ ವಲಸೆ ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು. ನಮಗೆ ತಿನ್ನಲು, ಊಟೋಪಚಾರಕ್ಕೆ ತುಂಬಾ ತೊಂದರೆಯಾಗುತ್ತಿದ್ದು, ತಮಗೆ ಊರಿಗೆ ತೆರಳಲು ಅಧಿಕಾರಿಗಳು ನೆರವು ನೀಡಬೇಕು ಎಂದು ವಲಸೆ ಕಾರ್ಮಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
MUST WATCH
ಹೊಸ ಸೇರ್ಪಡೆ
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ