ಥರ್ಡ ಅಂಪೈರ್ ರಿಸಲ್ಟ್ ಗಾಗಿ ಕಾಯುತ್ತಿದ್ದೇನೆ: 3ನೇ ಕೋವಿಡ್ ವರದಿ ನಿರೀಕ್ಷೆಯಲ್ಲಿ ಸಿಟಿ ರವಿ
Team Udayavani, Jul 12, 2020, 12:27 PM IST
ಚಿಕ್ಕಮಗಳೂರು: ಸಚಿವ ಸಿಟಿ ರವಿ ಅವರು ಕೋವಿಡ್ ಭೀತಿ ಎದುರಿಸುತ್ತಿದ್ದು, ಇಂದು ಮತ್ತೊಮ್ಮೆ ಗಂಟಲು ದ್ರವ ಮಾದರಿ ಪರೀಕ್ಷೆಗೆ ಒಳಪಟ್ಟಿದ್ದಾರೆ. ಈ ಹಿಂದೆ ನಡೆಸಿದ ಪರೀಕ್ಷೆಯಲ್ಲಿ ಒಮ್ಮೆ ನೆಗೆಟಿವ್ ಮತ್ತು ಒಮ್ಮೆ ಪಾಸಿಟಿವ್ ವರದಿ ಬಂದಿರುವ ಕಾರಣ ಸಚಿವರು ಇಂದು ಮತ್ತೊಮ್ಮೆ ಪರೀಕ್ಷೆಗೆ ಒಳಗಾಗಿದ್ದು, ಫಲಿತಾಂಶವನ್ನು ಎದುರು ನೋಡಿತ್ತಿದ್ದಾರೆ.
ಶನಿವಾರ ವೈದ್ಯಕೀಯ ಸಚಿವ ಕೆ ಸುಧಾಕರ್ ಅವರು ಬೆಂಗಳೂರಿನಲ್ಲಿ ಮಾತನಾಡುತ್ತಾ, ಸಚಿವ ಸಿ ಟಿ ರವಿ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ ಎಂದಿದ್ದರು. ನಂತರ ಈ ಬಗ್ಗೆ ಟ್ವೀಟ್ ಮಾಡಿದ್ದ ಸಿ ಟಿ ರವಿ ಅವರು, ನನಗೆ ಯಾವುದೇ ರೋಗಲಕ್ಷಣಗಳಿಲ್ಲ. ಆರೋಗ್ಯವಾಗಿದ್ದೇನೆ ಎಂದಿದ್ದರು.
ಹೀಗಾಗಿ ಇಂದು ಮಂದೆ ಸಚಿವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದಾರೆ. ಸದ್ಯ ತಮ್ಮ ತೋಟದ ಮನೆಯಲ್ಲಿರುವ ಸಚಿವರು, ಹೋಂ ಕ್ವಾರಂಟೈನ್ ಆಗಿದ್ದಾರೆ. ಇಂದು ಟ್ವೀಟ್ ಮಾಡಿರುವ ಅವರು, ಒಂದು ವಾರದೊಳಗಿನ ಎರಡು ಟೆಸ್ಟ್ ನಲ್ಲಿ ಒಮ್ಮೆ ನೆಗೆಟಿವ್, ಒಮ್ಮೆ ಪಾಸಿಟಿವ್ ಬಂದಿದೆ. ಅದಕ್ಕಾಗಿ ನಾನು ಇಂದು 3ನೇ ಟೆಸ್ಟ್ ಮಾಡಿಸಿದ್ದೇನೆ. ಥರ್ಡ್ ಅಂಪೈರ್ ರಿಸಲ್ಟ್-ಗಾಗಿ ಕಾಯುತ್ತಿದ್ದೇನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ