ಲಸಿಕೆ ತಯಾರಿಕೆಗೆ ಉತ್ಸಾಹ ಯಶಸ್ವಿಯಾಗುವ ಹೊಸ್ತಿಲಲ್ಲಿ ಮಾಡೆರ್ನಾ ಲಸಿಕೆ


Team Udayavani, Aug 28, 2020, 2:20 AM IST

ಲಸಿಕೆ ತಯಾರಿಕೆಗೆ ಉತ್ಸಾಹ ಯಶಸ್ವಿಯಾಗುವ ಹೊಸ್ತಿಲಲ್ಲಿ ಮಾಡೆರ್ನಾ ಲಸಿಕೆ

ಅಗರ್ತಲಾ: ಇಲ್ಲಿನ ರೈಲು ಕಾರ್ಮಿಕರು ಕೋವಿಡ್‌ ನಡುವೆ ಕರ್ತವ್ಯದಲ್ಲಿದ್ದು, ಕೆಲಸದ ನಡುವೆ ವಿಶ್ರಾಂತಿ ಪಡೆಯುತ್ತಿರುವುದು.

ನ್ಯೂಯಾರ್ಕ್‌: ಅಮೆರಿಕದ ಮಾಡೆರ್ನಾ ಇಂಕ್‌ ಜೈವಿಕ ತಂತ್ರಜ್ಞಾನ ಕಂಪೆನಿ ಪ್ರಯೋಗಿಸಿರುವ ಲಸಿಕೆ ಧನಾತ್ಮಕ ಫ‌ಲಿತಾಂಶ ನೀಡುವ ಸಾಧ್ಯತೆ ಇದೆ. ವಯಸ್ಕ ವ್ಯಕ್ತಿಗಳ ಪ್ರತಿರಕ್ಷಣಾ ವ್ಯವಸ್ಥೆಯ ಮೇಲೆ ಇದನ್ನು ಪ್ರಯೋಗಿಸಲಾಗಿದ್ದು, ಸಕರಾತ್ಮಕ ಬೆಳವಣಿಗೆಗಳು ಕಂಡುಬರುತ್ತಿವೆ. ಇದು ಕೋವಿಡ್ ವೈರಸ್‌ ವಿರುದ್ಧದ ಹೋರಾಟದಲ್ಲಿ ಮಹತ್ವದ ಬೆಳವಣಿಗೆ ಎಂದು ಹೇಳಲಾಗಿದೆ.

ಮಾಡೆರ್ನಾದ ಕೊಡೊನಾ ವೈರಸ್‌ ಲಸಿಕೆಯು ತನ್ನ ಮೊದಲ ಹಂತದ ಪ್ರಯೋಗದಲ್ಲಿ,ಪ್ರತಿಕಾಯಗಳ ಉತ್ಪಾದನೆಯಲ್ಲಿ ನಿರಂತರ ಉನ್ನತ ಮಟ್ಟದ ಸ್ಥಿರತೆಯನ್ನು ಸೃಷ್ಟಿಸಿದೆ. ವಯಸ್ಕರಲ್ಲಿ ಈ ಫ‌ಲಿತಾಂಶ ಕಂಡುಬಂದಿದೆ. ಯುವ ವಯಸ್ಕರಿಗಿಂತಲೂ 55 ವರ್ಷಕ್ಕಿಂತ ಹೆಚ್ಚಿನ ವಯಸ್ಕರಲ್ಲಿ ಆಂಟಿಬಾಡಿಗಳ ಉತ್ಪಾದನೆ ಹೆಚ್ಚಾಗಿದೆ ಎಂದು ಅದು ಹೇಳಿದೆ.

ಮಾಡೆರ್ನಾದ ಆರಂಭದ ಹಂತದ ಪ್ರಯೋಗದಲ್ಲಿ ಈ ಫ‌ಲಿತಾಂಶಗಳು ಸಿಕ್ಕಿವೆ. ಹೆಚ್ಚು ವಯಸ್ಸಾದ 20 ಜನರ ಮೇಲಿನ ಲಸಿಕೆ ಪ್ರಯೋಗದ ವಿವರಗಳನ್ನು ಸಹ ಅದು ಒಳಗೊಂಡಿದೆ. ಮಾಡೆರ್ನಾ ಕಂಪೆನಿಯು ಈ ಡೇಟಾಗಳನ್ನು ಅಮೆರಿಕದ ಪ್ರತಿರಕ್ಷಣಾ ವಿಭಾಗದದ ರೋಗ ನಿಯಂತ್ರಣ ಮತ್ತು ತಡೆ ಸಲಹಾ ಸಮಿತಿಗೆ ಬುಧವಾರ ಸಲ್ಲಿಕೆ ಮಾಡಿದೆ.

ಈ ಲಸಿಕೆಯ ಪ್ರಾಯೋಗಿಕ ಬಳಕೆಯ ಡೋಸ್‌ಗಳು ಅಂತಿಮ ಹಂತದ ಪ್ರಯೋಗಕ್ಕೆ ಸಿದ್ಧವಾಗಿವೆ. ವೈರಸ್‌ನಿಂದ ಚೇತರಿಸಿಕೊಳ್ಳುತ್ತಿರುವ ವ್ಯಕ್ತಿಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ಪ್ರತಿರಕ್ಷಣಾ ಮಟ್ಟಕ್ಕಿಂತಲೂ ಈ ಡೋಸ್‌ಗಳು ಅಧಿಕ ಮಟ್ಟದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಉತ್ಪಾದಿಸುತ್ತವೆ ಎಂದಿದೆ. ಅಂತಿಮ ಹಂತದ ಲಸಿಕೆ ಪ್ರಯೋಗದಲ್ಲಿ 100 ಮೈಕ್ರೋಗ್ರಾಮ್‌ ಡೋಸ್‌ಗಳನ್ನು ನೀಡಲಾಗುತ್ತಿದೆ.

ವಯಸ್ಕ ರೋಗಿಗಳಿಗೆ ಹೆಚ್ಚು ಅನುಕೂಲವಾಗುವ ಸಾಧ್ಯತೆ
ಲಸಿಕೆಯಿಂದ ಶೀತ, ಆಯಾಸ, ಜ್ವರ, ತಲೆನೋವು, ಸ್ನಾಯು ನೋವು ಮುಂತಾದ ವಿವಿಧ ಸಣ್ಣಪ್ರಮಾಣದ ಅಡ್ಡಪರಿಣಾಮಗಳು ಉಂಟಾಗಿವೆ. ಆದರೆ ಯಾವುದೇ ಗಂಭೀರ ಸಮಸ್ಯೆ ಉಂಟಾಗಿಲ್ಲ ಎಂದು ಕಂಪೆನಿ ಮಾಹಿತಿ ನೀಡಿದೆ. ಕೋವಿಡ್‌ 19ರಿಂದ ತೀವ್ರವಾಗಿ ಬಳಲುತ್ತಿರುವ ವಯಸ್ಕ ರೋಗಿಗಳು ಚೇತರಿಸಿಕೊಳ್ಳಲು ಅವರ ದೇಹದಲ್ಲಿ ಆಂಟಿಬಾಡಿಗಳ ಪ್ರಮಾಣದಲ್ಲಿ ಹೆಚ್ಚಳ ಅಗತ್ಯವಾಗಿದೆ.

ಟಾಪ್ ನ್ಯೂಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.