ಸಂಕಷ್ಟದಲ್ಲಿ ಮುಂಬಯಿ; ವಾಣಿಜ್ಯ ನಗರಿಗೆ ಸೋಂಕಿನ ಆವಾಸ ಸ್ಥಾನದ ಅಪಖ್ಯಾತಿ


Team Udayavani, May 22, 2020, 2:04 AM IST

ಸಂಕಷ್ಟದಲ್ಲಿ ಮುಂಬಯಿ; ವಾಣಿಜ್ಯ ನಗರಿಗೆ ಸೋಂಕಿನ ಆವಾಸ ಸ್ಥಾನದ ಅಪಖ್ಯಾತಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮುಂಬಯಿ/ಹೊಸದಿಲ್ಲಿ: ಅಪಾಯಕಾರಿ ಬೆಳವಣಿಗೆ ಎಂಬಂತೆ, ದೇಶದ ವಾಣಿಜ್ಯ ನಗರಿ ಎಂದೇ ಹೆಸರಾಗಿರುವ ಮುಂಬಯಿ ಈಗ ದೇಶದ ಕೋವಿಡ್ ಕೇಂದ್ರ ಸ್ಥಾನವಾಗಿ ಮಾರ್ಪಾಡಾಗಿದೆ.

ದೇಶದಲ್ಲೇ ಅತಿ ಹೆಚ್ಚು ಕೋವಿಡ್ ಸೋಂಕಿತರಿರುವ ರಾಜ್ಯ ಎಂಬ ಕುಖ್ಯಾತಿಗೆ ಮಹಾರಾಷ್ಟ್ರ ಪಾತ್ರವಾದರೆ, ಎರಡನೇ ಸ್ಥಾನದಲ್ಲಿರುವ ರಾಜ್ಯವಾದ ತಮಿಳುನಾಡಿಗಿಂತ ಹೆಚ್ಚು ಸೋಂಕಿತರು ವಾಣಿಜ್ಯ ನಗರಿ ಮುಂಬಯಿನಲ್ಲೇ ಇದ್ದಾರೆ.

ಈ ಎರಡು ಹಣೆಪಟ್ಟಿಗಳ ಜೊತೆಗೆ ಮತ್ತೂಂದು ಅಚ್ಚರಿಯ ಸಂಗತಿಯೆಂದರೆ, ಮುಂಬಯಿನ ಧಾರಾವಿಯಲ್ಲಿರುವ ಸೋಂಕಿತರ ಸಂಖ್ಯೆ ಇಡೀ ಕರ್ನಾಟಕ ರಾಜ್ಯದ ಸೋಂಕಿತರ ಸಂಖ್ಯೆಯನ್ನೂ ಮೀರಿದೆ.

ಏಷ್ಯಾ ಖಂಡದ ಎರಡನೇ ಅತಿದೊಡ್ಡ ಕೊಳೆಗೇರಿ ಪ್ರದೇಶ ಎಂದೇ ಹೆಸರಾದ ಧಾರಾವಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಿದೆ.

8.5 ಲಕ್ಷ ಜನರು ವಾಸಿಸುವ ಪ್ರದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 1,400 ಸಮೀಪಿಸಿದ್ದು, ಈ ವಿಚಾರದಲ್ಲಿ ಕರ್ನಾಟಕ (1,246) ಮತ್ತು ಹರ್ಯಾಣ (928)ದಂಥ ರಾಜ್ಯಗಳನ್ನೇ ಧಾರಾವಿ ಮೀರಿಸಿದೆ.

ಅವ್ಯವಸ್ಥೆಯ ಆಗರ: ವರದಿಯೊಂದರ ಪ್ರಕಾರ, ಮುಂಬಯಿನ ಕೊಳೆಗೇರಿ ಜನಸಂಖ್ಯೆ ನಗರದ ಒಟ್ಟು ಜನಸಂಖ್ಯೆಯ ಶೇ.42ರಷ್ಟಿದೆ. ಈ ಪೈಕಿ ಶೇ.57 ರಷ್ಟು ಕುಟುಂಬಗಳು ಒಂದು ಕೊಠಡಿಯಿರುವ ಮನೆಗಳಲ್ಲಿ ವಾಸಿಸುತ್ತವೆ.

ಹೀಗಿರುವಾಗ ಸಾಮಾಜಿಕ ಅಥವಾ ಶಾರೀರಿಕ ಅಂತರ ಕಾಪಾಡಿಕೊಳ್ಳುವುದು ಕನಸಿನ ಮಾತೇ ಸರಿ. ಅಷ್ಟೇ ಅಲ್ಲದೆ, ಕೊಳೆಗೇರಿ ಪ್ರದೇಶಗಳಲ್ಲಿ ಮನೆಗಳು ಒತ್ತೊತ್ತಾಗಿವೆ, ಹಲವು ಮನೆಗಳಿಗೆ ಒಂದೇ ಶೌಚಾಲಯ ವ್ಯವಸ್ಥೆಯಿದೆ.

ಹೀಗೆ ಅವ್ಯವಸ್ಥೆಯ ಆಗರವಾಗಿರುವ ಇಂಥ ಪ್ರದೇಶಗಳಲ್ಲಿ ಸೋಂಕು ಅವ್ಯಾಹತವಾಗಿ ವ್ಯಾಪಿಸುತ್ತಿರುವುದು ಸರಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಮುಂಬಯಿವೊಂದರಲ್ಲೇ 674 ಕಂಟೈನ್‌ಮೆಂಟ್‌ ವಲಯಗಳಿರುವುದು ಪರಿಸ್ಥಿತಿಯ ಗಂಭೀರತೆಗೆ ಕನ್ನಡಿ ಹಿಡಿದಿದೆ.

37 ಸಾವಿರ ದಾಟಿದ ಪ್ರಕರಣ: ಮಹಾರಾಷ್ಟ್ರದಲ್ಲಿ ಬುಧವಾರ ಒಂದೇ ದಿನ 2,217 ಮಂದಿಗೆ ಸೋಂಕು ದೃಢಪಟ್ಟು, ಒಟ್ಟು ಸೋಂಕಿತರ ಸಂಖ್ಯೆ 37 ಸಾವಿರ ದಾಟಿದೆ. ವಾಣಿಜ್ಯ ನಗರಿ ಮುಂಬಯಿವೊಂದರಲ್ಲೇ ಅತೀ ಹೆಚ್ಚು ಅಂದರೆ 22,746 ಮಂದಿಗೆ ಸೋಂಕು ತಗುಲಿದ್ದು, ಇಲ್ಲಿ 800 ಮಂದಿ ಸಾವಿಗೀಡಾಗಿದ್ದಾರೆ.

ಇಡೀ ಮಹಾರಾಷ್ಟ್ರದ ಒಟ್ಟಾರೆ ಪ್ರಕರಣಗಳ ಪೈಕಿ ಶೇ.60ರಷ್ಟು ಪ್ರಕರಣಗಳು ಮುಂಬಯಿನಲ್ಲೇ  ಪತ್ತೆಯಾಗಿದೆ. ಅಲ್ಲದೆ, ಮುಂಬಯಿನಲ್ಲಿ ಮರಣ ಪ್ರಮಾಣವು ಶೇ.3.5 ಆಗಿದ್ದು, ದೇಶದ ಸರಾಸರಿ ಮರಣ ಪ್ರಮಾಣವನ್ನೂ (ಶೇ.3.1) ಇದು ಮೀರಿಸಿದೆ.

ನ್ಯೂಯಾರ್ಕ್‌ ಮಾದರಿ ಹೆಚ್ಚುತ್ತಿದೆ ಸೋಂಕು
ಅಮೆರಿಕದಲ್ಲಿ ನ್ಯೂಯಾರ್ಕ್‌ ನಗರವು ಹೇಗೆ ಸೋಂಕಿನ ಹಾಟ್‌ ಬೆಡ್‌ ಆಗಿ ಪರಿವರ್ತನೆಗೊಂಡಿತೋ, ಭಾರತದ ವಾಣಿಜ್ಯ ನಗರಿ ಮುಂಬಯಿ ಕೂಡ ಅದೇ ಹಾದಿಯಲ್ಲಿ ಸಾಗಿದೆ. ನ್ಯೂಯಾರ್ಕ್‌ ನಗರಕ್ಕೆ ಹೋಲಿಸಿದರೆ ಮುಂಬಯಿನ ಗಾತ್ರ ಅರ್ಧದಷ್ಟಿದೆ. ಆದರೆ, ಜನಸಂಖ್ಯೆ ಮಾತ್ರ ನ್ಯೂಯಾರ್ಕ್‌ ಗಿಂತ ಒಂದೂವರೆ ಪಟ್ಟು ಅಧಿಕವಿದೆ.

1,388 ಪೊಲೀಸರಿಗೆ ಸೋಂಕು, 12 ಸಾವು
ಮಹಾರಾಷ್ಟ್ರದಲ್ಲಿ ಒಟ್ಟಾರೆ 1,388 ಪೊಲೀಸರಿಗೆ ಸೋಂಕು ತಗುಲಿದೆ, 12 ಮಂದಿ ಸಾವಿಗೀಡಾಗಿದ್ದಾರೆ. ಸದ್ಯ 948 ಪೊಲೀಸರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. 428 ಮಂದಿ ಗುಣಮುಖರಾಗಿದ್ದಾರೆ.

ಸಾವಿರಾರು ಪೊಲೀಸರನ್ನೂ ಕ್ವಾರೆಂಟೈನ್‌ನಲ್ಲಿ ಇಡಲಾಗಿದೆ. ಇದರಿಂದ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಆಗಿದೆ, ಹೀಗಾಗಿ ಹೆಚ್ಚಿನ ಪೊಲೀಸ್‌ ಸಿಬ್ಬಂದಿಯನ್ನು ಮಹಾರಾಷ್ಟ್ರಕ್ಕೆ ಕಳಿಸಿಕೊಡಬೇಕೆಂದು ಕೇಂದ್ರಕ್ಕೆ ಮಹಾರಾಷ್ಟ್ರ ಸರಕಾರ ಪತ್ರ ಬರೆದಿದೆ.

ಮುಂಗಾರು ಆಗಮನಕ್ಕೆ ಮುನ್ನ ನಾವು ಪರಿಸ್ಥಿತಿಯನ್ನು ನಿಯಂತ್ರಿಸಬೇಕಿದೆ. ಏಪ್ರಿಲ್ – ಮೇ ತಿಂಗಳ ಪ್ರಕರಣಗಳನ್ನು ನೋಡಿದರೆ ಆತಂಕವಾಗುತ್ತಿದೆ. ಆದರೆ, ಪರಿಸ್ಥಿತಿ ಕೈಮೀರಿ ಹೋಗಲು ನಾನು ಬಿಡುವುದಿಲ್ಲ.
– ಉದ್ಧವ್‌ ಠಾಕ್ರೆ, ಮಹಾರಾಷ್ಟ್ರ ಮುಖ್ಯಮಂತ್ರಿ

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.