
ರಾಜ್ಯದಲ್ಲಿ ಇಂದು 322 ಹೊಸ ಕೋವಿಡ್ ಸೋಂಕು ಪ್ರಕರಣ ಪತ್ತೆ ; 8 ಸೋಂಕಿತರು ಸಾವು
ಉಡುಪಿ 11, ದಕ್ಷಿಣ ಕನ್ನಡ 08 ಮತ್ತು ಉತ್ತರ ಕನ್ನಡ 03 ಹೊಸ ಸೋಂಕು ಪ್ರಕರಣ ಪತ್ತೆ
Team Udayavani, Jun 23, 2020, 6:39 PM IST

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ರಾಜ್ಯದಲ್ಲಿ ಮಂಗಳವಾರವೂ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿದೆ.
ಮಂಗಳವಾರ ಒಟ್ಟಾರೆಯಾಗಿ 322 ಹೊಸ ಕೋವಿಡ್ 19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಸೋಂಕು ಸಂಬಂಧಿತ ಕಾರಣಗಳಿಂದ 8 ಜನರು ಸಾವನ್ನಪ್ಪಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿನ ಕಾಟ ಮಿತಿ ಮೀರಿದ್ದು ರಾಜ್ಯದಲ್ಲಿ ಇಂದು ಪತ್ತೆಯಾಗಿರುವ ಒಟ್ಟು 322 ಪ್ರಕರಣಗಳ ಪೈಕಿ 107 ಪ್ರಕರಣಗಳು ಇಲ್ಲಿಯೇ ವರದಿಯಾಗಿದೆ ಮತ್ತು ನಗರದಲ್ಲಿ ಇನ್ನೂ 996 ಕೋವಿಡ್ 19 ಸೋಂಕಿನ ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರು (107) ಹೊರತುಪಡಿಸಿದಂತೆ ಇಂದು ಬಳ್ಳಾರಿ (53), ಬೀದರ್ (22), ಮೈಸೂರು (21), ವಿಜಯಪುರ (16), ಯಾದಗಿರಿ (13) ಹಾಗೂ ಉಡುಪಿ (11) ಜಿಲ್ಲೆಗಳಲ್ಲಿ ಅತೀ ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದಾರೆ.
ಇದನ್ನೂ ಓದಿ: ಮಂಗಳೂರಿನ ಮನೆ ಮನೆಗೆ ಮೀನು ಮಾರುವ ವ್ಯಾಪಾರಿಗೆ ಕೋವಿಡ್ -19 ಸೋಂಕು ದೃಢ
ರಾಜ್ಯದ ವಿವಿಧ ಜಿಲ್ಲೆಗಳ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ ಇಂದು 274 ಜನ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಈ ಮೂಲಕ ಇದುವರೆಗೆ ರಾಜ್ಯದಲ್ಲಿ 6004 ಕೋವಿಡ್ 19 ಸೋಂಕಿತರು ಗುಣಮುಖರಾದಂತಾಗಿದೆ.
ಇದೀಗ ರಾಜ್ಯದಲ್ಲಿ ಒಟ್ಟು 3563 ಸಕ್ರಿಯ ಕೋವಿಡ್ 19 ಸೋಂಕಿನ ಪ್ರಕರಣಗಳಿದ್ದು ಇವರಲ್ಲಿ 120 ಜನ ಐ.ಸಿ.ಯು.ನಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಕೋವಿಡ್ 19 ಸೋಂಕು ಸಂಬಂಧಿತ 150 ಸಾವು ಸಂಭವಿಸಿದ್ದು ಚೇತರಿಕೆ ಪ್ರಮಾಣವೇ ಹೆಚ್ಚಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.
ಇದನ್ನೂ ಓದಿ: ಚಾಮರಾಜನಗರ ಜಿಲ್ಲೆಯಲ್ಲಿ ಇಂದು ನಾಲ್ಕು ಪಾಸಿಟಿವ್ ಪ್ರಕರಣ ದೃಢ
ಇಂದು ರಾಜ್ಯದಲ್ಲಿ ಪತ್ತೆಯಾದ ಹೊಸ ಸೋಂಕಿನ ಪ್ರಕರಣಗಳಲ್ಲಿ 05 ಜನ ಸೋಂಕಿತರು ಅಂತಾರಾಷ್ಟ್ರೀಯ ಪ್ರಯಾಣದ ಹಿನ್ನಲೆಯುಳ್ಳವರಾಗಿದ್ದಾರೆ ಹಾಗೂ 64 ಜನ ಅಂತರ್ ರಾಜ್ಯ ಪ್ರಯಾಣದ ಹಿನ್ನಲೆಯವರಾಗಿದ್ದಾರೆ ಎಂಬ ಮಾಹಿತಿಯನ್ನು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ತನ್ನ ದೈನಂದಿನ ಪ್ರಕಟನೆಯಲ್ಲಿ ತಿಳಿಸಿದೆ.
ಇದುವರೆಗೆ ಕೋವಿಡ್ ಸಂಬಂಧಿತ ಅತೀ ಹೆಚ್ಚು ಸಾವು ಸಂಭವಿಸಿರುವ ಜಿಲ್ಲೆಯು ಬೆಂಗಳೂರು ನಗರವಾಗಿದೆ. ಇಲ್ಲಿ ಕೋವಿಡ್ ಸೋಂಕಿಗೆ ಈಗಾಗಲೇ 73 ಜನರು ಬಲಿಯಾಗಿದ್ದಾರೆ. ಆ ಬಳಿಕದ ಸ್ಥಾನದಲ್ಲಿ ಬೀದರ್ (15), ಕಲಬುರಗಿ (11), ದಾವಣಗೆರೆ (07) ಹಾಗೂ ವಿಜಯಪುರ (07) ಜಿಲ್ಲೆಗಳಿವೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಲಿಜ ಸಮುದಾಯಕ್ಕೆ ಕೂಡಲೇ ಪೂರ್ಣ ಪ್ರಮಾಣದ 2ಎ ಮೀಸಲಾತಿ ಸೌಲಭ್ಯ ಕಲ್ಪಿಸಿ : ಮಾಜಿ ಸಚಿವ ಎಂ.ಆರ್. ಸೀತಾರಾಂ

ಬಿಎಸ್ ವೈ ಮಾರ್ಗದರ್ಶನ, ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ: ನಳಿನ್ ಕಟೀಲ್

ಸುಮಲತಾ ಅವರು ಬಿಜೆಪಿ ಸೇರಿದರೆ ಸಂತೋಷ: ಸಿ.ಟಿ ರವಿ

ಭವಾನಿ ರೇವಣ್ಣಗೆ ಬಿಜೆಪಿ ಟಿಕೆಟ್ ಆಫರ್ ನೀಡಿದ ಸಿ.ಟಿ.ರವಿ!

ಸಿದ್ದರಾಮಯ್ಯನವರಿಗೆ ವರುಣಾದಲ್ಲಿ ಅವಕಾಶ ತೆರೆದ ಬಾಗಿಲು: ಡಾ.ಯತೀಂದ್ರ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಮಹಾದಾಯಿ ವಿವಾದ: “ದುರ್ಯೋಧನನಂತೆ ಕರ್ನಾಟದ ಧೋರಣೆ’

ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ ಪಿಎಫ್ಐ ಹೇಗೆ ಪ್ಲ್ಯಾನ್ ಮಾಡಿತ್ತು?: ಎನ್ಐಎ ವರದಿಯಲ್ಲೇನಿದೆ?

ಮಧುಗಿರಿ: ಲೋಕೋಪಯೋಗಿ ಇಲಾಖೆ ಅಧಿಕಾರಿ ನೇಣಿಗೆ ಶರಣು

ಸೆಲ್ಫಿ ತೆಗೆಯಲು ಪ್ರಯತ್ನಿಸಿದ ಅಭಿಮಾನಿಯ ಮೊಬೈಲ್ ಫೋನ್ ಎಸೆದ ರಣಬೀರ್ ಕಪೂರ್ ವಿಡಿಯೋ ವೈರಲ್!

ಬಿಬಿಸಿ ಡಾಕ್ಯುಮೆಂಟರಿ ಪ್ರದರ್ಶಿಸಲು ಮುಂದಾದ ಯೂನಿರ್ವಸಿಟಿಗಳ ವಿದ್ಯುತ್ ಸರಬರಾಜು ಸ್ಥಗಿತ…