ಕೊಪ್ಪಳದಲ್ಲಿ ಏರುತ್ತಿದೆ ಸೋಂಕಿತರ ಸಂಖ್ಯೆ: ಮತ್ತೆ ಆರು ಜನರಿಗೆ ಸೋಂಕು ದೃಢ
Team Udayavani, Jun 19, 2020, 12:41 PM IST
ಕೊಪ್ಪಳ: ಜಿಲ್ಲೆಯಲ್ಲಿ ನಿಧಾನಗತಿಯಲ್ಲಿ ಕೋವಿಡ್-19 ಸೋಂಕು ಏರಿಕೆಯಾಗುತ್ತಿದೆ. ಶುಕ್ರವಾರ ಮತ್ತೆ ಆರು ಜನರಿಗೆ ಸೋಂಕು ದೃಢಪಡುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 28ಕ್ಕೆ ಏರಿಕೆಯಾದಂತಾಗಿದೆ.
ಜೂನ್ 16ರಂದು ಆಂಧ್ರಪ್ರದೇಶದ ವಿಜಯವಾಡದಿಂದ ಗಂಗಾವತಿ ತಾಲೂಕಿನ ಶ್ರೀರಾಮನಗರಕ್ಕೆ ಬಂದಿದ್ದ 45 ವರ್ಷದ ವ್ಯಕ್ತಿ, 40 ವರ್ಷದ ಮಹಿಳೆ ಮತ್ತು 17 ವರ್ಷದ ಯುವತಿಗೆ ಕೋವಿಡ್-19 ವೈರಸ್ ದೃಢವಾಗಿದೆ.
ಇನ್ನೂ ಬಳ್ಳಾರಿ ಜಿಲ್ಲೆಯ ಮಲಪನಗುಡಿಯಿಂದ ಹುಲಗಿಗೆ ಜೂನ್ 14 ರಂದು ಆಗಮಿಸಿದ್ದ ಹುಲಗಿಯ 65 ವರ್ಷದ ವ್ಯಕ್ತಿಗೆ, ಜೂನ್ 12 ರಂದು ಜಿಂದಾಲ್ ನಿಂದ ಬಂದಿದ್ದ ಹೊಸಲಿಂಗಾಪುರ ಗ್ರಾಮದ 38 ವರ್ಷದ ವ್ಯಕ್ತಿಗೆ ಹಾಗೂ ಜೂನ್ 16 ರಂದು ಬೆಂಗಳೂರಿನಿಂದ ಬಂದಿದ್ದ ಕುಕನೂರಿನ ಕಕ್ಕಿಹಾಳ ಗ್ರಾಮದ 14 ವರ್ಷದ ಬಾಲಕನಿಗೆ ಸೋಂಕು ತಾಗಿರುವುದು ದೃಢಪಟ್ಟಿದೆ.
ಇನ್ನು ಜಿಲ್ಲೆಯಲ್ಲಿ ಪತ್ತೆಯಾಗಿದ ಆರು ಜನ ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಜಿಲ್ಲಾಡಳಿತ ಪತ್ತೆ ಮಾಡುತ್ತಿದೆ ಎಂದು ಡಿಸಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.
ಒಟ್ಟಾರೆ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 28ಕ್ಕೇರಿದೆ. ಇದರಲ್ಲಿ 11 ಜನ ಗುಣಮುಖರಾಗಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಉಳಿದವರು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ