ಭಾರತದಲ್ಲಿ 2022ರವರೆಗೂ ಜನಸಾಮಾನ್ಯರಿಗೆ ಕೋವಿಡ್ ಲಸಿಕೆ ಸಿಗುವುದು ಅನುಮಾನ!
Team Udayavani, Nov 8, 2020, 12:36 PM IST
ಹೊಸದಿಲ್ಲಿ: ಭಾರತದಲ್ಲಿ ಉಚಿತ ಕೋವಿಡ್ ಲಸಿಕೆ ನೀಡುವ ಬಗ್ಗೆ ರಾಜಕೀಯ ಪ್ರೇರಿತ ಚರ್ಚೆಗಳು ನಡೆಯುತ್ತಿರುವ ಸಮಯದಲ್ಲಿ ರಾಷ್ಟ್ರೀಯ ಕಾರ್ಯಪಡೆ ಸದಸ್ಯರೂ ಆಗಿರುವ ಏಮ್ಸ್ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಅವರು ದೊಡ್ಡ ಸುದ್ದಿಯೊಂದನ್ನು ನೀಡಿದ್ದಾರೆ. ಸಾಮಾನ್ಯ ಜನರು ಕೋವಿಡ್ ಲಸಿಕೆಯನ್ನು ಪಡೆಯಲು 2022ರವರೆಗೆ ಕಾಯಲೇಬೇಕಾಗುತ್ತದೆ ಎಂದಿದ್ದಾರೆ.
ಸಿಎನ್ಎನ್-ನ್ಯೂಸ್ 18 ಗೆ ನೀಡಿದ ಸಂದರ್ಶನದಲ್ಲಿ ರಂದೀಪ್ ಗುಲೇರಿಯಾ ಈ ಮಾಹಿತಿಯನ್ನು ನೀಡಿದ್ದಾರೆ. ದೇಶದಲ್ಲಿ ಸಾಮಾನ್ಯ ಜನರಿಗೆ ಕೋವಿಡ್ ಲಸಿಕೆ ಸುಲಭದಲ್ಲಿ ಸಿಗುವಂತಾಗಲು ಒಂದು ವರ್ಷಕ್ಕಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.
“ನಮ್ಮ ದೇಶದಲ್ಲಿ ಜನಸಂಖ್ಯೆ ದೊಡ್ಡದಾಗಿದೆ; ಫ್ಲೂ ಲಸಿಕೆಯಂತೆ ಕೋವಿಡ್ ಲಸಿಕೆಯನ್ನು ಮಾರುಕಟ್ಟೆಯಿಂದ ಹೇಗೆ ಖರೀದಿಸಬಹುದು ಮತ್ತು ಅದನ್ನು ತೆಗೆದುಕೊಳ್ಳಬಹುದು ಎಂಬುದನ್ನು ನೋಡಲು ನಮಗೆ ಸಮಯ ಬೇಕು ಎಂದು ರಂದೀಪ್ ಗುಲೇರಿಯಾ ಹೇಳಿದ್ದಾರೆ.
ಇದನ್ನೂ ಓದಿ:ತಮಿಳುನಾಡು: ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಜ್ಜು
ಲಸಿಕೆ ಲಭ್ಯವಾದ ನಂತರ ಭಾರತಕ್ಕೆ ಎದುರಾಗುವ ಸವಾಲುಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಶೀತಲೀಕರಣ ವ್ಯವಸ್ಥೆಯನ್ನು ಕಾಪಾಡಿಕೊಳ್ಳುವುದು, ಸಾಕಷ್ಟು ಸಿರಿಂಜ್ ಗಳು, ಸಾಕಷ್ಟು ಸೂಜಿಗಳೊಂದಿಗೆ ಲಸಿಕೆಯನ್ನು ದೇಶದ ದೂರದೂರಿಗೆ ತಡೆರಹಿತ ರೀತಿಯಲ್ಲಿ ತಲುಪಿಸಲು ಸಾಧ್ಯವಾಗುವುದು ದೊಡ್ಡ ಸವಾಲಾಗಿದೆ” ಎಂದು ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ