ಕೋವಿಡ್ 19 ಲಾಕ್ ಡೌನ್: ನಿವೃತ್ತಿ ವೇತನ ಕಡಿತಗೊಳಿಸಲ್ಲ, ಊಹಾಪೋಹ ನಂಬಬೇಡಿ: ವಿತ್ತ ಸಚಿವಾಲಯ
ನಿವೃತ್ತಿ ವೇತನದಲ್ಲಿ ಶೇ.20ರಷ್ಟು ಸಂಬಳವನ್ನು ಕಡಿತಗೊಳಿಸಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ ಎಂಬ ಸುದ್ದಿ ಸುಳ್ಳು.
Team Udayavani, Apr 19, 2020, 2:53 PM IST
ನವದೆಹಲಿ:ಕೋವಿಡ್ 19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಮುಂದುವರಿದಿದ್ದು, ಏತನ್ಮಧ್ಯೆ ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವೇತನ(ಪಿಂಚಣಿ)ವನ್ನು ಕಡಿತಗೊಳಿಸುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಭಾನುವಾರ ಸ್ಪಷ್ಟಪಡಿಸಿದೆ.
ಕೇಂದ್ರ ಸರ್ಕಾರಿ ನೌಕರರ ಪಿಂಚಣಿಯನ್ನು ಕಡಿತಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂಬ ವರದಿಯ ಹಿನ್ನೆಲೆಯಲ್ಲಿ ಇಂದು ಸಚಿವಾಲಯ ಸ್ಪಷ್ಟನೆ ನೀಡಿರುವುದಾಗಿ ತಿಳಿಸಿದೆ.
ಕೇಂದ್ರ ಸರ್ಕಾರಿ ಉದ್ಯೋಗಿಗಳ ನಿವೃತ್ತಿ ವೇತನದಲ್ಲಿ ಶೇ.20ರಷ್ಟು ಸಂಬಳವನ್ನು ಕಡಿತಗೊಳಿಸಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ ಎಂಬ ಸುದ್ದಿ ಸುಳ್ಳು. ನಿವೃತ್ತ ಉದ್ಯೋಗಿಗಳ ಪಿಂಚಣಿ ಕಡಿತ ಮಾಡುವ ಯಾವುದೇ ಪ್ರಸ್ತಾಪ ನಮ್ಮ ಮುಂದೆ ಇಲ್ಲ. ಸರ್ಕಾರದ ಸೂಚನೆಯಂತೆ ಸಂಬಳ ಮತ್ತು ಪಿಂಚಣಿಗೆ ಯಾವುದೇ ರೀತಿಯ ತೊಂದರೆ ಉಂಟಾಗುವುದಿಲ್ಲ ಎಂದು ಸಚಿವಾಲಯ ಟ್ವೀಟ್ ನಲ್ಲಿ ಹೇಳಿದೆ.
ವಿತ್ತ ಸಚಿವಾಲಯದ ಟ್ವೀಟ್ ಅನ್ನು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೂಡಲೇ ಶೇರ್ ಮಾಡಿದ್ದರು. ಕೋವಿಡ್ 19 ಸೋಂಕು ಹಿನ್ನೆಲೆಯಲ್ಲಿ ಘೋಷಿಸಿರುವ ಲಾಕ್ ಡೌನ್ ನಿಂದಾಗಿ ಆರ್ಥಿಕ ಪರಿಸ್ಥಿತಿ ಹದಗೆಡುತ್ತಿದ್ದು, ನಿವೃತ್ತಿ ವೇತನ ನಿಲ್ಲಿಸುತ್ತಾರೆ, ಶೇ.20ರಷ್ಟು ಕಡಿತಗೊಳಿಸುತ್ತಾರೆ ಎಂಬ ಸುದ್ದಿ ಹಬ್ಬಿರುವುದರಿಂದ ನಿವೃತ್ತ ನೌಕರರು ಚಿಂತೆಗೀಡಾಗಿದ್ದರು. ಆದರೆ ಇಂತಹ ಊಹಾಪೋಹದ ಸುದ್ದಿಯನ್ನು ನಂಬಬೇಡಿ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ
Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?
Odisha: ಗೋಪಾಲ್ ಪುರ್ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ
Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?
MUST WATCH
ಹೊಸ ಸೇರ್ಪಡೆ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್