ಹೊಸ ವರ್ಷದ ಸಂಭ್ರಮದಲ್ಲೇ ಜಾಗತಿಕ ಭೀತಿ ಹೆಚ್ಚಿಸಿದ ಕೋವಿಡ್‌ – ಓಮಿಕ್ರಾನ್‌

ಇನ್ನೊಂದೆಡೆ ಫ್ರಾನ್ಸ್‌ನಲ್ಲಿ ಒಂದೇ ದಿನ ಅತಿಹೆಚ್ಚು ಓಮಿಕ್ರಾನ್‌ ಪ್ರಕರಣ  ವರದಿಯಾಗಿದೆ.

Team Udayavani, Dec 29, 2021, 1:30 PM IST

covid-19

ಬೆಂಗಳೂರು :ಕಳೆದೆರಡು ವರ್ಷಗಳಿಂದ ಕೋವಿಡ್‌, ಲಾಕ್‌ಡೌನ್‌, ಆರ್ಥಿಕ ಹಿಂಜರಿತದಿಂದ ನರಳುತ್ತಿದ್ದ ಜಗತ್ತಿಗೆ ಈಗ ಕೋವಿಡ್‌ ಹೊಸ ತಳಿ ಓಮಿಕ್ರಾನ್‌ ಭೀತಿ ನಿಚ್ಚಳವಾಗಿದ್ದು, ಯುರೋಪ್‌ ಹಾಗೂ ಅಮೆರಿಕಾದಲ್ಲಿ ಪ್ರಕರಣಗಳ ಸಂಖ್ಯೆ ಆತಂಕ ಹುಟ್ಟಿಸುವ ರೀತಿ ಏರಿಕೆಯಾಗುತ್ತಿದೆ.

ಇನ್ನೊಂದೆಡೆ ವಿಶ್ವದ ದೊಡ್ಡಣ್ಣ ಅಮೆರಿಕಾ ಕೋವಿಡ್‌ ಮಾರ್ಗದರ್ಶಿ ಸೂತ್ರಗಳಲ್ಲಿ ಪದೇ ಪದೇ ಬದಲಾವಣೆ ಮಾಡುತ್ತಿರುವುದು ಅಲ್ಲಿನ ನಾಗರಿಕರಲ್ಲಿ ಆಕ್ರೋಶ ಸೃಷ್ಟಿಸಿದೆ. 10 ದಿನಗಳಷ್ಟಿದ್ದ ಕೋವಿಡ್‌ ಕ್ವಾರಂಟೈನ್‌ ಅವಧಿಯನ್ನು ಅಮೆರಿಕಾದ ಜೋ ಬಿಡನ್‌ ಸರಕಾರ ಇದ್ದಕ್ಕಿದ್ದಂತೆ ಐದು ದಿನಗಳಿಗೆ ಇಳಿಕೆ ಮಾಡಿದೆ. ಈ ಬಗ್ಗೆ ಅಮೆರಿಕಾದ ಆರೋಗ್ಯ ತಜ್ಞರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಓಮಿಕ್ರಾನ್‌ ಪ್ರಕರಣ ಹೆಚ್ಚುತ್ತಿರುವಾಗ ಸರಕಾರದ ಇಂಥ “ಕಣ್ಣಾಮುಚ್ಚಾಲೆʼʼ ಆಟದ ಬಗ್ಗೆ ಸಾರ್ವಜನಿಕ ಟೀಕೆ ವ್ಯಕ್ತವಾಗತೊಡಗಿದೆ.

ಇನ್ನೊಂದೆಡೆ ಫ್ರಾನ್ಸ್‌ನಲ್ಲಿ ಒಂದೇ ದಿನ ಅತಿಹೆಚ್ಚು ಓಮಿಕ್ರಾನ್‌ ಪ್ರಕರಣ  ವರದಿಯಾಗಿದೆ. ಇದು ಯುರೋಪ್‌ನಲ್ಲೇ ದಾಖಲೆಯ ಸೋಂಕಿನ ಪ್ರಮಾಣವಾಗಿದೆ. 24 ಗಂಟೆಗಳ ಅವಧಿಯಲ್ಲಿ 1,79,807  ಪ್ರಕರಣ ವರದಿಯಾಗಿರುವುದು ಫ್ರಾನ್ಸ್‌ ಸರಕಾರವನ್ನು ಆತಂಕಕ್ಕೆ ದೂಡಿದೆ. ಇಟಲಿ, ಗ್ರೀಸ್‌, ಜರ್ಮನಿ, ಪೋರ್ತುಗಲ್‌ ನಲ್ಲೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.

ಆತಂಕದ ದಿನಕ್ಕೆ ಕಾಯಬೇಕಿದೆ : ಈ ಮಧ್ಯೆ ಹೇಳಿಕೆ ಬಿಡುಗಡೆ ಮಾಡಿರುವ ಫ್ರೆಂಚ್‌ ಹಾಸ್ಪಿಟಲ್‌ ಫೆಡರೇಶನ್‌ “ಭವಿಷ್ಯದಲ್ಲಿ ಇನ್ನೂ ಕಠಿಣ ಹಾಗೂ ಆತಂಕದ ದಿನಗಳನ್ನು ನಾವು ಎದುರು ನೋಡಬೇಕಿದೆʼʼ ಎಂದು ಎಚ್ಚರಿಕೆ ನೀಡಿದ್ದರೆ, ಜನವರಿ ಅಂತ್ಯದ ವೇಳೆಗೆ ಪ್ರತಿ ದಿನ 2.5 ಲಕ್ಷ ಪ್ರಕರಣಗಳು ದಾಖಲಾಗಬಹುದು ಎಂದು ಫ್ರಾನ್ಸ್‌ ಆರೋಗ್ಯ ಸಚಿವರು ಕಳವಳ ವ್ಯಕ್ತಪಡಿಸಿದ್ದಾರೆ.

ಬ್ರಿಟನ್‌ನಲ್ಲಿ ಮಂಗಳವಾರ 1.29 ಲಕ್ಷ ಹೊಸ ಪ್ರಕರಣ ದಾಖಲಾಗಿದೆ. ದೇಶದಲ್ಲಿ ಹೊಸದಾಗಿ ಯಾವುದೇ ನಿಯಂತ್ರಣ ಹೇರುವುದಿಲ್ಲ ಎಂದು ಬ್ರಿಟಿಷ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಹೇಳಿಕೆ ನೀಡಿದ ಬೆನ್ನಲ್ಲೇ ಓಮಿಕ್ರಾನ್‌ ಅಟ್ಟಹಾಸ ಹೆಚ್ಚಳವಾಗಿದೆ. ಹೊಸ ವರ್ಷಾಚರಣೆಯನ್ನು ಎಚ್ಚರಿಕೆಯಿಂದ ನಡೆಸುವಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.

ಭಾರತದ ಸ್ಥಿತಿ ಏನು ? :ಭಾರತದಲ್ಲಿ ಓಮಿಕ್ರಾನ್‌ ಭೀತಿ ಹಿನ್ನೆಲೆಯಲ್ಲಿ 11 ರಾಜ್ಯಗಳಲ್ಲಿ ಈಗಾಗಲೇ ನೈಟ್‌ ಕರ್ಪ್ಯೂ ವಿಧಿಸಲಾಗಿದೆ. ಕಳೆದ 24 ಗಂಟೆಯ ಅವಧಿಯಲ್ಲಿ 9,195 ಹೊಸ ಪ್ರಕರಣಗಳು ದೇಶಾದ್ಯಂತ ವರದಿಯಾಗಿದೆ. ಕೇರಳ, ಮಹಾರಾಷ್ಟ್ರ, ಪಶ್ಚಿಮ ಬಂಗಾಲ, ದಿಲ್ಲಿ ಹಾಗೂ ತಮಿಳುನಾಡಿನಲ್ಲಿ ಹೆಚ್ಚು ಪ್ರಕರಣ ವರದಿಯಾಗಿದ್ದು 778 ಓಮಿಕ್ರಾನ್‌ ಪ್ರಕರಣ ದೃಢಪಟ್ಟಿದೆ. ಈ ಪ್ರಕರಣದಲ್ಲೂ ದಿಲ್ಲಿ ಮೊದಲ ಸ್ಥಾನದಲ್ಲಿದೆ.

ಮೂರನೇ ಅಲೆ ಎಂದ ನಿತೀಶ್‌ :ಈ ಮಧ್ಯೆ ಬಿಹಾರ್‌ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ತಮ್ಮ ರಾಜ್ಯದಲ್ಲಿ ಕೋವಿಡ್‌ ಮೂರನೇ ಅಲೆ ಈಗಾಗಲೇ ಆರಂಭವಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಬಿಹಾರದಲ್ಲಿ ಒಂದೇ ದಿನ 47 ಪ್ರಕರಣ ದಾಖಲಾಗಿದೆ. ಆದರೆ ಹೊಸ ಮಾರ್ಗದರ್ಶಿ ಸೂತ್ರ ಸದ್ಯಕ್ಕೆ ಜಾರಿ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.