ಬೀದರ್ ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ


Team Udayavani, Apr 20, 2020, 9:02 PM IST

ಬೀದರ್ ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೀದರ್: ರಾಜ್ಯದಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳಲ್ಲಿ ಹಾಟ್‌ ಸ್ಪಾಟ್ ಜಿಲ್ಲೆಗಳ ಪಟ್ಟಿಯಲ್ಲಿರುವ ಬೀದರ್ ನಲ್ಲಿ ಸೋಮವಾರ ಮತ್ತೊಂದು ಪಾಸಿಟಿವ್ ಪ್ರಕರಣ ವರದಿಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಇದೀಗ ಸೋಂಕಿತರ ಸಂಖ್ಯೆ ಈಗ 15ಕ್ಕೆ ಏರಿಕೆಯಾಗಿದೆ.

ಜಿಲ್ಲಾಡಳಿತದ ಕಟ್ಟುನಿಟ್ಟಿನ ಕ್ರಮದ ನಡುವೆಯೂ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ಕಳೆದ ಎರಡು ದಿನಗಳಲ್ಲಿ ಯಾವುದೇ ಪಾಸಿಟಿವ್ ಪ್ರಕರಣಗಳು ಕಂಡು ಬಾರದಿದ್ದರಿಂದ ಸ್ಥಳೀಯರು ಕೊಂಚ ನಿರಾಳರಾಗಿದ್ದರು. ಆದರೆ, ಸೋಮವಾರ ಮತ್ತೊಂದು ಹೊಸ ಕೇಸ್ ದಾಖಲಾಗಿರುವುದು ಜನರನ್ನು ಆತಂಕಕ್ಕೆ ತಳ್ಳಿದಂತಾಗಿದೆ.

117ನೇ ರೋಗಿಯ ಸಂಪರ್ಕಕ್ಕೆ ಬಂದಿರುವ 28 ವಯಸ್ಸಿನ ಯುವಕನಲ್ಲಿ ಸೋಂಕು ಇರುವುದು ದೃಢವಾಗಿದ್ದು, ಬ್ರಿಮ್ಸ್ ಐಸೋಲೇಶನ್ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಜಿಲ್ಲೆಯಲ್ಲಿ ಹನ್ನೇರಡು ದಿನಗಳ ಹಿಂದೆ ಏಕಕಾಲಕ್ಕೆ 10 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದರೆ ಕಳೆದ ಶನಿವಾರ ಬೀದರ್ ನ ಓಲ್ಡ್ ಸಿಟಿಯ 50 ವಯಸ್ಸಿನ ಮಹಿಳೆಯಲ್ಲಿ ಸೋಂಕು ಇರುವುದು ದೃಢವಾಗಿತ್ತು.

ನಂತರ ಜಮಾತ್‌ನಿಂದ ಆಗಮಿಸಿದ್ದ ಓಲ್ಡ್ ಸಿಟಿಯ 122ನೇ ರೋಗಿಯ ಮಗಳು ಮತ್ತು ಆತನ ಸಹೋದರನ ಮಗಳಲ್ಲಿ ಸೋಂಕು ಇರುವುದು ಧೃಡಪಟ್ಟಿತ್ತು. ಇದಾದ ಬಳಿಕ ಶುಕ್ರವಾರ ದೆಹಲಿಯ ಜಮಾತ್‌ನಿಂದ ವಾಪಸ್ಸಾದವರ ಸಂಪರ್ಕಕ್ಕೆ ಬಂದಿದ್ದ ಯುವಕನಲ್ಲಿ ವೈರಸ್ ಕಂಡು ಬಂದಿತ್ತು. ಈಗ ಮತ್ತೊಬ್ಬ ಯುವಕನಲ್ಲಿ ಸೋಕು ಕಾಣಿಸಿಕೊಂಡಿದೆ.

ಅತಿ ಹೆಚ್ಚು ಪಾಸಿಟಿವ್ ಹೊಂದಿರುವ ಜಿಲ್ಲೆಗಳಲ್ಲಿ ಒಂದಾಗಿರುವ ಬೀದರ್ ಸಹ ಹಾಟ್‌ಸ್ಪಾಟ್ ಪಟ್ಟಿಯಲ್ಲಿ ಸೇರುತ್ತಿದ್ದಂತೆ ಜಿಲ್ಲಾಡಳಿತ ಲಾಕ್‌ ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿದೆ. ಸೋಂಕಿತರ ಪ್ರದೇಶಗಳಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ, ಸೋಂಕಿತರ ಸಂಪರ್ಕಿತರನ್ನು ಸಮರ್ಪಕ ಕ್ವಾರಂಟೈನ್ ವ್ಯವಸ್ಥೆಗೆ ಒತ್ತು ನೀಡಿದೆ.

ಇಂಥ ಬಿಗಿ ಕ್ರಮಗಳ ಮಧ್ಯಯೂ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆಯ ಹೆಚ್ಚುತ್ತಿರುವುದು ಜಿಲ್ಲಾಡಳಿತಕ್ಕೆ ತಲೆ ನೋವಾಗಿ ಪರಿಣಮಿಸಿದೆ. ಇನ್ನು 365 ಜನರ ಸ್ಯಾಂಪಲ್ ಪರೀಕ್ಷೆ ವರದಿ ಬರಬೇಕಿದ್ದು, ಇವುಗಳಲ್ಲಿಯೂ ಇನ್ನಷ್ಟು ಪಾಸಿಟಿವ್ ಪ್ರಕರಣಗಳು ಹೆಚ್ಚುವ ಸಾಧ್ಯತೆಗಳ ಬಗ್ಗೆ ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ.

50 ಜನ ಕೋವಿಡ್ ಶಂಕಿತರ ಬಿಡುಗಡೆ
ಕೋವಿಡ್ ಪಾಸಿಟಿವ್ ಸೋಂಕಿತರ ಸಂಪರ್ಕಕ್ಕೆ ಬಂದಿದ್ದ ಶಂಕೆಯ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಹಿನ್ ಸಂಸ್ಥೆಯ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದ್ದ 193 ಜನರ ಪೈಕಿ 50 ಜನರ ವರದಿ ನೆಗೆಟಿವ್ ಬಂದಿದ್ದು, ಅವರನ್ನು ಸೋಮವಾರ ಬಿಡುಗಡೆ ಮಾಡಲಾಗಿದೆ.

ಭಾಗ್ಯ ನಗರದ ಹೊರವಲಯದ ಶಾಹಿನ್ ಕ್ವಾರಂಟೈನ್‌ನಲ್ಲಿ 193 ಶಂಕಿತ ಸೋಂಕಿತರನ್ನು ಇಟ್ಟು ಅವರ ರಕ್ತ ಹಾಗೂ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇವರಲ್ಲಿ ಸದ್ಯ 50 ಜನರ ವರದಿ ನೆಗೆಟಿವ್ ಬಂದ್ ಹಿನ್ನೆಲೆ ಅವರನ್ನು ಬಿಡುಗಡೆ ಮಾಡಲಾಗಿದೆ.

ಓಲ್ಡ್ ಸಿಟಿ, ಸಿಂಗರ್ ಬಾಗ್ ಭಾಗದ ಮಕ್ಕಳು, ಮಹಿಳೆಯರು, ಪುರುಷರು ಕ್ವಾರಂಟೈನ್‌ಲ್ಲಿದ್ದರು. ಶಾಹಿನ್ ಕಾಲೇಜಿನಿಂದ ಶಾಲಾ ವಾಹನದಲ್ಲೇ ಅವರವರ ಮನೆಗಳಿಗೆ ವಾಪಸಾಗಿದ್ದು, ಈ ವೇಳೆ ಬಡಾವಣೆ ನಿವಾಸಿಗರು ಚಪ್ಪಾಳೆ ತಟ್ಟುವ ಮೂಲಕ ಅವರನ್ನು ಸ್ವಾಗತಿಸಿದರು.

1204 ಜನರ ವರದಿ ಬಾಕಿ
ಜಿಲ್ಲಾ ಆರೋಗ್ಯ ಇಲಾಖೆಯ ಸರ್ವೇಕ್ಷಣಾ ಘಟಕ ಮಿಡಿಯಾ ಬುಲೇಟಿನ್ ಬಿಡುಗಡೆ ಮಾಡಿದ್ದು, ಸೋಮವಾರ ಸಂಜೆವರೆಗೆ ಜಿಲ್ಲೆಯಲ್ಲಿ 1976 ಜನರ ರಕ್ತ ಮತ್ತು ಗಂಟಲು ದ್ರವದ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ 15 ಪಾಸಿಟಿವ್ ಬಂದಿದ್ದರೆ 757 ನೆಗೆಟಿವ್ ಬಂದಿದೆ. ಇನ್ನುಳಿದ 1204 ಮಂದಿಯ ವರದಿ ಇನ್ನೂ ಬರಬೇಕಿದೆ.

ಸೋಂಕಿತರ 553 ಪ್ರಥಮ ಸಂಪರ್ಕಿತ ಮತ್ತು 1229 ದ್ವಿತೀಯ ಸಂಪರ್ಕಿತರನ್ನು ಈಗಾಗಲೇ ಗುರುತಿಸಲಾಗಿದ್ದು ಇವರಲ್ಲಿ ಮೂವರಲ್ಲಿ ಜ್ವರದ ಲಕ್ಷಣ ಇರುವುದು ಮನೆಗಳ ಸಮೀಕ್ಷೆ ವೇಳೆ ತಿಳಿದು ಬಂದಿದೆ.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.