ರಾಜ್ಯದಲ್ಲಿ ಒಟ್ಟು 1,395 ಸೋಂಕಿತರಲ್ಲಿ 543 ಮಂದಿ ಗುಣಮುಖ

ಬಾಕಿ 811 ಮಂದಿ ಸೋಂಕಿತರಿಗೆ ಆಯಾ ಜಿಲ್ಲೆಗಳಲ್ಲಿ ಮುಂದುವರಿದ ಚಿಕಿತ್ಸೆ

Team Udayavani, May 20, 2020, 6:25 AM IST

ರಾಜ್ಯದಲ್ಲಿ ಒಟ್ಟು 1,395 ಸೋಂಕಿತರಲ್ಲಿ 543 ಮಂದಿ ಗುಣಮುಖ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ರಾಜ್ಯದ ವಿವಿಧೆಡೆ ಮಂಗಳವಾರ 13 ಮಂದಿ ಕೋವಿಡ್ ವೈರಸ್‌ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಈ ಮೂಲಕ ಒಟ್ಟಾರೆ 1,395 ಸೋಂಕು ಪ್ರಕರಣಗಳ ಪೈಕಿ 543 ಮಂದಿ ಗುಣಮುಖರಾಗಿದ್ದು, ಬಾಕಿ 811 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಂಕಿತರ ಪೈಕಿ ಬೀದರ್‌ನಲ್ಲಿ ಏಳು ಮಂದಿ, ಕಲಬುರಗಿ, ಬೆಳಗಾವಿಯಲ್ಲಿ ತಲಾ ಇಬ್ಬರು, ಉತ್ತರ ಕನ್ನಡ, ಬೆಂಗಳೂರಿನಲ್ಲಿ ತಲಾ ಒಬ್ಬರು ಗುಣಮುಖರಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ ಹೊರತುಪಡಿಸಿ ಎಲ್ಲ ಜಿಲ್ಲೆಗಳಲ್ಲಿಯೂ ಸೋಂಕಿತರಿದ್ದು, ಆಯಾ ಜಿಲ್ಲೆಗಳ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚೆಗೆ ಹೃದ್ರೋಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬಳ್ಳಾರಿ ಜಿಲ್ಲೆಯಲ್ಲಿ 61 ವರ್ಷದ ವೃದ್ಧನಲ್ಲಿ ಸೋಂಕು ಪತ್ತೆಯಾಗಿತ್ತು. ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದಾರೆ. ಸೋಮವಾರ ವಿಜಯಪುರದಲ್ಲಿ ಮೃತಪಟ್ಟಿದ್ದ 65 ವರ್ಷದ ವೃದ್ಧನಿಗೂ ಮತ್ತು ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ 54 ವರ್ಷದ ವೃದ್ಧನಿಗೂ ಸೋಂಕು ತಗುಲಿರುವುದು ಪರೀಕ್ಷೆಯಿಂದ ದೃಢಪಟ್ಟಿದೆ.
40 ಪ್ರಕರಣಗಳಲ್ಲಿ ಸೋಂಕಿತರು ಚಿಕಿತ್ಸೆ ಫ‌ಲಕಾರಿಯಾಗದೆ, ಒಂದು ಪ್ರಕರಣದಲ್ಲಿ ಸೋಂಕಿತ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಮಂಗಳವಾರ ಜಿಲ್ಲಾವಾರು ಸೋಂಕಿತರು/ ಹಿನ್ನೆಲೆ
– ಮಂಡ್ಯ – 71. ಎಲ್ಲ ಮುಂಬಯಿ ಪ್ರಯಾಣ ಹಿನ್ನೆಲೆ.
– ದಾವಣಗೆರೆ – 22. ಸೋಂಕಿತರ ಸಂಪರ್ಕದಿಂದ 15 ಮಂದಿಗೆ, ಗುಜರಾತ್‌ ತಬ್ಲಿಘಿ ಜಮಾತ್‌ ಇಬ್ಬರಿಗೆ, ಅಂತರ್‌ ಜಿಲ್ಲಾ ಪ್ರಯಾಣ ಹಿನ್ನೆಲೆ ಇಬ್ಬರಿಗೆ, ಕೇರಳ ಒಬ್ಬರಿಗೆ, ನಗರದ ಕಂಟೈನ್ಮೆಂಟ್‌ ಪ್ರದೇಶ ಸಂಪರ್ಕ ಹಿನ್ನೆಲೆ ಇಬ್ಬರಿಗೆ.
– ಕಲಬುರಗಿ – 13. ಎಲ್ಲರೂ ಮುಂಬಯಿ ಪ್ರಯಾಣ ಹಿನ್ನೆಲೆ.
– ಶಿವಮೊಗ್ಗ – 10. ಮುಂಬಯಿ ಪ್ರಯಾಣ ಹಿನ್ನೆಲೆ ಐವರು, ಆಂಧ್ರ ಪ್ರಯಾಣ ಹಿನ್ನೆಲೆ ಒಬ್ಬ, ಕೇರಳ ಪ್ರಯಾಣ ಹಿನ್ನೆಲೆ ಇಬ್ಬರು, ಮತ್ತಿಬ್ಬರ ಸಂಪರ್ಕ ಹಿನ್ನೆಲೆ ಪತ್ತೆಯಾಗಿಲ್ಲ.
– ಬೆಂಗಳೂರು – 6. ಸೋಂಕಿತರ ಸಂಪರ್ಕದಿಂದ ಮೂವರಿಗೆ, ಕಂಟೈನ್ಮೆಂಟ್‌ ಹಿನ್ನೆಲೆ ಒಬ್ಬರಿಗೆ , ಐಎಲ್‌ಐ ಹಿನ್ನೆಲೆ ಒಬ್ಬರು, ಒಬ್ಬರ ಸಂಪರ್ಕ ಹಿನ್ನೆಲೆ ಪತ್ತೆಯಾಗಿಲ್ಲ.
– ಬಾಗಲಕೋಟೆ – 5. ಸೋಂಕಿತರ ಸಂಪರ್ಕದಿಂದ ನಾಲ್ಕು ಮಂದಿ, ಕೊಲ್ಲಾಪುರ ಪ್ರಯಾಣ ಹಿನ್ನೆಲೆ ಒಬ್ಬರು.
– ಚಿಕ್ಕಮಗಳೂರು- 5. ಮುಂಬಯಿ ಪ್ರಯಾಣ ಹಿನ್ನೆಲೆ ಮೂವರು, ಮತ್ತಿಬ್ಬರ ಸಂಪರ್ಕ ಹಿನ್ನೆಲೆ ಪತ್ತೆಯಾಗಿಲ್ಲ.
– ಉತ್ತರ ಕನ್ನಡ – 4. ಮಹಾರಾಷ್ಟ್ರ ಪ್ರಯಾಣ ಹಿನ್ನೆಲೆ ಇಬ್ಬರು, ಗುಜರಾತ್‌ ಹಾಗೂ ತಮಿಳುನಾಡು ಪ್ರಯಾಣ ಹಿನ್ನೆಲೆ ತಲಾ ಒಬ್ಬರು.
– ಉಡುಪಿ – 4. ಮುಂಬಯಿ ಪ್ರಯಾಣ ಹಿನ್ನೆಲೆ.
– ಹಾಸನ – 3. ಎಲ್ಲರೂ ಮುಂಬಯಿ ಪ್ರಯಾಣ ಹಿನ್ನೆಲೆ.
– ವಿಜಯಪುರ – 1. ಕಂಟೈನ್ಮೆಂಟ್‌ ಝೋನ್‌ ಸಂಪರ್ಕದಿಂದ.
– ಬೀದರ್‌ – 1. ಸೋಂಕಿತರ ಸಂಪರ್ಕದಿಂದ.
– ಯಾದಗಿರಿ – 1. ಮುಂಬಯಿ ಪ್ರಯಾಣ ಹಿನ್ನೆಲೆ.
– ಗದಗ- 1. ಮುಂಬಯಿ ಪ್ರಯಾಣ ಹಿನ್ನೆಲೆ.
– ಚಿತ್ರದುರ್ಗ-1. ತೀವ್ರ ಉಸಿರಾಟ ಹಿನ್ನೆಲೆ.
– ರಾಯಚೂರು -1. ಸೊಲ್ಲಾಪುರ ಪ್ರಯಾಣ ಹಿನ್ನೆಲೆ.

ರಾಜ್ಯದ ಶೇ. 6.09 ಹಾಸಿಗೆಗಳು ಭರ್ತಿ
ಕೋವಿಡ್ ಸೋಂಕು ಚಿಕಿತ್ಸೆ ನೀಡಲು ರಾಜ್ಯದಲ್ಲಿ 14 ಸಾವಿರಕ್ಕೂ ಹೆಚ್ಚು ಹಾಸಿಗೆಗಳನ್ನು ಮೀಸಲಿಟ್ಟಿದ್ದು, ಈ ಪೈಕಿ ಶೇ. 6.09ರಷ್ಟು ಹಾಸಿಗೆಗಳು ಮಾತ್ರ ಭರ್ತಿಯಾಗಿವೆ. ಹೀಗಾಗಿ ಸೋಂಕಿತರಿಗೆ ಆಸ್ಪತ್ರೆಯಲ್ಲಿ ಹಾಸಿಗೆ ಕೊರತೆ ಎದುರಾಗುವುದಿಲ್ಲ.

ಅಂತೆಯೇ 28 ಸರಕಾರಿ ಮತ್ತು 18 ಖಾಸಗಿ ಪ್ರಯೋಗಾಲಯಗಳು ಕಾರ್ಯ ನಿರ್ವಹಿಸುತ್ತಿದ್ದು, ನಿತ್ಯ ಆರು ಸಾವಿರಕ್ಕೂ ಹೆಚ್ಚು ಮಂದಿ ಸೋಂಕು ಪರೀಕ್ಷೆ ನಡೆಸಲಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.